Homeಕರ್ನಾಟಕಪಿಆರ್‌ಸಿ ವಿರುದ್ಧ 28 ಗಂಟೆ ಉಪವಾಸ ಸತ್ಯಾಗ್ರಹ ನಡೆಸಿದ ಶಿಕ್ಷಕ ಅಮಾನತು

ಪಿಆರ್‌ಸಿ ವಿರುದ್ಧ 28 ಗಂಟೆ ಉಪವಾಸ ಸತ್ಯಾಗ್ರಹ ನಡೆಸಿದ ಶಿಕ್ಷಕ ಅಮಾನತು

- Advertisement -
- Advertisement -

ಗ್ರಾಚ್ಯುಟಿ, ಹೆಚ್ಚುವರಿ ಕ್ವಾಂಟಮ್ ಪಿಂಚಣಿ ಮತ್ತು ಕೊಡುಗೆ ಪಿಂಚಣಿ ಯೋಜನೆಗಳನ್ನು ರದ್ದುಗೊಳಿಸುವ ಪಿಆರ್‌ಸಿ (Professional Regulation Commission -ವೃತ್ತಿಪರ ನಿಯಂತ್ರಣ ಆಯೋಗ) ಸಾಧನಾ ಸಮಿತಿಯ ನಿರ್ಧಾರಗಳ ವಿರುದ್ಧ 48 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ ಸರ್ಕಾರಿ ಶಿಕ್ಷಕರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ವರದಿಯಾಗಿದೆ.

ಜಿಲ್ಲೆಯ ನಿಮ್ಮನಪಲ್ಲಿ ಮಂಡಲದ ಬಾಳಿನಾಯನಿಪಲ್ಲಿಯ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರಾಗಿರುವ ವಿಷ್ಣುವರ್ಧನ್ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಂಡಿರುವುದನ್ನು ಶಿಕ್ಷಕ ಸಂಘದ ಮುಖಂಡರು ಖಂಡಿಸಿದ್ದಾರೆ ಹಾಗೂ  ಪ್ರಶ್ನಿಸಿದ್ದಾರೆ.

ಅವರು ತಮ್ಮ ಮುಷ್ಕರದ ಸಮಯದಲ್ಲೂ ತರಗತಿಗಳನ್ನು ತಪ್ಪಿಸಿಲ್ಲ, ಅವರು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಆದರೂ, ಅವರನ್ನು ಅಮಾನತುಗೊಳಿಸಿರುವುದು ಖಂಡನೀಯ ಎಂದು ಶಿಕ್ಷಕರ ಸಂಘ ಹೇಳಿದೆ.

ಹೊಸ ಪಿಆರ್‌ಸಿ ವಿರುದ್ಧ ಸೋಮವಾರ ಮುಂಜಾನೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಶಿಕ್ಷಕ, ಮಂಗಳವಾರ ಸಂಜೆ 4 ಗಂಟೆವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ, ಅವರು ನೀರನ್ನು ಮಾತ್ರ ಸೇವಿಸಿದ್ದರು.

“ಪಿಆರ್‌ಸಿ ಸಾಧನಾ ಸಮಿತಿಯ ಚುಕ್ಕಾಣಿ ಹಿಡಿದಿರುವ ನಾಯಕರಲ್ಲಿ ಬದ್ಧತೆಯ ಕೊರತೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ನಿರ್ಣಾಯಕ ಫಿಟ್‌ಮೆಂಟ್ ಸಮಸ್ಯೆ, ಎಚ್‌ಆರ್‌ಎ, ಗ್ರಾಚ್ಯುಟಿ, ಹೆಚ್ಚುವರಿ ಕ್ವಾಂಟಮ್ ಪಿಂಚಣಿ ಮತ್ತು ಕೊಡುಗೆ ಪಿಂಚಣಿ ಯೋಜನೆಗಳನ್ನು (ಸಿಪಿಎಸ್) ರದ್ದು ಮಾಡಲು ಸಮಿತಿ ಮುಂದಾಗಿದೆ. ಈ ಮೂಲಕ, ಉದ್ಯೋಗಿಗಳ ಪ್ರಮುಖ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ” ಎಂದು ಶಿಕ್ಷಕರ ಸಂಘ ಆರೋಪಿಸಿದೆ.

ನೌಕರರು, ಶಿಕ್ಷಕರು ಮತ್ತು ಪಿಂಚಣಿದಾರರ ಪ್ರಧಾನ ಸಮಸ್ಯೆಗಳ ಬಗ್ಗೆ ಏಕಪಕ್ಷೀಯ ನಿಲುವು ತಳೆಯುವ ಮೂಲಕ ಪಿಆರ್‌ಸಿ ಸಾಧನಾ ಸಮಿತಿಯ ಮುಖಂಡರು ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿರುವ ಆಂಧ್ರಪ್ರದೇಶ ಶಿಕ್ಷಕರ ಸಂಘಟನೆಗಳ ಒಕ್ಕೂಟವು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಪ್ರತಿಭಟನೆಯ ಭಾಗವಾಗಿ ಫೆ.11ರಂದು ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಕ್ಕೂಟದ ಮುಖಂಡರು ಮನವಿ ಪತ್ರ ಸಲ್ಲಿಸಲಿದ್ದಾರೆ. ಫೆ. 12ರಂದು ಬೃಹತ್ ಹೋರಾಟ ನಡೆಯಲಿದೆ. ಪ್ರತಿಭಟನೆಯ ಪೂರ್ವಭಾವಿಯಾಗಿ, ಫೆಬ್ರವರಿ 7 ರಿಂದ ಶಿಕ್ಷಕರು ಕಪ್ಪು ಬ್ಯಾಡ್ಜ್ ಧರಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....