Homeಮುಖಪುಟಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

- Advertisement -
- Advertisement -

ಆಂಧ್ರಪ್ರದೇಶದ ಎಸ್‌.ವಿ.ವೆಟರ್ನರಿ ವಿಶ್ವವಿದ್ಯಾಲಯದ ಡೈರಿ ಟೆಕ್ನಾಲಜಿ ಕಾಲೇಜಿನಲ್ಲಿ ದಲಿತ ಸಹಾಯಕ ಪ್ರಾಧ್ಯಾಪಕ ಡಾ. ರವಿ ಅವರ ಕಚೇರಿಯಿಂದ ಪ್ರಾಚಾರ್ಯರು ಕುರ್ಚಿಯನ್ನು ತೆಗೆದುಹಾಕಿದ ಘಟನೆ ವರದಿಯಾಗಿದೆ. ಇದರ ಪರಿಣಾಮವಾಗಿ ಪ್ರಾಧ್ಯಾಪಕರು ನೆಲದ ಮೇಲೆ ಕುಳಿತು ಕೆಲಸ ಮಾಡುವಂತಾಗಿದ್ದು,   ಇದು ಜಾತಿ ತಾರತಮ್ಯದ ಪ್ರಕರಣ ಎಂದು ಹಲವರು ಆರೋಪಿಸಿದ್ದಾರೆ.

ಕಳೆದ ಗುರುವಾರ (ಜೂ.19) ಕಾಲೇಜಿನಿಂದ ರಜೆ ತೆಗೆದುಕೊಂಡಿದ್ದ ಡಾ.ರವಿಯವರು ಶುಕ್ರವಾರ ಕಾಲೇಜಿಗೆ ಮರಳಿ ಬಂದಾಗ ತಮ್ಮ ಕೊಠಡಿಯಲ್ಲಿ ಕುರ್ಚಿ ಇಲ್ಲದಿರುವುದು ಕಂಡುಬಂದಿತ್ತು. ಅಸೋಸಿಯೇಟ್ ಡೀನ್ ರವೀಂದ್ರ ರೆಡ್ಡಿ ಅವರು ಕೊಠಡಿಯನ್ನು ಪರೀಕ್ಷಿಸಲು ಬಂದಿದ್ದಾಗ ಡಾ.ರವಿಯವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯನ್ನು ತೆಗೆಸಿಹಾಕಿಸಿದ್ದರು.

ವೈರಲ್ ಆಗಿರುವ ಚಿತ್ರಗಳಲ್ಲಿ ಡಾ.ರವಿ ತಮ್ಮ ಕಚೇರಿ ಅಥವಾ ಕೊಠಡಿಯೊಳಗಿನ ನೆಲದ ಮೇಲೆ ಬಿಳಿ ಬಟ್ಟೆಯೊಂದರ ಮೇಲೆ ಕುಳಿತಿರುವುದು ಕಾಣಿಸುತ್ತದೆ. ಇದು ಅವರ ಪ್ರತಿಭಟನೆಯ ಸಂಕೇತವಾಗಿದೆ. ಅವರ ಮುಂದೆ ಕಂಪ್ಯೂಟರ್ ಮಾನಿಟರ್, ಕೀಬೋರ್ಡ್ ಮತ್ತು ಸಿಪಿಯು ಇವೆ. ಕಂಪ್ಯೂಟರ್ ಗೆ ಸಂಬಂಧಿಸಿದ ವೈರ್‌ಗಳು ಸಹ ನೆಲದ ಮೇಲೆ ಹರಡಿಕೊಂಡಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಈ ಚಿತ್ರಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಅನೇಕರು ಈ ಘಟನೆಯನ್ನು “ಹಾಸ್ಯಾಸ್ಪದ” ಮತ್ತು “ಅಸಹ್ಯಕರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಡೀನ್ ನಾಗೇಶ್ವರ ರಾವ್ ಅವರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ. ಡಿಬಿಎಂ ವಿಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಎರಡು ಕುರ್ಚಿಗಳನ್ನು ಖರೀದಿಸಲಾಗಿತ್ತು ಮತ್ತು ಅವುಗಳಲ್ಲಿ ಒಂದು ಡೈರಿ ಟೆಕ್ನಾಲಜಿ ವಿಭಾಗದಲ್ಲಿ ಕಂಡುಬಂದಿದ್ದರಿಂದ ಅದನ್ನು ಬದಲಾಯಿಸಲಾಯಿತು ಎಂದು ತಿಳಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಈ ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತಗೆದುಕೊಂಡಿದೆ. ದಲಿತ ಸಹಾಯಕ ಪ್ರಾಧ್ಯಾಪಕರ ಮೇಲೆ ಇಂತಹ ಅವಮಾನ ನಡೆಯುತ್ತಿದ್ದರೂ, ಮುಖ್ಯಮಂತ್ರಿ ನಾಯ್ಡು ಅವರು ಯಾವುದೇ ಕ್ರಮ ಕೈಗೊಳ್ಳದೆ ಏಕೆ ಮೌನ ವಹಿಸಿದ್ದಾರೆ ಎಂದು ಅದು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದ ಅನೇಕ ಬಳಕೆದಾರರು ಈ ಘಟನೆಯನ್ನು ಖಂಡಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಜಾತಿ ತಾರತಮ್ಯವು ಇನ್ನೂ ಆಳವಾಗಿ ಬೇರೂರಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಅದು ಹೇಳಿದೆ. ಕೆಲವು ಪಕ್ಷದವರು ಮೀಸಲಾತಿಯನ್ನು ತೆಗೆದುಹಾಕಲು ಬಯಸುತ್ತಿದ್ದರೂ, ಜಾತಿ ತಾರತಮ್ಯವನ್ನು ತೊಡೆದುಹಾಕಲು ಏನೂ ಕ್ರಮಕೈಗೊಳ್ಳುತ್ತಿಲ್ಲ ಎಂದು ವೈಎಸ್ಆರ್ ಪಕ್ಷವು ಆರೋಪಿಸಿದೆ.

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...