Homeಮುಖಪುಟಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

- Advertisement -
- Advertisement -

ಆಂಧ್ರಪ್ರದೇಶದ ಎಸ್‌.ವಿ.ವೆಟರ್ನರಿ ವಿಶ್ವವಿದ್ಯಾಲಯದ ಡೈರಿ ಟೆಕ್ನಾಲಜಿ ಕಾಲೇಜಿನಲ್ಲಿ ದಲಿತ ಸಹಾಯಕ ಪ್ರಾಧ್ಯಾಪಕ ಡಾ. ರವಿ ಅವರ ಕಚೇರಿಯಿಂದ ಪ್ರಾಚಾರ್ಯರು ಕುರ್ಚಿಯನ್ನು ತೆಗೆದುಹಾಕಿದ ಘಟನೆ ವರದಿಯಾಗಿದೆ. ಇದರ ಪರಿಣಾಮವಾಗಿ ಪ್ರಾಧ್ಯಾಪಕರು ನೆಲದ ಮೇಲೆ ಕುಳಿತು ಕೆಲಸ ಮಾಡುವಂತಾಗಿದ್ದು,   ಇದು ಜಾತಿ ತಾರತಮ್ಯದ ಪ್ರಕರಣ ಎಂದು ಹಲವರು ಆರೋಪಿಸಿದ್ದಾರೆ.

ಕಳೆದ ಗುರುವಾರ (ಜೂ.19) ಕಾಲೇಜಿನಿಂದ ರಜೆ ತೆಗೆದುಕೊಂಡಿದ್ದ ಡಾ.ರವಿಯವರು ಶುಕ್ರವಾರ ಕಾಲೇಜಿಗೆ ಮರಳಿ ಬಂದಾಗ ತಮ್ಮ ಕೊಠಡಿಯಲ್ಲಿ ಕುರ್ಚಿ ಇಲ್ಲದಿರುವುದು ಕಂಡುಬಂದಿತ್ತು. ಅಸೋಸಿಯೇಟ್ ಡೀನ್ ರವೀಂದ್ರ ರೆಡ್ಡಿ ಅವರು ಕೊಠಡಿಯನ್ನು ಪರೀಕ್ಷಿಸಲು ಬಂದಿದ್ದಾಗ ಡಾ.ರವಿಯವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯನ್ನು ತೆಗೆಸಿಹಾಕಿಸಿದ್ದರು.

ವೈರಲ್ ಆಗಿರುವ ಚಿತ್ರಗಳಲ್ಲಿ ಡಾ.ರವಿ ತಮ್ಮ ಕಚೇರಿ ಅಥವಾ ಕೊಠಡಿಯೊಳಗಿನ ನೆಲದ ಮೇಲೆ ಬಿಳಿ ಬಟ್ಟೆಯೊಂದರ ಮೇಲೆ ಕುಳಿತಿರುವುದು ಕಾಣಿಸುತ್ತದೆ. ಇದು ಅವರ ಪ್ರತಿಭಟನೆಯ ಸಂಕೇತವಾಗಿದೆ. ಅವರ ಮುಂದೆ ಕಂಪ್ಯೂಟರ್ ಮಾನಿಟರ್, ಕೀಬೋರ್ಡ್ ಮತ್ತು ಸಿಪಿಯು ಇವೆ. ಕಂಪ್ಯೂಟರ್ ಗೆ ಸಂಬಂಧಿಸಿದ ವೈರ್‌ಗಳು ಸಹ ನೆಲದ ಮೇಲೆ ಹರಡಿಕೊಂಡಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಈ ಚಿತ್ರಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಅನೇಕರು ಈ ಘಟನೆಯನ್ನು “ಹಾಸ್ಯಾಸ್ಪದ” ಮತ್ತು “ಅಸಹ್ಯಕರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಡೀನ್ ನಾಗೇಶ್ವರ ರಾವ್ ಅವರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ. ಡಿಬಿಎಂ ವಿಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಎರಡು ಕುರ್ಚಿಗಳನ್ನು ಖರೀದಿಸಲಾಗಿತ್ತು ಮತ್ತು ಅವುಗಳಲ್ಲಿ ಒಂದು ಡೈರಿ ಟೆಕ್ನಾಲಜಿ ವಿಭಾಗದಲ್ಲಿ ಕಂಡುಬಂದಿದ್ದರಿಂದ ಅದನ್ನು ಬದಲಾಯಿಸಲಾಯಿತು ಎಂದು ತಿಳಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಈ ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತಗೆದುಕೊಂಡಿದೆ. ದಲಿತ ಸಹಾಯಕ ಪ್ರಾಧ್ಯಾಪಕರ ಮೇಲೆ ಇಂತಹ ಅವಮಾನ ನಡೆಯುತ್ತಿದ್ದರೂ, ಮುಖ್ಯಮಂತ್ರಿ ನಾಯ್ಡು ಅವರು ಯಾವುದೇ ಕ್ರಮ ಕೈಗೊಳ್ಳದೆ ಏಕೆ ಮೌನ ವಹಿಸಿದ್ದಾರೆ ಎಂದು ಅದು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದ ಅನೇಕ ಬಳಕೆದಾರರು ಈ ಘಟನೆಯನ್ನು ಖಂಡಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಜಾತಿ ತಾರತಮ್ಯವು ಇನ್ನೂ ಆಳವಾಗಿ ಬೇರೂರಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಅದು ಹೇಳಿದೆ. ಕೆಲವು ಪಕ್ಷದವರು ಮೀಸಲಾತಿಯನ್ನು ತೆಗೆದುಹಾಕಲು ಬಯಸುತ್ತಿದ್ದರೂ, ಜಾತಿ ತಾರತಮ್ಯವನ್ನು ತೊಡೆದುಹಾಕಲು ಏನೂ ಕ್ರಮಕೈಗೊಳ್ಳುತ್ತಿಲ್ಲ ಎಂದು ವೈಎಸ್ಆರ್ ಪಕ್ಷವು ಆರೋಪಿಸಿದೆ.

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...