Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...