Homeಮುಖಪುಟಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

ಆಂಧ್ರಪ್ರದೇಶ: 7 ಮತಗಟ್ಟೆಗಳಲ್ಲಿ ಇವಿಎಂ ಧ್ವಂಸ ಮಾಡಿದ ಶಾಸಕ

- Advertisement -
- Advertisement -

ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು ಮತಗಟ್ಟೆಯಲ್ಲಿ ವಿವಿಪ್ಯಾಟ್‌ ಯಂತ್ರವನ್ನು ನೆಲಕ್ಕೆ ಎಸೆದು ಒಡೆದು ಹಾಕಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ. ಇದೇ ರೀತಿ 7 ಮತಗಟ್ಟೆಗಳಲ್ಲಿ ಶಾಸಕ ಇವಿಎಂ ಯಂತ್ರವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಏಳು ಮತಗಟ್ಟೆಗಳಲ್ಲಿ ಮಾಚರ್ಲಾ ಕ್ಷೇತ್ರದ ಹಾಲಿ ಶಾಸಕ, ವೈಎಸ್‌ಆರ್‌ಸಿಪಿ ಮುಖಂಡ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡಿದ್ದು, ಶಾಸಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇವಿಎಂ ಧ್ವಂಸ ಪ್ರಕರಣದಲ್ಲಿ ಶಾಸಕರನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಸೋಲಿನ ಭೀತಿಯಿಂದ ಶಾಸಕರು ಮತ್ತು ವೈಎಸ್‌ಆರ್‌ಸಿಪಿ ಇಂತಹ ವಿಧ್ವಂಸಕ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷ ತೆಲುಗು ದೇಶಂ ಪಕ್ಷ ಹೇಳಿಕೊಂಡಿದೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಲೋಕಸಭಾ ಕ್ಷೇತ್ರಗಳು ಮತ್ತು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಾಗ ಈ ಘಟನೆ ನಡೆದಿದೆ. ಹಲವೆಡೆ ಚುನಾವಣೆಯ ದಿನ ಹಿಂಸಾಚಾರ ನಡೆದಿದ್ದು, ಆ ನಂತರವೂ ಅಲ್ಲಲ್ಲಿ ಹಲವೆಡೆ ಅಹಿತಕರ ಘಟನೆ ನಡೆದಿದೆ.

ವೈರಲ್‌ ವಿಡಿಯೋದಲ್ಲಿ ಏನದೆ?

ಶಾಸಕ ರಾಮಕೃಷ್ಣ ರೆಡ್ಡಿ ಪಾಲ್ವಾಯಿ ಗೇಟ್ ಮತಗಟ್ಟೆ ಕೇಂದ್ರಕ್ಕೆ ಹೋಗಿದ್ದು, ಅಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಅವರನ್ನು ಸ್ವಾಗತಿಸಲು ಎದ್ದು ನಿಂತಿದ್ದಾರೆ. ಎಂಎಲ್ಎ ಒಂದು ಮಾತನ್ನೂ ಹೇಳದೆ, ಇವಿಎಂ ಇರಿಸಿರುವ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿದ್ದ ವಿವಿಪ್ಯಾಟ್‌ ಯಂತ್ರವನ್ನು ಎತ್ತಿಕೊಂಡು ನೆಲಕ್ಕೆ ಎಸೆದಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ್ದ ಓರ್ವರು ಶಾಸಕರ ಸಹಾಯಕರಿಗೆ ಹಲ್ಲೆ ನಡೆಸಿದ್ದಾರೆ, ಶಾಸಕರ ಮೇಲೂ ಹಲ್ಲೆಗೆ ಮುಂದಾಗುತ್ತಾರೆ, ಈ ವೇಳೆ ಶಾಸಕರು ಆತನಿಗೆ ಕೈಯ್ಯಲ್ಲೇ ಬೆದರಿಕೆ ಹಾಕಿ ಮತಗಟ್ಟೆಯಿಂದ ನಿರ್ಗಮಿಸುತ್ತಾರೆ. ನಂತರ ಚುನಾವಣಾ ಅಧಿಕಾರಿಯೊಬ್ಬರು ನೆಲದ ಮೇಲೆ ಬಿದ್ದಿರುವ ವಿವಿಪ್ಯಾಟ್‌ನ್ನು ರೆಕಾರ್ಡ್ ಮಾಡಿದ್ದಾರೆ.

ಮಾಚರ್ಲ ಪಲ್ನಾಡು ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ, ಈ ಕ್ಷೇತ್ರದಲ್ಲಿ ಮತದಾನದ ದಿನ ಮತ್ತು ನಂತರ ಹೆಚ್ಚಾಗಿ ಹಿಂಸಾಚಾರ ನಡೆದಿತ್ತು.

ಘಟನೆ ಬಗ್ಗೆ ಟಿಡಿಪಿ  ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವೈಎಸ್‌ಆರ್‌ಸಿಪಿ ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮಾಚರ್ಲಾ ಕ್ಷೇತ್ರದ ಪಾಲ್ವಾಯಿ ಗೇಟ್ ಮತದಾನ ಕೇಂದ್ರದಲ್ಲಿ ಇವಿಎಂನ್ನು ಧ್ವಂಸಗೊಳಿಸಿದ್ದಾರೆ. ಚುನಾವಣಾ ಆಯೋಗವು ರಾಮಕೃಷ್ಣ ರೆಡ್ಡಿ  ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಸೋಲಿನ ಭಯದಿಂದ ಇವಿಎಂಗಳನ್ನು ರೆಡ್ಡಿ ಧ್ವಂಸಗೊಳಿಸಿದ್ದಾರೆ. ಜೂನ್ 4ರಂದು ಜನರು ವೈಎಸ್‌ಆರ್‌ಸಿಪಿಯ ಬಣ ರಾಜಕೀಯದ ಬಗ್ಗೆ ನಿಜವಾದ ತೀರ್ಪು ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಚರ್ಲಾ ಅಸೆಂಬ್ಲಿ ಕ್ಷೇತ್ರದಲ್ಲಿ ಪಿಎಸ್ ಸಂಖ್ಯೆ 202ರ ಜೊತೆಗೆ 7 ಮತಗಟ್ಟೆ ಕೇಂದ್ರಗಳಲ್ಲಿ ರೆಡ್ಡಿ ಇವಿಎಂಗಳನ್ನು ಧ್ವಂಸ ಮಾಡುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ ಎಂದು ಚುನಾವಣಾ ಆಯೋಗ(ಇಸಿ) ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಗೆ ಸಂಬಂಧಿಸಿ ತನಿಖೆಗೆ ಪಲ್ನಾಡು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ಮತಗಟ್ಟೆಗಳ ವಿಡಿಯೋ ದೃಶ್ಯಾವಳಿಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್ ಕುಮಾರ್ ಅವರಿಗೆ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಪೊಲೀಸರು ಶಾಸಕರನ್ನು ಆರೋಪಿ ಎಂದು ಹೆಸರಿಸಿದ್ದು, ಭವಿಷ್ಯದಲ್ಲಿ ಯಾರೂ ಇಂತಹ ದುಷ್ಕೃತ್ಯಗಳನ್ನು ಎಸಗಲು ಧೈರ್ಯ ಮಾಡಬಾರದು ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನು ಓದಿ: ಉತ್ತರಖಂಡ: ಕುಮಾನ್ ಹಿಮಾಲಯದಲ್ಲಿ 90 ಎಕರೆ ಹೋಟೆಲ್, ಟೌನ್‌ಶಿಪ್ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...