Homeಅಂತರಾಷ್ಟ್ರೀಯDawood Ibrahim - ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್...

Dawood Ibrahim – ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್ ಇಬ್ರಾಹಿಂ

- Advertisement -
- Advertisement -

ಹತ್ತಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ತಲೆಮರೆಸಿಕೊಂಡಿರುವ ಭೂಗತ ಲೋಕದ ದಾವೂದ್ ಇಬ್ರಾಹಿಂ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ಧಾರೆ, ಅವರ ಹೆಂಡತಿಗೂ ಕೊರೊನಾ ಸೋಂಕು ತಗುಲಿದೆ ಎಂಬಂತಹ ಸುದ್ದಿಗಳು ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಅವರ ಸಹೋದರ ಅನೀಸ್‌ ಇಬ್ರಾಹಿಂ ಈ ಕುರಿತು ಸ್ಪಷ್ಟನೆ ನೀಡಿದ್ದು ಇವೆಲ್ಲವೂ ಸುಳ್ಳು ಎಂದಿದ್ದಾರೆ.

ದಾವೂದ್‌ ಇಬ್ರಾಹಿಂ ಮತ್ತವರ ಹೆಂಡತಿಗೆ ಕೋವಿಡ್-19 ರೋಗದ ಸೋಂಕು ತಗುಲಿದ್ದು, ಅವರನ್ನು ಕರಾಚಿಯ ಆರ್ಮಿ ಹಾಸ್ಪಿಟಲ್‌ಗೆ ದಾಖಲಿಸಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ ಎಂದು ಕೆಲ ಮಾಧ್ಯಮಗಳಲ್ಲೂ ಸುದ್ದಿಗಳಾಗಿವೆ. ಆದರೆ, ದಾವೂದ್ ಸಹೋದರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸುದ್ದಿಗಳನ್ನು ಅಲ್ಲಗಳೆದಿದ್ದಾರೆ.

ದಾವೂದ್‌ ಇಬ್ರಾಹಿಂನ ಎಲ್ಲಾ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳನ್ನ ನೋಡಿಕೊಳ್ಳುವ ಅನೀಸ್ ಇಬ್ರಾಹಿಂ ಅವರು ತಮ್ಮ ಅಣ್ಣನ ಬಗ್ಗೆ ಹರಡಿರುವ ಸುದ್ದಿಗಳು ಬರೇ ವದಂತಿ ಎಂದಿದ್ದಾರೆಂದು ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ತಮ್ಮ ಸಹೋದರ ದಾವೂದ್‌ ಇಬ್ರಾಹಿಂ ಸೇರಿದಂತೆ ಇಡೀ ಕುಟುಂಬದ ಯಾರೊಬ್ಬರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಅನೀಸ್ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಪ್ರಪಂಚದೆಲ್ಲಡೆ ಹರಡಿರುವ ಕೊರೊನಾ ಪಾಕಿಸ್ತಾನಕ್ಕೂ ಹಬ್ಬಿದೆ. ದಾವೂದ್‌ ಇಬ್ರಾಹಿಂ ಸದ್ಯ ಪಾಕಿಸ್ತಾನದಲ್ಲಿದ್ದಾರೆ ಎಂಬ ವದಂತಿಗಳಿರುವ ಹಿನ್ನೆಲೆಯಲ್ಲಿ ಬಹುತೇಕ ಮಾಧ್ಯಮಗಳು ಅವರಿಗೆ ಕೊರೊನ ತಗುಲಿದೆ ಎಂಬ ವರದಿಗಳನ್ನು ಮಾಡಿದ್ದರು. ಅದನ್ನು ಅವರ ಸಹೋದರ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…


ದಾವೂದ್‌‌ ಇಬ್ರಾಹಿಂ ಮತ್ತು ಭಾರತದ ಸಂಬಂಧದ ವಿಚಾರದಲ್ಲಿ ಹಲವಾರು ಗೊಂದಲಗಳಿದ್ದು, ಅವರು ಅನೇಕ ಕಂಪನಿಗಳಲ್ಲಿ ಹಣ ಹೂಡಿದ್ದಾರೆ ಎಂಬ ಆರೊಪವಿದೆ. ಅಲ್ಲದೇ ಭಾರತದ ಹಲವಾರು ಮಾಧ್ಯಮಗಳು ದಾವೂದ್‌ ಪಾಕಿಸ್ತಾನ ಸರ್ಕಾರದ ಬೆಂಬಲದೊಂದಿಗೆ ಅಲ್ಲಿ ನೆಲೆಸಿದ್ದಾರೆ ಎಂದು ವರದಿ ಮಾಡಿವೆ. ಈಗ ಕೊರೊನಾ ಸೋಂಕು ಹಿನ್ನೆಲೆಯಲ್ಲಿಯೂ ಸಹ ಅವರು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಬಂದಿವೆ.

ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾರೆಂದು ಭಾರತದ ಆರೋಪಕ್ಕೆ ಈ ಕೊರೊನಾ ಸುದ್ದಿ ಪುಷ್ಟಿ ನೀಡಿತ್ತು. ದಾವೂದ್‌ ಕರಾಚಿಯಲ್ಲಿದ್ದಾನೆಂದು ಭಾರತ ಪದೇಪದೇ ಹೇಳುತ್ತಲೇ ಬಂದಿದೆ. ಆದರೆ, ಪಾಕಿಸ್ತಾನ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇದೀಗ ಕೊರೋನಾ ಸೋಂಕಿನ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅನೀಸ್ ಇಬ್ರಾಹಿಂ ಅವರು ತಮ್ಮ ಕುಟುಂಬದವರು ಪಾಕಿಸ್ತಾನದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಆದರೆ, ಯುಎಇ ಮತ್ತು ಪಾಕಿಸ್ತಾನದಲ್ಲಿ ವ್ಯವಹಾರಗಳಿರುವುದನ್ನು ಅನೀಸ್ ಒಪ್ಪಿಕೊಂಡಿದ್ದಾಗಿ ಐಎಎನ್ಎಸ್ ಸುದ್ದಿ ಸಂಸ್ಥೆಯ ವರದಿಯಿಂದ ತಿಳಿದುಬರುತ್ತದೆ.


ಇದನ್ನೂ ಓದಿ : ಜನರ ತೆರಿಗೆ ದುಡ್ಡಲ್ಲಿ ದಾವೂದ್ ಇಬ್ರಾಹಿಂ ನಷ್ಟ ತುಂಬಲು ಮುಂದಾಯ್ತಾ ‘ನಮೋ’ ಸರ್ಕಾರ?


ಇದನ್ನೂ ಓದಿ: ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...