Homeಮುಖಪುಟಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

ಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

- Advertisement -
ಆಂಧ್ರಪ್ರದೇಶದಲ್ಲಿ 2023ರ ಅಕ್ಟೋಬರ್ 29ರಂದು 14 ಪ್ರಯಾಣಿಕರ ಸಾವಿಗೆ ಕಾರಣವಾದ ಎರಡು ಪ್ಯಾಸೆಂಜರ್ ರೈಲುಗಳ ಅಪಘಾತಕ್ಕೆ ಇದೀಗ ಕಾರಣ ಬಯಲಾಗಿದ್ದು, ಪ್ಯಾಸೆಂಜರ್ ರೈಲುವೊಂದರ ಲೊಕೊ ಪೈಲಟ್ ಫೋನ್‌ನಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಯನ್ನು ನೀಡಿದ್ದು, “ಇತ್ತೀಚೆಗೆ ಸಂಭವಿಸಿದ ಆಂಧ್ರ ರೈಲು ದುರಂತದಲ್ಲಿ ಲೊಕೊ ಪೈಲಟ್ ಮತ್ತು ಸಹ ಪೈಲಟ್ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದರು. ಇಂಥ ಪ್ರಕರಣಗಳನ್ನು ಪತ್ತೆ ಮಾಡುವ ವ್ಯವಸ್ಥೆಯನ್ನು ನಾವು ಇದೀಗ ಅಳವಡಿಸುತ್ತಿದ್ದೇವೆ. ಈ ಮೂಲಕ ಲೋಕೊ ಪೈಲಟ್ ಹಾಗೂ ಸಹ ಪೈಲಟ್‍ಗಳು ರೈಲು ಚಲನೆ ಬಗ್ಗೆ ಗಮನ ಹರಿಸುವಂತೆ ಮಾಡುತ್ತಿದ್ದೇವೆ ಎಂದು  ಭಾರತೀಯ ರೈಲ್ವೇಯ ಹೊಸ ಸುರಕ್ಷತಾ ಕ್ರಮಗಳ ಬಗ್ಗೆ ಮಾತನಾಡುವಾಗ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿಯಲ್ಲಿ ಹೌರಾ-ಚೆನ್ನೈ ಮಾರ್ಗದಲ್ಲಿ 2023ರ ಅಕ್ಟೋಬರ್ 29ರಂದು ಸಂಜೆ 7 ಗಂಟೆಗೆ ರಾಯಗಢ ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ ಪಲಾಸ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು.

ನಾವು ಸುರಕ್ಷತೆಯತ್ತ ಗಮನ ಹರಿಸುವುದನ್ನು ಮುಂದುವರಿಸುತ್ತೇವೆ. ಪ್ರತಿ ಘಟನೆಯ ಮೂಲ ಕಾರಣವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತೇವೆ ಮತ್ತು ಅದು ಪುನರಾವರ್ತನೆಯಾಗದಂತೆ ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆಗೆ ಹೊಸ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರಿಂದ ಚಾಲಕ ಮತ್ತು ಸಹಾಯಕ ಚಾಲಕ ರೈಲಿನ ಚಲನೆಯ ಬಗ್ಗೆ ನಿಗಾವಹಿಸುತ್ತಿದ್ದಾರಾ ಎಂಬುದನ್ನು ತಿಳಿಯಲು ಸಾಧ್ಯವಿದೆ ಎಂದರು.

ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ನಡೆಸಿದ ತನಿಖಾ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಬೇಕಾಗಿದ್ದರೂ, ಅಪಘಾತದ ಒಂದು ದಿನದ ನಂತರ ಪ್ರಾಥಮಿಕ ರೈಲ್ವೇ ತನಿಖೆಯು ಡಿಕ್ಕಿಗೆ ರಾಯಗಡ ಪ್ಯಾಸೆಂಜರ್ ರೈಲಿನ ಚಾಲಕ ಮತ್ತು ಸಹಾಯಕ ಚಾಲಕನನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಸಿಬ್ಬಂದಿಗಳು ಕೂಡ ಸಾವನ್ನಪ್ಪಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ವಿಶಾಖಪಟ್ಟಣ–ಪಲಾಸ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ಮೊದಲು ಹೇಳಿದ್ದರು. ಇದೀಗ ಭೀಕರ ರೈಲು ದುರಂತಕ್ಕೆ ಕಾರಣ ಬಯಲಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಆದಿವಾಸಿಗಳ ನಿರ್ಮೂಲನೆಯಾಗಲಿದೆ: ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...