Homeಅಂತರಾಷ್ಟ್ರೀಯDawood Ibrahim - ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್...

Dawood Ibrahim – ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ಕುರಿತು ಸ್ಪಷ್ಟನೆ ನೀಡಿದ ಸಹೋದರ ಅನೀಸ್ ಇಬ್ರಾಹಿಂ

- Advertisement -
- Advertisement -

ಹತ್ತಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಸಿಲುಕಿ ತಲೆಮರೆಸಿಕೊಂಡಿರುವ ಭೂಗತ ಲೋಕದ ದಾವೂದ್ ಇಬ್ರಾಹಿಂ ಕೊರೋನಾ ವೈರಸ್‌ನಿಂದ ಸಾವನ್ನಪ್ಪಿದ್ಧಾರೆ, ಅವರ ಹೆಂಡತಿಗೂ ಕೊರೊನಾ ಸೋಂಕು ತಗುಲಿದೆ ಎಂಬಂತಹ ಸುದ್ದಿಗಳು ಮಾಧ್ಯಮಗಳು ಮತ್ತು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಅವರ ಸಹೋದರ ಅನೀಸ್‌ ಇಬ್ರಾಹಿಂ ಈ ಕುರಿತು ಸ್ಪಷ್ಟನೆ ನೀಡಿದ್ದು ಇವೆಲ್ಲವೂ ಸುಳ್ಳು ಎಂದಿದ್ದಾರೆ.

ದಾವೂದ್‌ ಇಬ್ರಾಹಿಂ ಮತ್ತವರ ಹೆಂಡತಿಗೆ ಕೋವಿಡ್-19 ರೋಗದ ಸೋಂಕು ತಗುಲಿದ್ದು, ಅವರನ್ನು ಕರಾಚಿಯ ಆರ್ಮಿ ಹಾಸ್ಪಿಟಲ್‌ಗೆ ದಾಖಲಿಸಲಾಗಿದೆ ಎಂದು ಗುಪ್ತಚರ ಸಂಸ್ಥೆಗಳು ಹೇಳಿವೆ ಎಂದು ಕೆಲ ಮಾಧ್ಯಮಗಳಲ್ಲೂ ಸುದ್ದಿಗಳಾಗಿವೆ. ಆದರೆ, ದಾವೂದ್ ಸಹೋದರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಸುದ್ದಿಗಳನ್ನು ಅಲ್ಲಗಳೆದಿದ್ದಾರೆ.

ದಾವೂದ್‌ ಇಬ್ರಾಹಿಂನ ಎಲ್ಲಾ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳನ್ನ ನೋಡಿಕೊಳ್ಳುವ ಅನೀಸ್ ಇಬ್ರಾಹಿಂ ಅವರು ತಮ್ಮ ಅಣ್ಣನ ಬಗ್ಗೆ ಹರಡಿರುವ ಸುದ್ದಿಗಳು ಬರೇ ವದಂತಿ ಎಂದಿದ್ದಾರೆಂದು ಐಎಎನ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ತಮ್ಮ ಸಹೋದರ ದಾವೂದ್‌ ಇಬ್ರಾಹಿಂ ಸೇರಿದಂತೆ ಇಡೀ ಕುಟುಂಬದ ಯಾರೊಬ್ಬರಿಗೂ ಕೊರೋನಾ ಸೋಂಕು ತಗುಲಿಲ್ಲ ಎಂದು ಅನೀಸ್ ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಪ್ರಪಂಚದೆಲ್ಲಡೆ ಹರಡಿರುವ ಕೊರೊನಾ ಪಾಕಿಸ್ತಾನಕ್ಕೂ ಹಬ್ಬಿದೆ. ದಾವೂದ್‌ ಇಬ್ರಾಹಿಂ ಸದ್ಯ ಪಾಕಿಸ್ತಾನದಲ್ಲಿದ್ದಾರೆ ಎಂಬ ವದಂತಿಗಳಿರುವ ಹಿನ್ನೆಲೆಯಲ್ಲಿ ಬಹುತೇಕ ಮಾಧ್ಯಮಗಳು ಅವರಿಗೆ ಕೊರೊನ ತಗುಲಿದೆ ಎಂಬ ವರದಿಗಳನ್ನು ಮಾಡಿದ್ದರು. ಅದನ್ನು ಅವರ ಸಹೋದರ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: ಬಡ ಕಾರ್ಮಿಕರ ಪಿಎಫ್‌ ಹಣವನ್ನು ದಾವೂದ್ ಇಬ್ರಾಹಿಂ ಸಹಚರ ಇಕ್ಬಾಲ್ ಮಿರ್ಚಿಗೆ ಕೊಟ್ಟ ಯೋಗಿ ಸರ್ಕಾರ…


ದಾವೂದ್‌‌ ಇಬ್ರಾಹಿಂ ಮತ್ತು ಭಾರತದ ಸಂಬಂಧದ ವಿಚಾರದಲ್ಲಿ ಹಲವಾರು ಗೊಂದಲಗಳಿದ್ದು, ಅವರು ಅನೇಕ ಕಂಪನಿಗಳಲ್ಲಿ ಹಣ ಹೂಡಿದ್ದಾರೆ ಎಂಬ ಆರೊಪವಿದೆ. ಅಲ್ಲದೇ ಭಾರತದ ಹಲವಾರು ಮಾಧ್ಯಮಗಳು ದಾವೂದ್‌ ಪಾಕಿಸ್ತಾನ ಸರ್ಕಾರದ ಬೆಂಬಲದೊಂದಿಗೆ ಅಲ್ಲಿ ನೆಲೆಸಿದ್ದಾರೆ ಎಂದು ವರದಿ ಮಾಡಿವೆ. ಈಗ ಕೊರೊನಾ ಸೋಂಕು ಹಿನ್ನೆಲೆಯಲ್ಲಿಯೂ ಸಹ ಅವರು ಪಾಕಿಸ್ತಾನದ ಸೇನಾ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಬಂದಿವೆ.

ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾರೆಂದು ಭಾರತದ ಆರೋಪಕ್ಕೆ ಈ ಕೊರೊನಾ ಸುದ್ದಿ ಪುಷ್ಟಿ ನೀಡಿತ್ತು. ದಾವೂದ್‌ ಕರಾಚಿಯಲ್ಲಿದ್ದಾನೆಂದು ಭಾರತ ಪದೇಪದೇ ಹೇಳುತ್ತಲೇ ಬಂದಿದೆ. ಆದರೆ, ಪಾಕಿಸ್ತಾನ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇದೀಗ ಕೊರೋನಾ ಸೋಂಕಿನ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅನೀಸ್ ಇಬ್ರಾಹಿಂ ಅವರು ತಮ್ಮ ಕುಟುಂಬದವರು ಪಾಕಿಸ್ತಾನದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಆದರೆ, ಯುಎಇ ಮತ್ತು ಪಾಕಿಸ್ತಾನದಲ್ಲಿ ವ್ಯವಹಾರಗಳಿರುವುದನ್ನು ಅನೀಸ್ ಒಪ್ಪಿಕೊಂಡಿದ್ದಾಗಿ ಐಎಎನ್ಎಸ್ ಸುದ್ದಿ ಸಂಸ್ಥೆಯ ವರದಿಯಿಂದ ತಿಳಿದುಬರುತ್ತದೆ.


ಇದನ್ನೂ ಓದಿ : ಜನರ ತೆರಿಗೆ ದುಡ್ಡಲ್ಲಿ ದಾವೂದ್ ಇಬ್ರಾಹಿಂ ನಷ್ಟ ತುಂಬಲು ಮುಂದಾಯ್ತಾ ‘ನಮೋ’ ಸರ್ಕಾರ?


ಇದನ್ನೂ ಓದಿ: ಭೂಗತ ನಂಟು ಹೊಂದಿರುವ ಕಂಪನಿಯಿಂದ ದೇಣಿಗೆ ಪಡೆಯಿತಾ ಬಿಜೆಪಿ?: ಇಡಿ ತನಿಖೆಯಲ್ಲಿ ಬಹಿರಂಗವಾದ ಸತ್ಯವೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...