Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....