Homeಮುಖಪುಟವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕನ ವಿರುದ್ಧ ದೌರ್ಜನ್ಯ ಆರೋಪಿಸಿ ಪತ್ರಕರ್ತ ಆತ್ಮಹತ್ಯೆ

ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕನ ವಿರುದ್ಧ ದೌರ್ಜನ್ಯ ಆರೋಪಿಸಿ ಪತ್ರಕರ್ತ ಆತ್ಮಹತ್ಯೆ

- Advertisement -
- Advertisement -

ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕನ ವಿರುದ್ಧ ದೌರ್ಜನ್ಯ ಆರೋಪ ಮಾಡಿ ಪತ್ರಕರ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಮೃತನ ಕುಟುಂಬಸ್ಥರು ನ್ಯಾಯಕ್ಕೆ ಆಗ್ರಹಿಸಿದ್ದಾರೆ.

ಸಾಕ್ಷಿ ಮಾಧ್ಯಮ ತಂಡದಲ್ಲಿ ಕೆಲಸ ಮಾಡುತ್ತಿದ್ದ ಗುರಿಜಾ ಧಮೋಧರ್ ರಾವ್(42) ಅವರು ಡಿ.28ರಂದು ಗುರುವಾರ ಶ್ರೀಕಾಕುಳಂನ ಲವೆಟಿಪಾಲೆಂನಲ್ಲಿರುವ ಅವರ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವಿಷ ಸೇವಿಸಿ ಪತ್ರಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕವಾಗಿ ಹೇಳಲಾಗಿತ್ತು. ಮೃತದೇಹದ ಬಳಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಶಾಸಕ ಕಿರಣ್ ಕುಮಾರ್ ಮತ್ತು ಲಂಕಾಪಲ್ಲೆ ಗೋಪಿ ಎಂಬವರು  ಆತ್ಮಹತ್ಯೆಗೆ ಕಾರಣ ಎಂದು ಉಲ್ಲೇಖಿಸಲಾಗಿತ್ತು.

ಪೊಲೀಸರ ಪ್ರಕಾರ ಡಿ.26 ರಂದು ಧಮೋಧರ್ ರಾವ್ ನಾಪತ್ತೆಯಾಗಿದ್ದು, ಈ ಬಗ್ಗೆ ರಣಸ್ಥಲಂನ ಜೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. 2 ದಿನಗಳ ಬಳಿಕ ಅವರ ಮೃತದೇಹವು ಅವರ ನಿವಾಸದಿಂದ 2 ಕಿಲೋಮೀಟರ್ ದೂರದಲ್ಲಿರುವ ಜಮೀನಿನಲ್ಲಿ ಪತ್ತೆಯಾಗಿದೆ. ಮೃತದೇಹದ ಬಳಿ ಡೆತ್‌ ನೋಟು ಪತ್ತೆಯಾಗಿದ್ದರೂ ಪೊಲೀಸರು ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಜೆಆರ್ ಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಿ ರಾಜೇಶ್ ಈ ಕುರಿತು ಪ್ರತಿಕ್ರಿಯಿಸಿದ್ದು, ಪತ್ರದಲ್ಲಿನ ಕೈಬರಹವು ಮೃತರದ್ದೇ ಎಂದು ಖಚಿತಪಡಿಸಲು ನಾವು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದೇವೆ. ನಾವು ವರದಿ ಬಂದ ಬಳಿಕ ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಧಮೋಧರ್ ಅವರ ಸಹೋದರ ಶ್ರೀನಿವಾಸ್, ನನ್ನ ಸಹೋದರ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಒಡೆತನದ ಸಾಕ್ಷಿ ಮಾಧ್ಯಮದಲ್ಲಿ ಕೆಲಸ ಮಾಡಿದ್ದಾರೆ. 2019ರ ಚುನಾವಣೆಯ ಸಮಯದಲ್ಲಿ ಧಮೋಧರ್ ಗೊರ್ಲೆ ಕಿರಣ್ ಕುಮಾರ್ ಪರವಾಗಿ ಪ್ರಚಾರ ನಡೆಸಿದ್ದಾನೆ. ಚುನಾವಣೆಯಲ್ಲಿ ಗೊರ್ಲೆ ಕಿರಣ್ ಕುಮಾರ್ ಗೆದ್ದ ನಂತರ ನನ್ನ ಸಹೋದರ ಶಾಸಕ ಮತ್ತು ಆತನ ಆಪ್ತ ಲಂಕೆಲ್ಲಾ ಗೋಪಿಯಿಂದ ತೊಂದರೆ ಅನುಭವಿಸಿದ್ದಾರೆ.  ಶಾಸಕರ ಅಕ್ರಮವನ್ನು ಬಯಲಿಗೆಳೆಯುತ್ತಿದ್ದಂತೆ ನನ್ನ ಸಹೋದರನಿಗೆ ದೌರ್ಜನ್ಯ ನಡೆಸಿದ್ದಾರೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ಶ್ರೀನಿವಾಸು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಕಿರಣ್ ಕುಮಾರ್, ಈ ಕುರಿತ ಸಂಪೂರ್ಣ ತನಿಖೆಗೆ ಪೊಲೀಸರಿಗೆ ಸಹಕರಿಸುತ್ತೇವೆ. ಮೃತರು ವೈಎಸ್‌ಆರ್‌ಸಿಪಿ ಕಾರ್ಯಕರ್ತರಾಗಿದ್ದು, ಅವರ ಸಾವಿನ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಮತ್ತು ಪತ್ರದ ಹಿಂದೆ ಯಾರಿದ್ದಾರೆ ಎಂಬುವುದನ್ನು ಪೊಲೀಸರು ಪತ್ತೆ ಮಾಡಬೇಕು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...