Homeದಲಿತ್ ಫೈಲ್ಸ್ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ಚಿಕಿತ್ಸೆಗಾಗಿ ದಾಖಲಾಗಿದ್ದ ಸರ್ಕಾರಿ ಆಸ್ಪತ್ರೆಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ಚಿತ್ತೂರು ಪೊಲೀಸ್ ಠಾಣೆಯಲ್ಲಿ ಹಣ ಕಳ್ಳತನ ಮಾಡಿದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ದಲಿತ ಮಹಿಳೆಯನ್ನು ಆರೋಪ ಒಪ್ಪುವಂತೆ ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮಹಿಳೆಯ ವೀಡಿಯೊವನ್ನು ಹಂಚಿಕೊಂಡಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಘಟನೆಯನ್ನು ಖಂಡಿಸಿದೆ. ಇದೊಂದು ಅನಾಕರಿಕ, ಕ್ರೂರ ಘಟನೆ ಎಂದು ಹೇಳಿದೆ. ಜಸ್ಟಿಸ್ ಚಂದ್ರ ಅವರಂತ ವ್ಯಕ್ತಿಗಳು ಇಂತಹ ದುರಂತಗಳ ಕುರಿತು ಮಾತಾಡಬೇಕು ಎಂದು ಒತ್ತಾಯಿಸಿದೆ.

ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಲಕ್ಷ್ಮಿ ನಗರ ಕಾಲೋನಿಯ 34 ವರ್ಷದ ಎಂ ಉಮಾಮಹೇಶ್ವರಿ ಅವರು ಚಿತ್ತೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಮತ್ತು ತನ್ನ ವಿರುದ್ಧ ಸುಳ್ಳು ಆರೋಪವನ್ನು ಒಪ್ಪುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಿದ್ದಾರೆ.

ಚಿತ್ತೂರಿನ ಜಿಲ್ಲಾ ಕಾರಾಗೃಹದ ಅಧೀಕ್ಷಕ ವೇಣುಗೋಪಾಲ್ ರೆಡ್ಡಿ ಅವರ ನಿವಾಸದಲ್ಲಿ ಸಹಾಯಕಿಯಾಗಿ ಉಮಾಮಹೇಶ್ವರಿ ಕೆಲಸ ಮಾಡುತ್ತಿದ್ದಾರೆ. 2 ಲಕ್ಷ ನಗದು ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

 

ವೇಣುಗೋಪಾಲ್ ರೆಡ್ಡಿ ಅವರ ಮನೆಗೆ ದಿನನಿತ್ಯದ ಕೆಲಸಕ್ಕೆ ಹೋದಾಗ, ಗಮಡ ಹೆಂಡತಿ ಹಣದ ವಿಷಯವಾಗಿ ಜಗಳವಾಡುತ್ತಿದ್ದರು. ಆ ವೇಳೆ ದಂಪತಿ ಹಣ ನಾಪತ್ತೆಯಾಗಿದ್ದು, ನೀನು ನೋಡಿದೆಯಾ ಎಂದು ಕೇಳಿದರು. ಹಣದ ಬಗ್ಗೆ ತನಗೆ ಗೊತ್ತಿಲ್ಲ ಎಂದು ಉತ್ತರಿಸಿದೆ. ನೀನೆ ಕದ್ದಿದಿಯ ಎಂದರು. ಇಲ್ಲ ಎಂದೆ. ಮನೆ ತುಂಬಾ ಹುಡುಕು ಎಂದರು ಮಧ್ಯಾಹ್ನ 3 ಗಂಟೆಯವರೆಗೂ ಹುಡುಕಾಡಿದೆವು. ಬಳಿಕ ನೀನು ಹೋಗಿ ಊಟ ಮಾಡಿಕೊಂಡು ಬಾ. ನಾವು ಆಮೇಲೆ ಫೋನ್ ಮಾಡುತ್ತೇವೆ ಎಂದರು. ಮನೆಗೆ ಬರುವಷ್ಟರಲ್ಲಿ ಪೊಲಿಸರು ಪೋನ್ ಮಾಡಿ ಠಾಣೆಗ ಬನ್ನಿ ನಿಮ್ಮ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ ಎಂದರು. ವಿಚಾರನೆಯಲ್ಲಿ ನಾನು ಹಣ ಕದ್ದಿಲ್ಲ ಎಂದು ಹೇಳಿದೆ. ರಾತ್ರಿ 9 ಗಂಟೆಯವರೆಗೂ ಠಾಣೆಯಲ್ಲಿ ಇರಿಸಿಕೊಂಡು, ಬೆಳಗ್ಗೆ ಬರುವಂತೆ ಹೇಳಿ ಕಳುಹಿಸಿದರು. ಮಾರನೆ ದಿನ ಠಾಣೆಗೆ 12 ಗಂಟೆಗೆ ಹೋದೆ. ಮಧ್ಯಾಹ್ನ 1 ಗಂಟೆಯಿಂದ ಒಂದೂವರೆ ಗಂಟೆಯವರೆಗೆ ಒಂದು ಕತ್ತಲೆ ರೂಮಿನಲ್ಲಿ ಕೂಡಿ ಹಾಕಿ, ಕೈ ಕಾಲು ಕಟ್ಟಿ ಬಾಯಿಗೆ ಬಟ್ಟೆ ತೂರುಕಿ ಲಾಠಿ ಮತ್ತು ಬೂಟು ಕಾಲಿನಿಂದ ಆತ ತೀವ್ರವಾಗಿ ಥಳಿಸಿದರು. ಕೆಟ್ಟ ಕೆಟ್ಟ ಮಾತುಗಳಲ್ಲಿ ಬೈದರು. ಬಳಿಕ ಇನ್ಸ್‌ಪೆಕ್ಟರ್‌ ಬಳಿ ಕಡೆದುಕೊಂಡು ಹೋಗಿ ಅಲ್ಲೂ ಲಾಠಿಯಿಂದ ಹೊಡೆದರು. ಅಷ್ಟರಲ್ಲಿ ಅವರಿಗೆ ಒಂದು ಫೋನ್ ಬಂತು. ನಿನ್ನ ವಿರುದ್ಧ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಫಿಂಗರ್‌ ಪ್ರಿಂಟ್ ಕೂಡ ಮ್ಯಾಚ್ ಆಗುತ್ತಿಲ್ಲ. ಅವರ ಹೆಂಡತಿಯದೆ ತಪ್ಪು. ನಂಗೆ ಒಂದು ಒಳ್ಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೆವೆ. ದುಡ್ಡು ಇರುವವರ ಬಳಿ ಯಾಕೆ ಕೆಲಸಕ್ಕೆ ಹೋಗ್ತಿರಾ ಎಂದು ಹೇಳಿ ರಾತ್ರಿ 10 ಗಂಟೆಗೆ ಕಳುಹಿಸಿದರು. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಬಂದು ದಾಖಲಾಗಿದ್ದೆ. ಅಲ್ಲಿಗೂ ಪೊಲೀಸರು ಬಂದು ನನ್ನನ್ನು ಡಿಸ್ಚಾರ್ಜ್ ಮಾಡುವಂತೆ ಒತ್ತಡ ಹೇರಿದರು. ಅಲ್ಲಿಂದಲೂ ವಾಪಸ್ ಕಳುಹಿಸಿದರು” ಎಂದು ಹಲ್ಲೆಗೊಳಗಾದ ಸಂತ್ರಸ್ತೆ ತಿಳಿಸಿದ್ದಾರೆ.

ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಚಿತ್ತೂರು ಉಪ ಪೊಲೀಸ್ ಮಹಾನಿರೀಕ್ಷಕ ಎಸ್ ಸೆಂಥಿಲ್ ಕುಮಾರ್, ಆರೋಪಿ ಕಾನ್‌ಸ್ಟೆಬಲ್ ವಿ ಸುರೇಶ್ ಬಾಬು ಅವರನ್ನು ಭಾನುವಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಡಿಐಜಿ ಎಸ್ ಸೆಂಥಿಲ್ ಕುಮಾರ್ ಅವರು ಪ್ರಕರಣದ ಕೂಲಂಕಷ ತನಿಖೆ ನಡೆಸಿ ಶೀಘ್ರವೇ ವಿವರವಾದ ವರದಿಯನ್ನು ಸಲ್ಲಿಸುವಂತೆ ಹೆಚ್ಚುವರಿ ಎಸ್ಪಿ ಡಿಎನ್ ಮಹೇಶ್ ಅವರಿಗೆ ಸೂಚಿಸಿದ್ದಾರೆ.

ಎಎನ್‌ಐ ಜೊತೆ ದೂರವಾಣಿ ಮೂಲಕ ಸಂವಾದದಲ್ಲಿ ಪ್ರತಿಕ್ರಿಯಿಸಿದ ಚಿತ್ತೂರು 1 ಟೌನ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶ್ರೀನಿವಾಸ ರಾವ್ ಮಹಿಳೆ ಮಾಡಿದ್ದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಆಕೆಯ ಹೇಳಿಕೆಗಳಲ್ಲಿ “ಯಾವುದೇ ಸತ್ಯವಿಲ್ಲ” ಎಂದು ಹೇಳಿದ್ದರು.

“ಆಕೆಯನ್ನು ವಿಚಾರಿಸಿದ ನಂತರ, ಹಣ ಕದ್ದಿರುವುದನ್ನು ಆಕೆ ಒಪ್ಪಿಕೊಂಡರು. ಆ ಹಣವು ತನ್ನ ಪತಿ ದೀನಾ ಬಳಿ ಇದೆ ಎಂದು ಅವರು ತಿಳಿಸಿದ್ದರು. ಪೊಲೀಸರು ಅನುಮತಿಸಿದರೆ, ತನ್ನ ಗಂಡನ ಬಳಿಗೆ ಹೋಗಿ ಹಣವನ್ನು ಹಿಂತಿರುಗಿಸುತ್ತೇನೆ ಎಂದರು. ಆದರೆ, ಆಕೆ ಆರೋಪಿಸಿದಂತೆ ಪೊಲೀಸರು ಕಿರುಕುಳ ನೀಡಿಲ್ಲ, ಚಿತ್ರಹಿಂಸೆ ನೀಡಿಲ್ಲ, ನಿಂದನೀಯ ಪದಗಳನ್ನು ಬಳಸಿಲ್ಲ. ಹಣವನ್ನು ಹಿಂದಿರುಗಿಸುವಂತೆ ಆಕೆಯನ್ನು ಪೊಳಿಸರು ಕೇಳಿದ್ದರಿಂದ ಆಕೆ ಪೊಲೀಸರ ಮೇಲೆ ಆರೋಪ ಮಾಡಲು ಆರಂಭಿಸಿದ್ದಾರೆ’’ ಎಂದು ಹೇಳಿದ್ದರು.


ಇದನ್ನೂ ಓದಿ: ಚಿತ್ರದುರ್ಗ: ದಲಿತ ಮಹಾಗಣಪತಿ ಕೇಸ್‌ ಸೇರಿದಂತೆ 10 ಪ್ರಕರಣಗಳ ಆರೋಪ – ದಲಿತ ಮುಖಂಡರ ಮೇಲೆ ‘ಗೂಂಡಾ ಪಟ್ಟ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...