Homeಮುಖಪುಟಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

ಮೊಬೈಲ್‌ನಲ್ಲಿ ಕ್ರಿಕೆಟ್‌ ವೀಕ್ಷಿಸುತ್ತಿದ್ದ ಲೊಕೊ ಪೈಲಟ್: ಆಂಧ್ರ ರೈಲು ದುರಂತದ ಕಾರಣ ಬಯಲು

- Advertisement -
ಆಂಧ್ರಪ್ರದೇಶದಲ್ಲಿ 2023ರ ಅಕ್ಟೋಬರ್ 29ರಂದು 14 ಪ್ರಯಾಣಿಕರ ಸಾವಿಗೆ ಕಾರಣವಾದ ಎರಡು ಪ್ಯಾಸೆಂಜರ್ ರೈಲುಗಳ ಅಪಘಾತಕ್ಕೆ ಇದೀಗ ಕಾರಣ ಬಯಲಾಗಿದ್ದು, ಪ್ಯಾಸೆಂಜರ್ ರೈಲುವೊಂದರ ಲೊಕೊ ಪೈಲಟ್ ಫೋನ್‌ನಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿಯನ್ನು ನೀಡಿದ್ದು, “ಇತ್ತೀಚೆಗೆ ಸಂಭವಿಸಿದ ಆಂಧ್ರ ರೈಲು ದುರಂತದಲ್ಲಿ ಲೊಕೊ ಪೈಲಟ್ ಮತ್ತು ಸಹ ಪೈಲಟ್ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದ್ದರು. ಇಂಥ ಪ್ರಕರಣಗಳನ್ನು ಪತ್ತೆ ಮಾಡುವ ವ್ಯವಸ್ಥೆಯನ್ನು ನಾವು ಇದೀಗ ಅಳವಡಿಸುತ್ತಿದ್ದೇವೆ. ಈ ಮೂಲಕ ಲೋಕೊ ಪೈಲಟ್ ಹಾಗೂ ಸಹ ಪೈಲಟ್‍ಗಳು ರೈಲು ಚಲನೆ ಬಗ್ಗೆ ಗಮನ ಹರಿಸುವಂತೆ ಮಾಡುತ್ತಿದ್ದೇವೆ ಎಂದು  ಭಾರತೀಯ ರೈಲ್ವೇಯ ಹೊಸ ಸುರಕ್ಷತಾ ಕ್ರಮಗಳ ಬಗ್ಗೆ ಮಾತನಾಡುವಾಗ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿಯಲ್ಲಿ ಹೌರಾ-ಚೆನ್ನೈ ಮಾರ್ಗದಲ್ಲಿ 2023ರ ಅಕ್ಟೋಬರ್ 29ರಂದು ಸಂಜೆ 7 ಗಂಟೆಗೆ ರಾಯಗಢ ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂ ಪಲಾಸ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು.

ನಾವು ಸುರಕ್ಷತೆಯತ್ತ ಗಮನ ಹರಿಸುವುದನ್ನು ಮುಂದುವರಿಸುತ್ತೇವೆ. ಪ್ರತಿ ಘಟನೆಯ ಮೂಲ ಕಾರಣವನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತೇವೆ ಮತ್ತು ಅದು ಪುನರಾವರ್ತನೆಯಾಗದಂತೆ ನಾವು ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಅಪಘಾತದ ಬಳಿಕ ಪ್ರಯಾಣಿಕರ ಸುರಕ್ಷತೆಗೆ ಹೊಸ ವ್ಯವಸ್ಥೆಯನ್ನು ಅಳವಡಿಸಿದ್ದು, ಇದರಿಂದ ಚಾಲಕ ಮತ್ತು ಸಹಾಯಕ ಚಾಲಕ ರೈಲಿನ ಚಲನೆಯ ಬಗ್ಗೆ ನಿಗಾವಹಿಸುತ್ತಿದ್ದಾರಾ ಎಂಬುದನ್ನು ತಿಳಿಯಲು ಸಾಧ್ಯವಿದೆ ಎಂದರು.

ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ನಡೆಸಿದ ತನಿಖಾ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಬೇಕಾಗಿದ್ದರೂ, ಅಪಘಾತದ ಒಂದು ದಿನದ ನಂತರ ಪ್ರಾಥಮಿಕ ರೈಲ್ವೇ ತನಿಖೆಯು ಡಿಕ್ಕಿಗೆ ರಾಯಗಡ ಪ್ಯಾಸೆಂಜರ್ ರೈಲಿನ ಚಾಲಕ ಮತ್ತು ಸಹಾಯಕ ಚಾಲಕನನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಸಿಬ್ಬಂದಿಗಳು ಕೂಡ ಸಾವನ್ನಪ್ಪಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ವಿಶಾಖಪಟ್ಟಣ–ಪಲಾಸ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್‌ ಕೋಸ್ಟ್‌ ರೈಲ್ವೆ ಅಧಿಕಾರಿಗಳು ಮೊದಲು ಹೇಳಿದ್ದರು. ಇದೀಗ ಭೀಕರ ರೈಲು ದುರಂತಕ್ಕೆ ಕಾರಣ ಬಯಲಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಆದಿವಾಸಿಗಳ ನಿರ್ಮೂಲನೆಯಾಗಲಿದೆ: ಜಾರ್ಖಂಡ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...