Homeಅಂತರಾಷ್ಟ್ರೀಯDawood Ibrahim - ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್...

Dawood Ibrahim – ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್ ಇಬ್ರಾಹಿಂ

- Advertisement -
- Advertisement -

ಹತ್ತಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ತಲೆಮರೆಸಿಕೊಂಡಿರುವ ಭೂಗತ ಲೋಕದ ದಾವೂದ್ ಇಬ್ರಾಹಿಂ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ಧಾರೆ, ಅವರ ಹೆಂಡತಿಗೂ ಕೊರೊನಾ ಸೋಂಕು ತಗುಲಿದೆ ಎಂಬಂತಹ ಸುದ್ದಿಗಳು ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಅವರ ಸಹೋದರ ಅನೀಸ್‌ ಇಬ್ರಾಹಿಂ ಈ ಕುರಿತು ಸ್ಪಷ್ಟನೆ ನೀಡಿದ್ದು ಇವೆಲ್ಲವೂ ಸುಳ್ಳು ಎಂದಿದ್ದಾರೆ.

ದಾವೂದ್‌ ಇಬ್ರಾಹಿಂ ಮತ್ತವರ ಹೆಂಡತಿಗೆ ಕೋವಿಡ್-19 ರೋಗದ ಸೋಂಕು ತಗುಲಿದ್ದು, ಅವರನ್ನು ಕರಾಚಿಯ ಆರ್ಮಿ ಹಾಸ್ಪಿಟಲ್‌ಗೆ ದಾಖಲಿಸಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ ಎಂದು ಕೆಲ ಮಾಧ್ಯಮಗಳಲ್ಲೂ ಸುದ್ದಿಗಳಾಗಿವೆ. ಆದರೆ, ದಾವೂದ್ ಸಹೋದರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸುದ್ದಿಗಳನ್ನು ಅಲ್ಲಗಳೆದಿದ್ದಾರೆ.

ದಾವೂದ್‌ ಇಬ್ರಾಹಿಂನ ಎಲ್ಲಾ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳನ್ನ ನೋಡಿಕೊಳ್ಳುವ ಅನೀಸ್ ಇಬ್ರಾಹಿಂ ಅವರು ತಮ್ಮ ಅಣ್ಣನ ಬಗ್ಗೆ ಹರಡಿರುವ ಸುದ್ದಿಗಳು ಬರೇ ವದಂತಿ ಎಂದಿದ್ದಾರೆಂದು ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ತಮ್ಮ ಸಹೋದರ ದಾವೂದ್‌ ಇಬ್ರಾಹಿಂ ಸೇರಿದಂತೆ ಇಡೀ ಕುಟುಂಬದ ಯಾರೊಬ್ಬರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಅನೀಸ್ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಪ್ರಪಂಚದೆಲ್ಲಡೆ ಹರಡಿರುವ ಕೊರೊನಾ ಪಾಕಿಸ್ತಾನಕ್ಕೂ ಹಬ್ಬಿದೆ. ದಾವೂದ್‌ ಇಬ್ರಾಹಿಂ ಸದ್ಯ ಪಾಕಿಸ್ತಾನದಲ್ಲಿದ್ದಾರೆ ಎಂಬ ವದಂತಿಗಳಿರುವ ಹಿನ್ನೆಲೆಯಲ್ಲಿ ಬಹುತೇಕ ಮಾಧ್ಯಮಗಳು ಅವರಿಗೆ ಕೊರೊನ ತಗುಲಿದೆ ಎಂಬ ವರದಿಗಳನ್ನು ಮಾಡಿದ್ದರು. ಅದನ್ನು ಅವರ ಸಹೋದರ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…


ದಾವೂದ್‌‌ ಇಬ್ರಾಹಿಂ ಮತ್ತು ಭಾರತದ ಸಂಬಂಧದ ವಿಚಾರದಲ್ಲಿ ಹಲವಾರು ಗೊಂದಲಗಳಿದ್ದು, ಅವರು ಅನೇಕ ಕಂಪನಿಗಳಲ್ಲಿ ಹಣ ಹೂಡಿದ್ದಾರೆ ಎಂಬ ಆರೊಪವಿದೆ. ಅಲ್ಲದೇ ಭಾರತದ ಹಲವಾರು ಮಾಧ್ಯಮಗಳು ದಾವೂದ್‌ ಪಾಕಿಸ್ತಾನ ಸರ್ಕಾರದ ಬೆಂಬಲದೊಂದಿಗೆ ಅಲ್ಲಿ ನೆಲೆಸಿದ್ದಾರೆ ಎಂದು ವರದಿ ಮಾಡಿವೆ. ಈಗ ಕೊರೊನಾ ಸೋಂಕು ಹಿನ್ನೆಲೆಯಲ್ಲಿಯೂ ಸಹ ಅವರು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಬಂದಿವೆ.

ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾರೆಂದು ಭಾರತದ ಆರೋಪಕ್ಕೆ ಈ ಕೊರೊನಾ ಸುದ್ದಿ ಪುಷ್ಟಿ ನೀಡಿತ್ತು. ದಾವೂದ್‌ ಕರಾಚಿಯಲ್ಲಿದ್ದಾನೆಂದು ಭಾರತ ಪದೇಪದೇ ಹೇಳುತ್ತಲೇ ಬಂದಿದೆ. ಆದರೆ, ಪಾಕಿಸ್ತಾನ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇದೀಗ ಕೊರೋನಾ ಸೋಂಕಿನ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅನೀಸ್ ಇಬ್ರಾಹಿಂ ಅವರು ತಮ್ಮ ಕುಟುಂಬದವರು ಪಾಕಿಸ್ತಾನದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಆದರೆ, ಯುಎಇ ಮತ್ತು ಪಾಕಿಸ್ತಾನದಲ್ಲಿ ವ್ಯವಹಾರಗಳಿರುವುದನ್ನು ಅನೀಸ್ ಒಪ್ಪಿಕೊಂಡಿದ್ದಾಗಿ ಐಎಎನ್ಎಸ್ ಸುದ್ದಿ ಸಂಸ್ಥೆಯ ವರದಿಯಿಂದ ತಿಳಿದುಬರುತ್ತದೆ.


ಇದನ್ನೂ ಓದಿ : ಜನರ ತೆರಿಗೆ ದುಡ್ಡಲ್ಲಿ ದಾವೂದ್ ಇಬ್ರಾಹಿಂ ನಷ್ಟ ತುಂಬಲು ಮುಂದಾಯ್ತಾ ‘ನಮೋ’ ಸರ್ಕಾರ?


ಇದನ್ನೂ ಓದಿ: ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...