Homeಮುಖಪುಟಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

- Advertisement -
- Advertisement -

ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏಳು ಮತಗಟ್ಟೆಗಳಲ್ಲಿ ಮಾಚರ್ಲಾ ಕ್ಷೇತ್ರದ ಹಾಲಿ ಶಾಸಕ, ವೈಎಸ್‌ಆರ್‌ಸಿಪಿ ಮುಖಂಡ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡಿದ್ದು, ಶಾಸಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವಿಎಂ ಧ್ವಂಸ ಪ್ರಕರಣದಲ್ಲಿ ಶಾಸಕರನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಸೋಲಿನ ಭೀತಿಯಿಂದ ಶಾಸಕರು ಮತ್ತು ವೈಎಸ್‌ಆರ್‌ಸಿಪಿ ಇಂತಹ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ಹೇಳಿಕೊಂಡಿದೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಾಗ ಈ ಘಟನೆ ನಡೆದಿದೆ. ಹಲವೆಡೆ ಚುನಾವಣೆಯ ದಿನ ಹಿಂಸಾಚಾರ ನಡೆದಿದ್ದು, ಆ ನಂತರವೂ ಅಲ್ಲಲ್ಲಿ ಹಲವೆಡೆ ಅಹಿತಕರ ಘಟನೆ ನಡೆದಿದೆ.

ವೈರಲ್‌ ವಿಡಿಯೋದಲ್ಲಿ ಏನದೆ?

ಶಾಸಕ ರಾಮಕೃಷ್ಣ ರೆಡ್ಡಿ ಪಾಲ್ವಾಯಿ ಗೇಟ್ ಮತಗಟ್ಟೆ ಕೇಂದ್ರಕ್ಕೆ ಹೋಗಿದ್ದು, ಅಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಅವರನ್ನು ಸ್ವಾಗತಿಸಲು ಎದ್ದು ನಿಂತಿದ್ದಾರೆ. ಎಂಎಲ್ಎ ಒಂದು ಮಾತನ್ನೂ ಹೇಳದೆ, ಇವಿಎಂ ಇರಿಸಿರುವ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿದ್ದ ವಿವಿಪ್ಯಾಟ್‌ ಯಂತ್ರವನ್ನು ಎತ್ತಿಕೊಂಡು ನೆಲಕ್ಕೆ ಎಸೆದಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ್ದ ಓರ್ವರು ಶಾಸಕರ ಸಹಾಯಕರಿಗೆ ಹಲ್ಲೆ ನಡೆಸಿದ್ದಾರೆ, ಶಾಸಕರ ಮೇಲೂ ಹಲ್ಲೆಗೆ ಮುಂದಾಗುತ್ತಾರೆ, ಈ ವೇಳೆ ಶಾಸಕರು ಆತನಿಗೆ ಕೈಯ್ಯಲ್ಲೇ ಬೆದರಿಕೆ ಹಾಕಿ ಮತಗಟ್ಟೆಯಿಂದ ನಿರ್ಗಮಿಸುತ್ತಾರೆ. ನಂತರ ಚುನಾವಣಾ ಅಧಿಕಾರಿಯೊಬ್ಬರು ನೆಲದ ಮೇಲೆ ಬಿದ್ದಿರುವ ವಿವಿಪ್ಯಾಟ್‌ನ್ನು ರೆಕಾರ್ಡ್ ಮಾಡಿದ್ದಾರೆ.

ಮಾಚರ್ಲ ಪಲ್ನಾಡು ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ, ಈ ಕ್ಷೇತ್ರದಲ್ಲಿ ಮತದಾನದ ದಿನ ಮತ್ತು ನಂತರ ಹೆಚ್ಚಾಗಿ ಹಿಂಸಾಚಾರ ನಡೆದಿತ್ತು.

ಘಟನೆ ಬಗ್ಗೆ ಟಿಡಿಪಿ  ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವೈಎಸ್‌ಆರ್‌ಸಿಪಿ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮಾಚರ್ಲಾ ಕ್ಷೇತ್ರದ ಪಾಲ್ವಾಯಿ ಗೇಟ್ ಮತದಾನ ಕೇಂದ್ರದಲ್ಲಿ ಇವಿಎಂನ್ನು ಧ್ವಂಸಗೊಳಿಸಿದ್ದಾರೆ. ಚುನಾವಣಾ ಆಯೋಗವು ರಾಮಕೃಷ್ಣ ರೆಡ್ಡಿ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸೋಲಿನ ಭಯದಿಂದ ಇವಿಎಂಗಳನ್ನು ರೆಡ್ಡಿ ಧ್ವಂಸಗೊಳಿಸಿದ್ದಾರೆ. ಜೂನ್ 4ರಂದು ಜನರು ವೈಎಸ್‌ಆರ್‌ಸಿಪಿಯ ಬಣ ರಾಜಕೀಯದ ಬಗ್ಗೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಚರ್ಲಾ ಅಸೆಂಬ್ಲಿ ಕ್ಷೇತ್ರದಲ್ಲಿ ಪಿಎಸ್ ಸಂಖ್ಯೆ 202ರ ಜೊತೆಗೆ 7 ಮತಗಟ್ಟೆ ಕೇಂದ್ರಗಳಲ್ಲಿ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ಚುನಾವಣಾ ಆಯೋಗ(ಇಸಿ) ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಗೆ ಸಂಬಂಧಿಸಿ ತನಿಖೆಗೆ ಪಲ್ನಾಡು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ಮತಗಟ್ಟೆಗಳ ವಿಡಿಯೋ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಪೊಲೀಸರು ಶಾಸಕರನ್ನು ಆರೋಪಿ ಎಂದು ಹೆಸರಿಸಿದ್ದು, ಭವಿಷ್ಯದಲ್ಲಿ ಯಾರೂ ಇಂತಹ ದುಷ್ಕೃತ್ಯಗಳನ್ನು ಎಸಗಲು ಧೈರ್ಯ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನು ಓದಿ: ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...