Homeಕರ್ನಾಟಕಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

- Advertisement -
- Advertisement -

ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರಕಾರದ ವತಿಯಿಂದ 50 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧದ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಪಾರ್ಥೀವ ಶರೀರವನ್ನು ದೆಹಲಿಯಿಂದ ಶುಕ್ರವಾರ ರಾತ್ರಿ ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಕರೆ ತರಲಾಯಿತು. ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌, ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ಸಕಲ ಸರಕಾರಿ ಗೌರವದೊಂದಿಗೆ ಪಾರ್ಥೀವ ಶರೀರವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.

ಯೋಧ ಎಂ.ವಿ.ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ಜೊತೆಗೆ ಗುಂಡಿನ ಚಕಮಕಿ ನಡೆಯಿತು. ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿ ಹುತಾತ್ಮರಾದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದು ಹೇಳಿದ್ದಾರೆ.

ಜಿಗಣಿಯ ನಂದನವನ ಬಡಾವಣೆಯಲ್ಲಿರುವ ಪ್ರಾಂಜಲ್‌ ಮನೆಯ ಎದುರು ಇಂದು ಬೆಳಗ್ಗೆ 7ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಆಡಳಿತವು 500 ಮಂದಿ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಿದೆ. ಕುಟುಂಬದವರು, ಸಂಬಂಧಿಕರಿಗೆ ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.  ಅಂತಿಮ ಯಾತ್ರೆ ಸಾಗಲಿರುವ 30ಕಿ.ಮೀ.ರಸ್ತೆಯುದ್ದಕ್ಕೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸಕಲ ಸರ್ಕಾರಿ ಮತ್ತು ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಮಗನ ಅಗಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಾಂಜಲ್‌ ತಂದೆ ವೆಂಕಟೇಶ್‌, 5 ದಿನದ ಹಿಂದೆ ಮಗ ಕರೆ ಮಾಡಿದ್ದ. ಪ್ರಾಂಜಲ್‌ ಇಂಟೆಲಿಜೆನ್ಸ್‌ ಕಾರ್ಯವೊಂದರ ಮೇಲೆ ನಿಯೋಜನೆಗೊಂಡಿದ್ದೇನೆ ಎಂದು ಹೇಳಿದ್ದ. ನೀವು ಕರೆ ಮಾಡಬೇಡಿ ನಾನೇ ಮೆಸೆಜ್‌ ಮಾಡುತ್ತೇನೆ ಅಥವಾ ಕರೆ ಮಾಡುತ್ತೇನೆ ಎಂದು ಹೇಳಿದ್ದ. ಆಲ್‌ ಓಕೆ ಎಂಬ ಸಂದೇಶ ಬರುತ್ತಿತ್ತು. ಆದರೆ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅರಿವಿರಲಿಲ್ಲ. ಆಲ್‌ ಓಕೆ ಎಂದು ಹೇಳುತ್ತಲೇ ಕೊನೆಯುಸಿರೆಳೆದಿದ್ದಾನೆ. 2 ವರ್ಷದ ಹಿಂದೆ ಬೆಂಗಳೂರಿನ ಅದಿತಿಯನ್ನು ಮದುವೆಯಾಗಿದ್ದ. ಚೆನ್ನೈನ ಐಐಟಿಯಲ್ಲಿ ಅದಿತಿ ಪಿಎಚ್‌.ಡಿ ಮಾಡುತ್ತಿದ್ದಾಳೆ. ಒಬ್ಬ ಯೋಧನ ಪತ್ನಿಯಾಗಿ ಪತಿಗೆ ಸದಾ ನೈತಿಕ ಬೆಂಬಲ ನೀಡುತ್ತಿದ್ದಳು. ಪ್ರಾಂಜಲ್‌ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...