Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...