Homeಚಳವಳಿಆಂಧ್ರಪ್ರದೇಶ: ವಿವಾದಾತ್ಮಕ ಮೂರು ರಾಜಧಾನಿ ಮಸೂದೆ ಹಿಂಪಡೆಯಲು ನಿರ್ಧಾರ

ಆಂಧ್ರಪ್ರದೇಶ: ವಿವಾದಾತ್ಮಕ ಮೂರು ರಾಜಧಾನಿ ಮಸೂದೆ ಹಿಂಪಡೆಯಲು ನಿರ್ಧಾರ

- Advertisement -
- Advertisement -

ಆಂಧ್ರಪ್ರದೇಶ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಅನುಮತಿಸುವ ವಿವಾದಾತ್ಮಕ ಮೂರು ರಾಜಧಾನಿ ಮಸೂದೆಯನ್ನು (three-capital bill) ರದ್ದುಗೊಳಿಸಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸರ್ಕಾರ ಸೋಮವಾರ ನಿರ್ಧರಿಸಿದೆ. ಕಾನೂನನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಅಡ್ವೊಕೇಟ್ ಜನರಲ್ ಎಸ್ ಸುಬ್ರಮಣ್ಯಂ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಈ ಮಸೂದೆಗೆ ಹಲವು ವಲಯಗಳಿಂದ ಭಾರಿ ಪ್ರತಿಭಟನೆ ವ್ಯಕ್ತವಾಗಿತ್ತು. ಮೂರು ರಾಜಧಾನಿಗಳನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಕಾರ್ಯಕಾರಿ ರಾಜಧಾನಿ ವೈಜಾಗ್ (ವಿಶಾಕಾಪಟ್ಟಣಂ), ಶಾಸಕಾಂಗ ರಾಜಧಾನಿ ಅಮರಾವತಿ ಮತ್ತು ನ್ಯಾಯಾಂಗ ರಾಜಧಾನಿ ಕರ್ನೂಲ್‌ ಎಂದು ಸೂಚಿಸಲಾಗಿತ್ತು.

ಮುಖ್ಯ ನ್ಯಾಯಮೂರ್ತಿ ಪಿ.ಕೆ ಮಿಶ್ರಾ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಈ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯ ವಿಧಾನಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ ಎಂದು ಅಡ್ವೊಕೇಟ್ ಜನರಲ್ ಎಸ್ ಸುಬ್ರಮಣ್ಯಂ ತಿಳಿಸಿದ್ದಾರೆ. ವಿವರವಾದ ಅಫಿಡವಿಟ್ ಸಲ್ಲಿಸುವಂತೆ ವಿಭಾಗೀಯ ಪೀಠ ಸೂಚಿಸಿದೆ.

ರಾಜ್ಯ ಸಚಿವ ಸಂಪುಟ ತುರ್ತು ಸಭೆ ನಡೆಸಿ ವಿಧಾನಮಂಡಲದಲ್ಲಿ ಮಂಡಿಸಲಿರುವ ರದ್ದತಿ ಮಸೂದೆಗೆ ಒಪ್ಪಿಗೆ ನೀಡಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಪ್ರಕರಣ ದಾಖಲಿಸಿದ ಆಂಧ್ರ ಪ್ರದೇಶ ಹೈಕೋರ್ಟ್

ಕಳೆದ ವರ್ಷ, ಆಗಿನ ಗವರ್ನರ್, ಬಿಸ್ವ ಭೂಷಣ್ ಹರಿಚಂದನ್ “ಆಂಧ್ರ ಪ್ರದೇಶ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಮಸೂದೆ- 2020 ಮತ್ತು ಎಪಿ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ರದ್ದತಿ) ಮಸೂದೆ- 2020 ಎರಡು ಮಸೂದೆಗಳಿಗೆ ಸಹಿ ಹಾಕಿದ್ದರು. ತ್ರಿವಿಧೀಕರಣ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.

ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಸ್ಥಾಪಿಸುವ ಗುರಿಯೊಂದಿಗೆ ಕಳೆದ ವರ್ಷ ಅಂಗೀಕರಿಸಿದ ವಿವಾದಾತ್ಮಕ ವಿಕೇಂದ್ರೀಕರಣ ಮತ್ತು ಎಲ್ಲಾ ಪ್ರದೇಶಗಳ ಅಂತರ್ಗತ ಅಭಿವೃದ್ಧಿ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರವನ್ನು ತುರ್ತು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಸೂದೆಯನ್ನು ಬದಲಾವಣೆಗಳೊಂದಿಗೆ ಮತ್ತೆ ತರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತಾವಿತ ಕಾನೂನಿನಿಂದ ರೈತರು ಮತ್ತು ಭೂಮಾಲೀಕರು ಅಸಮಾಧಾನಗೊಂಡಿದ್ದರು. ನವೆಂಬರ್ 1 ರಂದು ರೈತರು ಅಮರಾವತಿಯಿಂದ ತಿರುಪತಿಗೆ 45 ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದ್ದರು. ಅಮರಾವತಿಯಲ್ಲಿ ರಾಜ್ಯದ ರಾಜಧಾನಿ ಸ್ಥಾಪನೆಗೆ 34,000 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ಬಿಟ್ಟುಕೊಟ್ಟ ಸಾವಿರಾರು ರೈತರು, ಎರಡು ಕಾನೂನುಗಳನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದರು. ಈ ಕುರಿತು ಹೈಕೋರ್ಟ್‌ನಲ್ಲಿ ರೈತರಿಂದ 100ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು.


ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...