Homeಮುಖಪುಟಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

- Advertisement -
- Advertisement -

ಇಂದು ಸಾಮಾಜಿಕ ಜಾಲತಾಣಗಳಲ್ಲಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್‌ ಆಗುತ್ತಿದೆ. ಅದರೊಟ್ಟಿಗೆ ಮೋದಿಯವರ ಹಳೆಯ ಹೋರಾಟದ ಫೋಟೊಗಳನ್ನು ಹಂಚಿಕೊಂಡು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಹಾಗಾದ್ರೆ ಈ ಆಂದೋಲನ್ ಜೀವಿ ಅಂದ್ರೆ ಏನಂತ ನೋಡೋಣ ಬನ್ನಿ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್‌ ಜೀವಿ ಎಂಬ ಹೊಸ ಅಸ್ತಿತ್ವವು ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ, ವಕೀಲರ ಅಥವಾ ಕಾರ್ಮಿಕರ ಹೋರಾಟದಲ್ಲಿಯೂ ಇರುತ್ತಾರೆ. ಕೆಲವೊಮ್ಮೆ ವೇದಿಕೆಯ ಮುಂದಿದ್ದರೆ ಕೆಲವೊಮ್ಮೆ ಹಿಂದಿದ್ದು ಕೆಲಸ ಮಾಡುತ್ತಾರೆ. ಹೋರಾಟಗಳಿಲ್ಲದೆ ಅವರು ಬದುಕುವುದಿಲ್ಲ. ನಾವು ಅಂತಹ ಜನರನ್ನು ಗುರುತಿಸಬೇಕು ಮತ್ತು ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿಯವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತಡಿಪಾರ್ ಜೀವಿಯಾಗುವುದಕ್ಕಿಂತ ಆಂದೋಲನ್ ಜೀವಿಯಾಗುವುದು ಉತ್ತಮ ಎಂದು ಹಲವರು ಹೇಳಿದರೆ, ಮತ್ತೆ ಕೆಲವರು ಮೋದಿಯವರೆ ನೀವು ಸಹ ಹೋರಾಟದ ಮೂಲಕವೇ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮರೆಯಬೇಡಿ ಎಂದು ಛೇಡಿಸಿದ್ದಾರೆ. ಮೋದಿಯವರು ಭಾಗವಹಿಸಿದ ಹೋರಾಟದ ಹಳೆಯ ಫೋಟೊಗಳನ್ನು ಹಾಕಿ #andolanjeevi ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೋಲ್ ಮಾಡುತ್ತಿದ್ದಾರೆ.

ನಾನು ಕಾಳಜಿವಹಿಸುತ್ತೇನೆ ಹಾಗಾಗಿ ನಾನು ಆಂದೋಲನ್ ಜೀವಿ ಎಂದು ಖ್ಯಾತ ಸಂಗೀತಗಾರ ಟಿ.ಎಂ ಕೃಷ್ಣನ್ ಟ್ವೀಟ್ ಮಾಡಿದ್ದಾರೆ.

ಶಾಂತಿಯುತವಾಗಿ ಹೋರಾಟ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಸಂವಿಧಾನದ 19(1)(ಎ) ವಾಕ್ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 19(1)(ಬಿ) ನಿರಾಯುಧವಾಗಿ ಪ್ರತಿಭಟಿಸುವ, ಹರತಾಳ ಆಚರಿಸುವ ಹಕ್ಕು ನೀಡಿದೆ ಎಂದು ಮಂಡೋ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ಮಹಾಡ್ ಸತ್ಯಾಗ್ರಹದ ಮೂಲ ಆಂದೋಲನ್ ಜೀವಿ ಇವರು. ಅಂಬೇಡ್ಕರ್‌ರವರಂತೆ ಆಂದೋಲನ್‌ ಜೀವಿಯಾಗಿ, ಶಿಕ್ಷಣ ಪಡೆಯಿರಿ, ಸಂಘಟಿತರಾಗಿ ಮತ್ತು ಹೋರಾಡಿ” ಎಂದು ಕರೆ ನೀಡಿದ್ದಾರೆ.

ಇವಿಷ್ಟು ನಾವು ಆಂದೋಲನ್ ಜೀವಿಗಳು ಎಂದು ಹೆಮ್ಮೆಯಿಂದ ಹೇಳಿಕೊಂಡರೆ ಇನ್ನು ಕೆಲವರು ಮೋದಿಯವರು ಸಹ ಹೋರಾಟ ಮಾಡಿದ್ದರು. ಈಗ ಅಧಿಕಾರಕ್ಕೆ ಬಂದ ನಂತರ ತಮ್ಮ ದಾರಿಯನ್ನು ಮರೆತು ಬೇರೆಯವರನ್ನು ಟೀಕಿಸುತ್ತಿದ್ದಾರೆ. ಈ ಇಬ್ಬಂದಿತನವನ್ನು ಖಂಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮೋದಿಯವರ ಹಳೆಯ ಫೋಟೊಗಳನ್ನು ಹಾಕಿ ಟ್ರೋಲ್ ಮಾಡಿದ್ದಾರೆ. ಅಂತಹ ಕೆಲವು ಇಲ್ಲಿವೆ.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...