Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...