Homeಮುಖಪುಟಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

- Advertisement -
- Advertisement -

ಆಂಧ್ರಪ್ರದೇಶದ ಎಸ್‌.ವಿ.ವೆಟರ್ನರಿ ವಿಶ್ವವಿದ್ಯಾಲಯದ ಡೈರಿ ಟೆಕ್ನಾಲಜಿ ಕಾಲೇಜಿನಲ್ಲಿ ದಲಿತ ಸಹಾಯಕ ಪ್ರಾಧ್ಯಾಪಕ ಡಾ. ರವಿ ಅವರ ಕಚೇರಿಯಿಂದ ಪ್ರಾಚಾರ್ಯರು ಕುರ್ಚಿಯನ್ನು ತೆಗೆದುಹಾಕಿದ ಘಟನೆ ವರದಿಯಾಗಿದೆ. ಇದರ ಪರಿಣಾಮವಾಗಿ ಪ್ರಾಧ್ಯಾಪಕರು ನೆಲದ ಮೇಲೆ ಕುಳಿತು ಕೆಲಸ ಮಾಡುವಂತಾಗಿದ್ದು,   ಇದು ಜಾತಿ ತಾರತಮ್ಯದ ಪ್ರಕರಣ ಎಂದು ಹಲವರು ಆರೋಪಿಸಿದ್ದಾರೆ.

ಕಳೆದ ಗುರುವಾರ (ಜೂ.19) ಕಾಲೇಜಿನಿಂದ ರಜೆ ತೆಗೆದುಕೊಂಡಿದ್ದ ಡಾ.ರವಿಯವರು ಶುಕ್ರವಾರ ಕಾಲೇಜಿಗೆ ಮರಳಿ ಬಂದಾಗ ತಮ್ಮ ಕೊಠಡಿಯಲ್ಲಿ ಕುರ್ಚಿ ಇಲ್ಲದಿರುವುದು ಕಂಡುಬಂದಿತ್ತು. ಅಸೋಸಿಯೇಟ್ ಡೀನ್ ರವೀಂದ್ರ ರೆಡ್ಡಿ ಅವರು ಕೊಠಡಿಯನ್ನು ಪರೀಕ್ಷಿಸಲು ಬಂದಿದ್ದಾಗ ಡಾ.ರವಿಯವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯನ್ನು ತೆಗೆಸಿಹಾಕಿಸಿದ್ದರು.

ವೈರಲ್ ಆಗಿರುವ ಚಿತ್ರಗಳಲ್ಲಿ ಡಾ.ರವಿ ತಮ್ಮ ಕಚೇರಿ ಅಥವಾ ಕೊಠಡಿಯೊಳಗಿನ ನೆಲದ ಮೇಲೆ ಬಿಳಿ ಬಟ್ಟೆಯೊಂದರ ಮೇಲೆ ಕುಳಿತಿರುವುದು ಕಾಣಿಸುತ್ತದೆ. ಇದು ಅವರ ಪ್ರತಿಭಟನೆಯ ಸಂಕೇತವಾಗಿದೆ. ಅವರ ಮುಂದೆ ಕಂಪ್ಯೂಟರ್ ಮಾನಿಟರ್, ಕೀಬೋರ್ಡ್ ಮತ್ತು ಸಿಪಿಯು ಇವೆ. ಕಂಪ್ಯೂಟರ್ ಗೆ ಸಂಬಂಧಿಸಿದ ವೈರ್‌ಗಳು ಸಹ ನೆಲದ ಮೇಲೆ ಹರಡಿಕೊಂಡಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಈ ಚಿತ್ರಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಅನೇಕರು ಈ ಘಟನೆಯನ್ನು “ಹಾಸ್ಯಾಸ್ಪದ” ಮತ್ತು “ಅಸಹ್ಯಕರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಡೀನ್ ನಾಗೇಶ್ವರ ರಾವ್ ಅವರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ. ಡಿಬಿಎಂ ವಿಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಎರಡು ಕುರ್ಚಿಗಳನ್ನು ಖರೀದಿಸಲಾಗಿತ್ತು ಮತ್ತು ಅವುಗಳಲ್ಲಿ ಒಂದು ಡೈರಿ ಟೆಕ್ನಾಲಜಿ ವಿಭಾಗದಲ್ಲಿ ಕಂಡುಬಂದಿದ್ದರಿಂದ ಅದನ್ನು ಬದಲಾಯಿಸಲಾಯಿತು ಎಂದು ತಿಳಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಈ ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತಗೆದುಕೊಂಡಿದೆ. ದಲಿತ ಸಹಾಯಕ ಪ್ರಾಧ್ಯಾಪಕರ ಮೇಲೆ ಇಂತಹ ಅವಮಾನ ನಡೆಯುತ್ತಿದ್ದರೂ, ಮುಖ್ಯಮಂತ್ರಿ ನಾಯ್ಡು ಅವರು ಯಾವುದೇ ಕ್ರಮ ಕೈಗೊಳ್ಳದೆ ಏಕೆ ಮೌನ ವಹಿಸಿದ್ದಾರೆ ಎಂದು ಅದು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದ ಅನೇಕ ಬಳಕೆದಾರರು ಈ ಘಟನೆಯನ್ನು ಖಂಡಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಜಾತಿ ತಾರತಮ್ಯವು ಇನ್ನೂ ಆಳವಾಗಿ ಬೇರೂರಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಅದು ಹೇಳಿದೆ. ಕೆಲವು ಪಕ್ಷದವರು ಮೀಸಲಾತಿಯನ್ನು ತೆಗೆದುಹಾಕಲು ಬಯಸುತ್ತಿದ್ದರೂ, ಜಾತಿ ತಾರತಮ್ಯವನ್ನು ತೊಡೆದುಹಾಕಲು ಏನೂ ಕ್ರಮಕೈಗೊಳ್ಳುತ್ತಿಲ್ಲ ಎಂದು ವೈಎಸ್ಆರ್ ಪಕ್ಷವು ಆರೋಪಿಸಿದೆ.

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...