Homeಮುಖಪುಟಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

- Advertisement -
- Advertisement -

ಇಂದು ಸಾಮಾಜಿಕ ಜಾಲತಾಣಗಳಲ್ಲಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್‌ ಆಗುತ್ತಿದೆ. ಅದರೊಟ್ಟಿಗೆ ಮೋದಿಯವರ ಹಳೆಯ ಹೋರಾಟದ ಫೋಟೊಗಳನ್ನು ಹಂಚಿಕೊಂಡು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಹಾಗಾದ್ರೆ ಈ ಆಂದೋಲನ್ ಜೀವಿ ಅಂದ್ರೆ ಏನಂತ ನೋಡೋಣ ಬನ್ನಿ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್‌ ಜೀವಿ ಎಂಬ ಹೊಸ ಅಸ್ತಿತ್ವವು ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ, ವಕೀಲರ ಅಥವಾ ಕಾರ್ಮಿಕರ ಹೋರಾಟದಲ್ಲಿಯೂ ಇರುತ್ತಾರೆ. ಕೆಲವೊಮ್ಮೆ ವೇದಿಕೆಯ ಮುಂದಿದ್ದರೆ ಕೆಲವೊಮ್ಮೆ ಹಿಂದಿದ್ದು ಕೆಲಸ ಮಾಡುತ್ತಾರೆ. ಹೋರಾಟಗಳಿಲ್ಲದೆ ಅವರು ಬದುಕುವುದಿಲ್ಲ. ನಾವು ಅಂತಹ ಜನರನ್ನು ಗುರುತಿಸಬೇಕು ಮತ್ತು ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿಯವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಡಿಪಾರ್ ಜೀವಿಯಾಗುವುದಕ್ಕಿಂತ ಆಂದೋಲನ್ ಜೀವಿಯಾಗುವುದು ಉತ್ತಮ ಎಂದು ಹಲವರು ಹೇಳಿದರೆ, ಮತ್ತೆ ಕೆಲವರು ಮೋದಿಯವರೆ ನೀವು ಸಹ ಹೋರಾಟದ ಮೂಲಕವೇ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮರೆಯಬೇಡಿ ಎಂದು ಛೇಡಿಸಿದ್ದಾರೆ. ಮೋದಿಯವರು ಭಾಗವಹಿಸಿದ ಹೋರಾಟದ ಹಳೆಯ ಫೋಟೊಗಳನ್ನು ಹಾಕಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೋಲ್ ಮಾಡುತ್ತಿದ್ದಾರೆ.

ನಾನು ಕಾಳಜಿವಹಿಸುತ್ತೇನೆ ಹಾಗಾಗಿ ನಾನು ಆಂದೋಲನ್ ಜೀವಿ ಎಂದು ಖ್ಯಾತ ಸಂಗೀತಗಾರ ಟಿ.ಎಂ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಶಾಂತಿಯುತವಾಗಿ ಹೋರಾಟ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಸಂವಿಧಾನದ 19(1)(ಎ) ವಾಕ್ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 19(1)(ಬಿ) ನಿರಾಯುಧವಾಗಿ ಪ್ರತಿಭಟಿಸುವ, ಹರತಾಳ ಆಚರಿಸುವ ಹಕ್ಕು ನೀಡಿದೆ ಎಂದು ಮಂಡೋ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ಮಹಾಡ್ ಸತ್ಯಾಗ್ರಹದ ಮೂಲ ಆಂದೋಲನ್ ಜೀವಿ ಇವರು. ಅಂಬೇಡ್ಕರ್‌ರವರಂತೆ ಆಂದೋಲನ್‌ ಜೀವಿಯಾಗಿ, ಶಿಕ್ಷಣ ಪಡೆಯಿರಿ, ಸಂಘಟಿತರಾಗಿ ಮತ್ತು ಹೋರಾಡಿ” ಎಂದು ಕರೆ ನೀಡಿದ್ದಾರೆ.

ಇವಿಷ್ಟು ನಾವು ಆಂದೋಲನ್ ಜೀವಿಗಳು ಎಂದು ಹೆಮ್ಮೆಯಿಂದ ಹೇಳಿಕೊಂಡರೆ ಇನ್ನು ಕೆಲವರು ಮೋದಿಯವರು ಸಹ ಹೋರಾಟ ಮಾಡಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ತಮ್ಮ ದಾರಿಯನ್ನು ಮರೆತು ಬೇರೆಯವರನ್ನು ಟೀಕಿಸುತ್ತಿದ್ದಾರೆ. ಈ ಇಬ್ಬಂದಿತನವನ್ನು ಖಂಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮೋದಿಯವರ ಹಳೆಯ ಫೋಟೊಗಳನ್ನು ಹಾಕಿ ಟ್ರೋಲ್ ಮಾಡಿದ್ದಾರೆ. ಅಂತಹ ಕೆಲವು ಇಲ್ಲಿವೆ.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...