Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...