Homeಮುಖಪುಟಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

- Advertisement -
- Advertisement -

ಇಂದು ಸಾಮಾಜಿಕ ಜಾಲತಾಣಗಳಲ್ಲಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್‌ ಆಗುತ್ತಿದೆ. ಅದರೊಟ್ಟಿಗೆ ಮೋದಿಯವರ ಹಳೆಯ ಹೋರಾಟದ ಫೋಟೊಗಳನ್ನು ಹಂಚಿಕೊಂಡು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಹಾಗಾದ್ರೆ ಈ ಆಂದೋಲನ್ ಜೀವಿ ಅಂದ್ರೆ ಏನಂತ ನೋಡೋಣ ಬನ್ನಿ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್‌ ಜೀವಿ ಎಂಬ ಹೊಸ ಅಸ್ತಿತ್ವವು ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ, ವಕೀಲರ ಅಥವಾ ಕಾರ್ಮಿಕರ ಹೋರಾಟದಲ್ಲಿಯೂ ಇರುತ್ತಾರೆ. ಕೆಲವೊಮ್ಮೆ ವೇದಿಕೆಯ ಮುಂದಿದ್ದರೆ ಕೆಲವೊಮ್ಮೆ ಹಿಂದಿದ್ದು ಕೆಲಸ ಮಾಡುತ್ತಾರೆ. ಹೋರಾಟಗಳಿಲ್ಲದೆ ಅವರು ಬದುಕುವುದಿಲ್ಲ. ನಾವು ಅಂತಹ ಜನರನ್ನು ಗುರುತಿಸಬೇಕು ಮತ್ತು ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿಯವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಡಿಪಾರ್ ಜೀವಿಯಾಗುವುದಕ್ಕಿಂತ ಆಂದೋಲನ್ ಜೀವಿಯಾಗುವುದು ಉತ್ತಮ ಎಂದು ಹಲವರು ಹೇಳಿದರೆ, ಮತ್ತೆ ಕೆಲವರು ಮೋದಿಯವರೆ ನೀವು ಸಹ ಹೋರಾಟದ ಮೂಲಕವೇ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮರೆಯಬೇಡಿ ಎಂದು ಛೇಡಿಸಿದ್ದಾರೆ. ಮೋದಿಯವರು ಭಾಗವಹಿಸಿದ ಹೋರಾಟದ ಹಳೆಯ ಫೋಟೊಗಳನ್ನು ಹಾಕಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೋಲ್ ಮಾಡುತ್ತಿದ್ದಾರೆ.

ನಾನು ಕಾಳಜಿವಹಿಸುತ್ತೇನೆ ಹಾಗಾಗಿ ನಾನು ಆಂದೋಲನ್ ಜೀವಿ ಎಂದು ಖ್ಯಾತ ಸಂಗೀತಗಾರ ಟಿ.ಎಂ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಶಾಂತಿಯುತವಾಗಿ ಹೋರಾಟ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಸಂವಿಧಾನದ 19(1)(ಎ) ವಾಕ್ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 19(1)(ಬಿ) ನಿರಾಯುಧವಾಗಿ ಪ್ರತಿಭಟಿಸುವ, ಹರತಾಳ ಆಚರಿಸುವ ಹಕ್ಕು ನೀಡಿದೆ ಎಂದು ಮಂಡೋ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ಮಹಾಡ್ ಸತ್ಯಾಗ್ರಹದ ಮೂಲ ಆಂದೋಲನ್ ಜೀವಿ ಇವರು. ಅಂಬೇಡ್ಕರ್‌ರವರಂತೆ ಆಂದೋಲನ್‌ ಜೀವಿಯಾಗಿ, ಶಿಕ್ಷಣ ಪಡೆಯಿರಿ, ಸಂಘಟಿತರಾಗಿ ಮತ್ತು ಹೋರಾಡಿ” ಎಂದು ಕರೆ ನೀಡಿದ್ದಾರೆ.

ಇವಿಷ್ಟು ನಾವು ಆಂದೋಲನ್ ಜೀವಿಗಳು ಎಂದು ಹೆಮ್ಮೆಯಿಂದ ಹೇಳಿಕೊಂಡರೆ ಇನ್ನು ಕೆಲವರು ಮೋದಿಯವರು ಸಹ ಹೋರಾಟ ಮಾಡಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ತಮ್ಮ ದಾರಿಯನ್ನು ಮರೆತು ಬೇರೆಯವರನ್ನು ಟೀಕಿಸುತ್ತಿದ್ದಾರೆ. ಈ ಇಬ್ಬಂದಿತನವನ್ನು ಖಂಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮೋದಿಯವರ ಹಳೆಯ ಫೋಟೊಗಳನ್ನು ಹಾಕಿ ಟ್ರೋಲ್ ಮಾಡಿದ್ದಾರೆ. ಅಂತಹ ಕೆಲವು ಇಲ್ಲಿವೆ.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....