Homeಕರ್ನಾಟಕಪಿಆರ್‌ಸಿ ವಿರುದ್ಧ 28 ಗಂಟೆ ಉಪವಾಸ ಸತ್ಯಾಗ್ರಹ ನಡೆಸಿದ ಶಿಕ್ಷಕ ಅಮಾನತು

ಪಿಆರ್‌ಸಿ ವಿರುದ್ಧ 28 ಗಂಟೆ ಉಪವಾಸ ಸತ್ಯಾಗ್ರಹ ನಡೆಸಿದ ಶಿಕ್ಷಕ ಅಮಾನತು

- Advertisement -
- Advertisement -

ಗ್ರಾಚ್ಯುಟಿ, ಹೆಚ್ಚುವರಿ ಕ್ವಾಂಟಮ್ ಪಿಂಚಣಿ ಮತ್ತು ಕೊಡುಗೆ ಪಿಂಚಣಿ ಯೋಜನೆಗಳನ್ನು ರದ್ದುಗೊಳಿಸುವ ಪಿಆರ್‌ಸಿ (Professional Regulation Commission -ವೃತ್ತಿಪರ ನಿಯಂತ್ರಣ ಆಯೋಗ) ಸಾಧನಾ ಸಮಿತಿಯ ನಿರ್ಧಾರಗಳ ವಿರುದ್ಧ 48 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ ಸರ್ಕಾರಿ ಶಿಕ್ಷಕರನ್ನು ಶಿಕ್ಷಣ ಇಲಾಖೆ ಅಮಾನತು ಮಾಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ವರದಿಯಾಗಿದೆ.

ಜಿಲ್ಲೆಯ ನಿಮ್ಮನಪಲ್ಲಿ ಮಂಡಲದ ಬಾಳಿನಾಯನಿಪಲ್ಲಿಯ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರಾಗಿರುವ ವಿಷ್ಣುವರ್ಧನ್ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಅವರ ವಿರುದ್ಧ ಕ್ರಮ ತೆಗೆದುಕೊಂಡಿರುವುದನ್ನು ಶಿಕ್ಷಕ ಸಂಘದ ಮುಖಂಡರು ಖಂಡಿಸಿದ್ದಾರೆ ಹಾಗೂ  ಪ್ರಶ್ನಿಸಿದ್ದಾರೆ.

ಅವರು ತಮ್ಮ ಮುಷ್ಕರದ ಸಮಯದಲ್ಲೂ ತರಗತಿಗಳನ್ನು ತಪ್ಪಿಸಿಲ್ಲ, ಅವರು ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಆದರೂ, ಅವರನ್ನು ಅಮಾನತುಗೊಳಿಸಿರುವುದು ಖಂಡನೀಯ ಎಂದು ಶಿಕ್ಷಕರ ಸಂಘ ಹೇಳಿದೆ.

ಹೊಸ ಪಿಆರ್‌ಸಿ ವಿರುದ್ಧ ಸೋಮವಾರ ಮುಂಜಾನೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಶಿಕ್ಷಕ, ಮಂಗಳವಾರ ಸಂಜೆ 4 ಗಂಟೆವರೆಗೆ ಉಪವಾಸ ಸತ್ಯಾಗ್ರಹ ಮಾಡಿದ್ದಾರೆ. ಪ್ರತಿಭಟನೆಯ ಸಮಯದಲ್ಲಿ, ಅವರು ನೀರನ್ನು ಮಾತ್ರ ಸೇವಿಸಿದ್ದರು.

“ಪಿಆರ್‌ಸಿ ಸಾಧನಾ ಸಮಿತಿಯ ಚುಕ್ಕಾಣಿ ಹಿಡಿದಿರುವ ನಾಯಕರಲ್ಲಿ ಬದ್ಧತೆಯ ಕೊರತೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ನಿರ್ಣಾಯಕ ಫಿಟ್‌ಮೆಂಟ್ ಸಮಸ್ಯೆ, ಎಚ್‌ಆರ್‌ಎ, ಗ್ರಾಚ್ಯುಟಿ, ಹೆಚ್ಚುವರಿ ಕ್ವಾಂಟಮ್ ಪಿಂಚಣಿ ಮತ್ತು ಕೊಡುಗೆ ಪಿಂಚಣಿ ಯೋಜನೆಗಳನ್ನು (ಸಿಪಿಎಸ್) ರದ್ದು ಮಾಡಲು ಸಮಿತಿ ಮುಂದಾಗಿದೆ. ಈ ಮೂಲಕ, ಉದ್ಯೋಗಿಗಳ ಪ್ರಮುಖ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ” ಎಂದು ಶಿಕ್ಷಕರ ಸಂಘ ಆರೋಪಿಸಿದೆ.

ನೌಕರರು, ಶಿಕ್ಷಕರು ಮತ್ತು ಪಿಂಚಣಿದಾರರ ಪ್ರಧಾನ ಸಮಸ್ಯೆಗಳ ಬಗ್ಗೆ ಏಕಪಕ್ಷೀಯ ನಿಲುವು ತಳೆಯುವ ಮೂಲಕ ಪಿಆರ್‌ಸಿ ಸಾಧನಾ ಸಮಿತಿಯ ಮುಖಂಡರು ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿರುವ ಆಂಧ್ರಪ್ರದೇಶ ಶಿಕ್ಷಕರ ಸಂಘಟನೆಗಳ ಒಕ್ಕೂಟವು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಪ್ರತಿಭಟನೆಯ ಭಾಗವಾಗಿ ಫೆ.11ರಂದು ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಕ್ಕೂಟದ ಮುಖಂಡರು ಮನವಿ ಪತ್ರ ಸಲ್ಲಿಸಲಿದ್ದಾರೆ. ಫೆ. 12ರಂದು ಬೃಹತ್ ಹೋರಾಟ ನಡೆಯಲಿದೆ. ಪ್ರತಿಭಟನೆಯ ಪೂರ್ವಭಾವಿಯಾಗಿ, ಫೆಬ್ರವರಿ 7 ರಿಂದ ಶಿಕ್ಷಕರು ಕಪ್ಪು ಬ್ಯಾಡ್ಜ್ ಧರಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.


ಇದನ್ನೂ ಓದಿರಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....