Homeಮುಖಪುಟಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

- Advertisement -
- Advertisement -

ಇಂದು ಸಾಮಾಜಿಕ ಜಾಲತಾಣಗಳಲ್ಲಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್‌ ಆಗುತ್ತಿದೆ. ಅದರೊಟ್ಟಿಗೆ ಮೋದಿಯವರ ಹಳೆಯ ಹೋರಾಟದ ಫೋಟೊಗಳನ್ನು ಹಂಚಿಕೊಂಡು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಹಾಗಾದ್ರೆ ಈ ಆಂದೋಲನ್ ಜೀವಿ ಅಂದ್ರೆ ಏನಂತ ನೋಡೋಣ ಬನ್ನಿ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್‌ ಜೀವಿ ಎಂಬ ಹೊಸ ಅಸ್ತಿತ್ವವು ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ, ವಕೀಲರ ಅಥವಾ ಕಾರ್ಮಿಕರ ಹೋರಾಟದಲ್ಲಿಯೂ ಇರುತ್ತಾರೆ. ಕೆಲವೊಮ್ಮೆ ವೇದಿಕೆಯ ಮುಂದಿದ್ದರೆ ಕೆಲವೊಮ್ಮೆ ಹಿಂದಿದ್ದು ಕೆಲಸ ಮಾಡುತ್ತಾರೆ. ಹೋರಾಟಗಳಿಲ್ಲದೆ ಅವರು ಬದುಕುವುದಿಲ್ಲ. ನಾವು ಅಂತಹ ಜನರನ್ನು ಗುರುತಿಸಬೇಕು ಮತ್ತು ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿಯವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಡಿಪಾರ್ ಜೀವಿಯಾಗುವುದಕ್ಕಿಂತ ಆಂದೋಲನ್ ಜೀವಿಯಾಗುವುದು ಉತ್ತಮ ಎಂದು ಹಲವರು ಹೇಳಿದರೆ, ಮತ್ತೆ ಕೆಲವರು ಮೋದಿಯವರೆ ನೀವು ಸಹ ಹೋರಾಟದ ಮೂಲಕವೇ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮರೆಯಬೇಡಿ ಎಂದು ಛೇಡಿಸಿದ್ದಾರೆ. ಮೋದಿಯವರು ಭಾಗವಹಿಸಿದ ಹೋರಾಟದ ಹಳೆಯ ಫೋಟೊಗಳನ್ನು ಹಾಕಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೋಲ್ ಮಾಡುತ್ತಿದ್ದಾರೆ.

ನಾನು ಕಾಳಜಿವಹಿಸುತ್ತೇನೆ ಹಾಗಾಗಿ ನಾನು ಆಂದೋಲನ್ ಜೀವಿ ಎಂದು ಖ್ಯಾತ ಸಂಗೀತಗಾರ ಟಿ.ಎಂ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಶಾಂತಿಯುತವಾಗಿ ಹೋರಾಟ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಸಂವಿಧಾನದ 19(1)(ಎ) ವಾಕ್ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 19(1)(ಬಿ) ನಿರಾಯುಧವಾಗಿ ಪ್ರತಿಭಟಿಸುವ, ಹರತಾಳ ಆಚರಿಸುವ ಹಕ್ಕು ನೀಡಿದೆ ಎಂದು ಮಂಡೋ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ಮಹಾಡ್ ಸತ್ಯಾಗ್ರಹದ ಮೂಲ ಆಂದೋಲನ್ ಜೀವಿ ಇವರು. ಅಂಬೇಡ್ಕರ್‌ರವರಂತೆ ಆಂದೋಲನ್‌ ಜೀವಿಯಾಗಿ, ಶಿಕ್ಷಣ ಪಡೆಯಿರಿ, ಸಂಘಟಿತರಾಗಿ ಮತ್ತು ಹೋರಾಡಿ” ಎಂದು ಕರೆ ನೀಡಿದ್ದಾರೆ.

ಇವಿಷ್ಟು ನಾವು ಆಂದೋಲನ್ ಜೀವಿಗಳು ಎಂದು ಹೆಮ್ಮೆಯಿಂದ ಹೇಳಿಕೊಂಡರೆ ಇನ್ನು ಕೆಲವರು ಮೋದಿಯವರು ಸಹ ಹೋರಾಟ ಮಾಡಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ತಮ್ಮ ದಾರಿಯನ್ನು ಮರೆತು ಬೇರೆಯವರನ್ನು ಟೀಕಿಸುತ್ತಿದ್ದಾರೆ. ಈ ಇಬ್ಬಂದಿತನವನ್ನು ಖಂಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮೋದಿಯವರ ಹಳೆಯ ಫೋಟೊಗಳನ್ನು ಹಾಕಿ ಟ್ರೋಲ್ ಮಾಡಿದ್ದಾರೆ. ಅಂತಹ ಕೆಲವು ಇಲ್ಲಿವೆ.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...