Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...