HomeUncategorizedನ್ಯಾಯ ಪಂಚಾಯಿತಿ ಹೆಸರಿನಲ್ಲಿ ಬಾಲಕಿಗೆ ಅಮಾನುಷ ಥಳಿತ: ಆಂಧ್ರದಲ್ಲಿ ನಡೆದ ದುರ್ಘಟನೆ

ನ್ಯಾಯ ಪಂಚಾಯಿತಿ ಹೆಸರಿನಲ್ಲಿ ಬಾಲಕಿಗೆ ಅಮಾನುಷ ಥಳಿತ: ಆಂಧ್ರದಲ್ಲಿ ನಡೆದ ದುರ್ಘಟನೆ

- Advertisement -
- Advertisement -

ಆಂಧ್ರಪ್ರದೇಶದ ಅನಂತ್‌ಪುರ ಜಿಲ್ಲೆಯ ಕೆ.ಪಿ ದೊಡ್ಡಿ ಎಂಬ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಯುವತಿಯನ್ನು ನ್ಯಾಯ ಪಂಚಾಯಿತಿಯೆದರು ಅಮಾನುಷವಾಗಿ ಥಳಿಸಿರುವ ದುರ್ಘಟನೆ ಜರುಗಿದೆ. ಯುವತಿಯೊಬ್ಬಳನ್ನು ಹಳ್ಳಿಯ ಹಿರಿಯರೊಬ್ಬರು ಥಳಿಸುತ್ತಿರುವ ವಿಡಿಯೋ ಒಂದು  ವೈರಲ್ ಆಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿ, 20 ವರ್ಷ ವಯಸ್ಸಿನ ಸೋದರಸಂಬಂಧಿಯನ್ನು ಮದುವೆಯಾಗಿ ಆತನೊಂದಿಗೆ ಓಡಿಹೋಗಿದ್ದಾಳೆ ಎಂಬ ಆರೋಪದ ಮೇಲೆ, ದಂಪತಿಯನ್ನು ಮರಳಿ ಕರೆತಂದು ಗ್ರಾಮದ ಹಿರಿಯರ ಮುಂದೆ ಈ ಘಟನೆ ನಡೆದಿರುವುದು ಉಲ್ಲೇಖವಾಗಿದೆ.

ವಿಡಿಯೋ:

ವೀಡಿಯೊದಲ್ಲಿ, 20 ವರ್ಷ ವಯಸ್ಸಿನ ಹುಡುಗ ತಲೆ ಬಗ್ಗಿಸಿ ನೆಲದ ಮೇಲೆ ಕುಳಿತಿದ್ದಾನೆ. ಹಳ್ಳಿಯ ಹಿರಿಯ ಎಂದು ಕರೆಯಲ್ಪಡುವವನು ಅವನ ಮುಂದೆ ಆ ಹುಡುಗಿಯನ್ನು ಪ್ರಶ್ನಿಸುತ್ತಿದ್ದಾನೆ. ಅವಳು ನೀಡುವ ಉತ್ತರವು ಅವನನ್ನು ಅಸಮಾಧಾನಗೊಳಿಸುತ್ತದೆ ಮತ್ತು ಅವನು ಅವಳನ್ನು ಅನೇಕ ಬಾರಿ, ಪದೇ ಪದೇ ತನ್ನ ಕೈಗಳಿಂದ ಮತ್ತು ನಂತರ ಕೋಲಿನಿಂದ ಹೊಡೆಯಲು ಪ್ರಾರಂಭಿಸುತ್ತಾನೆ.

ಅನಂತ್‌ಪುರ ಜಿಲ್ಲಾ ಪೊಲೀಸ್ ಮುಖ್ಯಸ್ಥ ಬಿ ಯೆಸುಬಾಬು ಘಟನೆ ಕುರಿತು ಮಾತನಾಡಿದ್ದು ‘ಗ್ರಾಮದ ಹಿರಿಯರ ವಿರುದ್ಧ ದೂರು ನೀಡಲು ಯಾರೂ ಮುಂದೆ ಬರುತ್ತಿಲ್ಲ, ಆಕೆಯ ಪೋಷಕರೂ ಸಹ.’ ಹಿರಿಯರು ತಮ್ಮ ಪರವಾಗಿ ಮಧ್ಯಪ್ರವೇಶಿಸಿಸಿದ್ದರಿಂದ ಅವರು ದೂರು ನೀಡಲು ಸಿದ್ಧರಿಲ್ಲ ಎಂದಿದ್ದಾರೆ.

ಬಾಲಕಿ ದೂರು ನೀಡುತ್ತಾರೆಯೇ ಎಂದು ಪರಿಶೀಲಿಸಲು ಪೊಲೀಸರು ಮಹಿಳಾ ಕಾನ್‌ಸ್ಟೆಬಲ್‌ರನ್ನು ಅಲ್ಲಿಗೆ ಕಳುಹಿಸಿದ್ದರು. ಆ ಹುಡುಗಿಯು ಹುಡುಗನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದಾಳೆಂದು ಉಲ್ಲೇಖಿಸಿದರೆ, ಪೋಕ್ಸೊ ಕಾಯ್ದೆಯನ್ವಯ ಕೇಸು ದಾಖಲಿಸಬಹುದೆಂಬ ಭಯದಿಂದ ಆಕೆಯೂ ದುರು ದಾಖಲಿಸಿಲ್ಲ.

ಯಾವುದೇ ಔಪಚಾರಿಕ ದೂರು ದಾಖಲಿಸದಿದ್ದರೆ, ಪೊಲೀಸರು ಎಸ್‌ಸಿ / ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಅರಿವಿನ ಕೊರತೆಯಿಂದ ಆ ಮಕ್ಕಳು ಹಾಗೆ ಮಾಡಿದ್ದಾರೆ. ಅಂತಹ ಸಂದರ್ಭಗಳಲ್ಲಿ, ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಅವರು ಯುವಜನರಿಗೆ ಸಲಹೆ ನೀಡಬೇಕು, ನೈತಿಕ ಪೊಲೀಸರಂತೆ ವರ್ತಿಸಬಾರದು. ಆಘಾತಕಾರಿ ಸಂಗತಿಯೆಂದರೆ, ಆ ಹುಡುಗಿಯನ್ನು ಕೆಟ್ಟದಾಗಿ ಥಳಿಸಿದಾಗ ಅನೇಕ ಗ್ರಾಮಸ್ಥರು ಮೂಕ ಸಾಕ್ಷಿಯಾಗಿದ್ದರು ಎಂದು ಸ್ಥಳೀಯರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...