Homeಮುಖಪುಟಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

- Advertisement -
- Advertisement -

ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏಳು ಮತಗಟ್ಟೆಗಳಲ್ಲಿ ಮಾಚರ್ಲಾ ಕ್ಷೇತ್ರದ ಹಾಲಿ ಶಾಸಕ, ವೈಎಸ್‌ಆರ್‌ಸಿಪಿ ಮುಖಂಡ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡಿದ್ದು, ಶಾಸಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವಿಎಂ ಧ್ವಂಸ ಪ್ರಕರಣದಲ್ಲಿ ಶಾಸಕರನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಸೋಲಿನ ಭೀತಿಯಿಂದ ಶಾಸಕರು ಮತ್ತು ವೈಎಸ್‌ಆರ್‌ಸಿಪಿ ಇಂತಹ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ಹೇಳಿಕೊಂಡಿದೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಾಗ ಈ ಘಟನೆ ನಡೆದಿದೆ. ಹಲವೆಡೆ ಚುನಾವಣೆಯ ದಿನ ಹಿಂಸಾಚಾರ ನಡೆದಿದ್ದು, ಆ ನಂತರವೂ ಅಲ್ಲಲ್ಲಿ ಹಲವೆಡೆ ಅಹಿತಕರ ಘಟನೆ ನಡೆದಿದೆ.

ವೈರಲ್‌ ವಿಡಿಯೋದಲ್ಲಿ ಏನದೆ?

ಶಾಸಕ ರಾಮಕೃಷ್ಣ ರೆಡ್ಡಿ ಪಾಲ್ವಾಯಿ ಗೇಟ್ ಮತಗಟ್ಟೆ ಕೇಂದ್ರಕ್ಕೆ ಹೋಗಿದ್ದು, ಅಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಅವರನ್ನು ಸ್ವಾಗತಿಸಲು ಎದ್ದು ನಿಂತಿದ್ದಾರೆ. ಎಂಎಲ್ಎ ಒಂದು ಮಾತನ್ನೂ ಹೇಳದೆ, ಇವಿಎಂ ಇರಿಸಿರುವ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿದ್ದ ವಿವಿಪ್ಯಾಟ್‌ ಯಂತ್ರವನ್ನು ಎತ್ತಿಕೊಂಡು ನೆಲಕ್ಕೆ ಎಸೆದಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ್ದ ಓರ್ವರು ಶಾಸಕರ ಸಹಾಯಕರಿಗೆ ಹಲ್ಲೆ ನಡೆಸಿದ್ದಾರೆ, ಶಾಸಕರ ಮೇಲೂ ಹಲ್ಲೆಗೆ ಮುಂದಾಗುತ್ತಾರೆ, ಈ ವೇಳೆ ಶಾಸಕರು ಆತನಿಗೆ ಕೈಯ್ಯಲ್ಲೇ ಬೆದರಿಕೆ ಹಾಕಿ ಮತಗಟ್ಟೆಯಿಂದ ನಿರ್ಗಮಿಸುತ್ತಾರೆ. ನಂತರ ಚುನಾವಣಾ ಅಧಿಕಾರಿಯೊಬ್ಬರು ನೆಲದ ಮೇಲೆ ಬಿದ್ದಿರುವ ವಿವಿಪ್ಯಾಟ್‌ನ್ನು ರೆಕಾರ್ಡ್ ಮಾಡಿದ್ದಾರೆ.

ಮಾಚರ್ಲ ಪಲ್ನಾಡು ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ, ಈ ಕ್ಷೇತ್ರದಲ್ಲಿ ಮತದಾನದ ದಿನ ಮತ್ತು ನಂತರ ಹೆಚ್ಚಾಗಿ ಹಿಂಸಾಚಾರ ನಡೆದಿತ್ತು.

ಘಟನೆ ಬಗ್ಗೆ ಟಿಡಿಪಿ  ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವೈಎಸ್‌ಆರ್‌ಸಿಪಿ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮಾಚರ್ಲಾ ಕ್ಷೇತ್ರದ ಪಾಲ್ವಾಯಿ ಗೇಟ್ ಮತದಾನ ಕೇಂದ್ರದಲ್ಲಿ ಇವಿಎಂನ್ನು ಧ್ವಂಸಗೊಳಿಸಿದ್ದಾರೆ. ಚುನಾವಣಾ ಆಯೋಗವು ರಾಮಕೃಷ್ಣ ರೆಡ್ಡಿ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸೋಲಿನ ಭಯದಿಂದ ಇವಿಎಂಗಳನ್ನು ರೆಡ್ಡಿ ಧ್ವಂಸಗೊಳಿಸಿದ್ದಾರೆ. ಜೂನ್ 4ರಂದು ಜನರು ವೈಎಸ್‌ಆರ್‌ಸಿಪಿಯ ಬಣ ರಾಜಕೀಯದ ಬಗ್ಗೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಚರ್ಲಾ ಅಸೆಂಬ್ಲಿ ಕ್ಷೇತ್ರದಲ್ಲಿ ಪಿಎಸ್ ಸಂಖ್ಯೆ 202ರ ಜೊತೆಗೆ 7 ಮತಗಟ್ಟೆ ಕೇಂದ್ರಗಳಲ್ಲಿ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ಚುನಾವಣಾ ಆಯೋಗ(ಇಸಿ) ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಗೆ ಸಂಬಂಧಿಸಿ ತನಿಖೆಗೆ ಪಲ್ನಾಡು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ಮತಗಟ್ಟೆಗಳ ವಿಡಿಯೋ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಪೊಲೀಸರು ಶಾಸಕರನ್ನು ಆರೋಪಿ ಎಂದು ಹೆಸರಿಸಿದ್ದು, ಭವಿಷ್ಯದಲ್ಲಿ ಯಾರೂ ಇಂತಹ ದುಷ್ಕೃತ್ಯಗಳನ್ನು ಎಸಗಲು ಧೈರ್ಯ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನು ಓದಿ: ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...