Homeಚಳವಳಿಬೀದಿಗೆ ಕುಳಿತ ಅಂಗನವಾಡಿ ತಾಯಂದಿರು: ಮುಂದುವರಿದ ಅನಿರ್ದಿಷ್ಟಾವಧಿ ಹೋರಾಟ

ಬೀದಿಗೆ ಕುಳಿತ ಅಂಗನವಾಡಿ ತಾಯಂದಿರು: ಮುಂದುವರಿದ ಅನಿರ್ದಿಷ್ಟಾವಧಿ ಹೋರಾಟ

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ರಾಜ್ಯ ಸಮಿತಿ) ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅಂಗನವಾಡಿ ನೌಕರರು ಸದಾ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಹೈಕೋರ್ಟ್ ಆದೇಶದಂತೆ ರಾಜ್ಯದ 47.73 ಲಕ್ಷ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ, ಆರೋಗ್ಯ ಸವಲತ್ತುಗಳನ್ನು ಖಾತ್ರಿಪಡಿಸಲಾಗಿದೆ. ಅಷ್ಟು ಮಾತ್ರವಲ್ಲದೆ ಕೊರೊನಾ ಫ್ರಂಟ್‌ಲೈನ್‌ ವಾರಿಯರ್ಸ್ ಆಗಿ ದುಡಿದು 59 ಜನರು ಮೃತಪಟ್ಟಿದ್ದಾರೆ. ಕೊರೊನಾ ಸಂದರ್ಭದಲ್ಲಿ ಇ- ಸರ್ವೇ, ಚುನಾವಣೆಗಳು, ವ್ಯಾಕ್ಸಿನ್‌ ಹಾಕುವುದು ಮತ್ತು ಅದರ ಸರ್ವೇಗಳು, ಪೋಷಣ್ ಅಭಿಯಾನ, ಪೋಷನ್‌ ಪಕ್ವಾಡ ಥರದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರಗಳು ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನೀತಿಗಳಿಂದಾಗಿ ಅನಿಯಂತ್ರಿತವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಗಳು ಹೆಚ್ಚಾಗಿ ಆಹಾರ ಧಾನ್ಯಗಳು ಸೇರಿದಂತೆ ಪ್ರತಿಯೊಂದು ವಸ್ತು ಮತ್ತು ಸೇವೆಯ ಬೆಲೆಗಳು ಹೆಚ್ಚಾಗಿದೆ. ಆದರೆ ಆದಾಯ ಮಾತ್ರ ಹೆಚ್ಚಳವಾಗಿಲ್ಲ. ಕೊರೊನಾ ಲಾಕ್‌ಡೌನ್‌ ಇದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ 2020 (ಎನ್‌ಇಪಿ) ಜಾರಿಗೆ ತಂದಿದೆ. ರಾಜ್ಯದಲ್ಲಿ ಸಂಬಂಧಿಸಿದ ಸಂಘಟನೆಗಳ ಬಳಿ ಚರ್ಚಿಸದೆ ಟಾಸ್ಕ್‌ ಫೋಸ್ಟ್‌ ಕಮಿಟಿಯನ್ನು ಎನ್‌ಇಪಿಯ ಜಾರಿಗಾಗಿ ನೇಮಕ ಮಾಡಲಾಗಿದೆ ಎಂದು ಅಂಗನವಾಡಿ ನೌಕರರರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಎನ್‌ಇಪಿಯ ದಸ್ತಾವೇಜಿನಲ್ಲಿ ಆಶಯಗಳು ಬೆಟ್ಟದಷ್ಟಿವೆ. ಆದರೆ ಜಾರಿಯ ಸಂದರ್ಭದಲ್ಲಿ ಸಂಪೂರ್ಣವಾಗಿ ಖಾಗೀಕರಣ ಮತ್ತು ವಾಣಿಜ್ಯೀಕರಣವಾಗುವ  ಅಂಶಗಳೇ ಹೆಚ್ಚಾಗಿವೆ. ಐಸಿಡಿಎಸ್ ಯೋಜನೆಗೆ ಸಂಬಂಧಿಸಿ 3ರಿಂದ 6 ವರ್ಷ ಅಂದರೆ 36 ತಿಂಗಳು ಮಗುವಿನಿಂದ 5 ವರ್ಷ 10 ತಿಂಗಳ ಮಕ್ಕಳು ಅಂನವಾಡಿ ಕೇಂದ್ರಕ್ಕೆ ದಾಖಲಾಗುತ್ತಿದ್ದರು. ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಅನಿಯಮಿತವಾಗಿ ಎಲ್‌ಕೆಜಿ ಯುಕೆಜಿಗಳನ್ನು ತರೆದಿದ್ದರಿಂದ ಅಂಗನವಾಡಿ ಮಕ್ಕಳನ್ನು ಅಲ್ಲಿ ದಾಖಲು ಮಾಡಿ ಅಂಗನವಾಡಿ ಕೇಂದ್ರಕ್ಕೆ  ಈಗಾಗಲೇ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಾಯಂದಿರು ತಿಳಿಸಿದ್ದಾರೆ.

5 ವರ್ಷ ತುಂಬುವುದಕ್ಕೆ ಮೊದಲು ಎನ್‌ಇಪಿಯ ಪ್ರಕಾರ 5 ವರ್ಷದ ಮಕ್ಕಳಿಗೆ ಬಾಲವಾಟಿಕಾ ಎನ್ನುವ ಪ್ರತ್ಯೇಕ ವ್ಯವಸ್ಥೆ ಮಾಡಿದರೆ ಅಂಗನವಾಡಿಗಳಲ್ಲಿ ಕೇವಲ 3 ವರ್ಷದ ಮಕ್ಕಳು ಮಾತ್ರ ಇರುತ್ತಾರೆ. ಇದರಿಂದ ಅಂಗನವಾಡಿ ಕೇಂದ್ರಗಳು ನಿಧಾನಗತಿಯಲ್ಲಿ ಮಕ್ಕಳೇ ಇಲ್ಲದ ಪರಿಸ್ಥಿತಿಗೆ ಬರುತ್ತವೆ. ಇದರಿಂದಾಗಿ  1974 ಮಕ್ಕಳ ರಾಷ್ಟ್ರೀಯ ನೀತಿ, 1975ರ ಐಸಿಡಿಎಸ್ ಯೋಜನೆಯ ಉದ್ದೇಶ, 2020ರ ವಿಶ್ವಸಂಸ್ಥೆಯ ಪೋಷಣೆ 2013ರ ಮಕ್ಕಳ ಶಿಕ್ಷಣ ರಾಷ್ಟ್ರೀಯ ನೀತಿ ಮತ್ತು ಗುರಿಗಳನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಪ್ರಮುಖ ಬೇಡಿಕೆಗಳು

  • ಅಂಗನವಾಡಿ ಕೇಂದ್ರಗಳಲ್ಲಿ ಪಾಲನೆಯೊಟ್ಟಿಗೆ ಎಲ್‌ಕೆಜಿ, ಯುಕೆಜಿ ಶಿಕ್ಷಣಕ್ಕೆ ಅವಕಾಶ ನೀಡಬೇಕು. ಸಮಾಜ ಬದಲಾವಣೆಯನ್ನು ಬಯಸುತ್ತಿದೆ. ಆದರೆ ಅಂಗನವಾಡಿ ಕೇಂದ್ರಗಳು ಮಾತ್ರ ಹಳೆಯ ರೀತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಬದಲಾದ ಸಮಾಜದ ರೀತಿಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳು ಮಕ್ಕಳನ್ನು ಆಕರ್ಷಿಸುವ ಕೇಂದ್ರಗಳಾಗಬೇಕು. ಆದ್ದರಿಂದ ಅಂಗವಾಡಿ ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರಗಳನ್ನಾಗಿಸಬೇಕು.
  • ಅಂಗನವಾಡಿ ಕೇಂದ್ರಗಳಿಗೆ ಎಲ್ಲ ರೀತಿಯ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. 1995ರಿಂದ ಪ್ರಾರಂಭವಾಗಿರುವ ಎಲ್ಲ ಯೋಜನೆಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಎಸ್‌ಎಸ್‌ಎಲ್‌ಸಿ ಪಾಸಾದವರು. ಅನೇಕರು ಪದವೀಧರರೂ ಇರುವುದರಿಂದ ಅವರಿಗೆ ತರಬೇತಿಯನ್ನು ಕೊಟ್ಟು ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ ಯುಕೆಜಿಯನ್ನು ಪ್ರಾರಂಭ ಮಾಡಬೇಕು.
  • ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭವಾಗುತ್ತಿರುವ ಮತ್ತು ಪ್ರಾರಂಭವಾಗಿರುವ ಎಲ್‌ಕೆಜಿ, ಯುಕೆಜಿಯನ್ನು ನಿಲ್ಲಿಸಬೇಕು. ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ 5 ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚವರಿ ಕೆಲಸ ನಿರ್ಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ 3 ರಿಂದ 8 ವರ್ಷದ ವರ್ಗೀಕರಣವನ್ನು ಕೈ ಬಿಟ್ಟು, 3ರಿಂದ 6 ವರ್ಷದ ಮಕ್ಕಳು  ಅಂಗನವಾಡಿ ಕೇಂದ್ರದಲ್ಲಿಯೇ ಇರಬೇಕು. 6 ವರ್ಷದೊಳಗಿನ ಮಕ್ಕಳಿಗೆ ಸಾರ್ವತ್ರಿಕ ಮತ್ತು ಉಚಿತ ಅನೌಪಚಾರಿಕ ಶಿಕ್ಷಣ ನೀಡಲು ಪ್ರತ್ಯೇಕ ಕಾಯ್ದೆಯನ್ನು ರೂಪಿಸಬೇಕು.
  • ಶಿಶುಪಾಲನಾ ಕೇಂದ್ರಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ತೆರೆಯದೆ ಪ್ರತ್ಯೇಕವಾಗಿ ತೆರೆಯಬೇಕು.  ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಪಾರಸ್ಸು ಮಾಡಿರುವ 339.48 ಲಕ್ಷ ಅನುದಾನ ಬಿಡಗಡೆ ಮಾಡಬೇಕು. ಅನುಕಂಪದ ಆಧಾರದಲ್ಲಿ ಕೆಸಲ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು.
  • ಕೋಳಿ ಮೊಟ್ಟೆಯನ್ನು ಆಹಾರ ಪದಾರ್ಥಗಳ ಜೊತೆಯಲ್ಲಿ ಸರಬರಾಜು ಮಾಡಬೇಕು. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮಾರ್ಚ್‌ನಿಂದ ನಮ್ಮ ಹಣದಿಂದ ಮೊಟ್ಟೆ ವಿತರಿಸುವುದಿಲ್ಲ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮತ್ತು ಐಎಲ್‌ಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿಷ್ಠ ವೇತನ ಜಾರಿ ಮಾಡಬೇಕು.
  • ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು. ಮಾಡುವ ತನಕ 26 ಸಾವಿರ ಮಾಸಿಕ ವೇತನ ನೀಡಬೇಕು. ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ಕೊಡಬೇಕು. ಮುಂಬಡ್ತಿ, ವರ್ಗಾವಣೆ, ಪೌಷ್ಟಿಕ ಆಹಾರವನ್ನು ಸರಬರಾಜು ಮಾಡುವ ಎಂಎಸ್‌ಪಿಟಿಸಿಗಳಲ್ಲಿ ರಾಜಕೀಯ ಮಧ್ಯ ಪ್ರವೇಶ ವನ್ನು ತಡೆಯಬೇಕು. ಮುಂಬಡ್ತಿ ನೀಡುವಾಗ ಅದೇ ಕೇಂದ್ರದಲ್ಲಿ ಅರ್ಹ ಅಂಗನವಾಡಿ ಸಹಾಯಕಿ ಇದ್ದರೆ ಅವರಿಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ, ತಾಲ್ಲೂಕಿನಿಂದ ತಾಲ್ಲೂಕಿಗೆ ಸ್ಥಾನ ಪಲ್ಲಟಕ್ಕೆ ಆದ್ಯತೆ ನೀಡಬೇಕು.
  • ಬಜೆಟ್‌ನಲ್ಲಿ ಕಡಿತವಾಗಿರುವ 8452.38 ಕೋಟಿ ರೂ. ವಾಪಸ್ ನೀಡಬೇಕು.  ಐಸಿಡಿಎಸ್ ಯೋಜನೆಯ ಅನುದಾನವನ್ನು ಹೆಚ್ಚಳ ಮಾಡಿ ದೇಶದ ಮಕ್ಕಳ ಮತ್ತು ಮಹಿಳೆಯರನ್ನು ರಕ್ಷಿಸಬೇಕು. ಅಂಗನವಾಡಿ ಕೇಂದ್ರಗಳ ಬಾಡಿಗೆಗೆ ಇರುವ ಮಾನದಂಡ ತೆಗೆಯಬೇಕು. ಆಯಾಯಾ ತಿಂಗಳಲ್ಲೇ ಬಾಡಿಗೆ ಹಣ ಬಿಡುಗಡೆ ಮಾಡಬೇಕು. ಬಿಎಲ್‌ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಬೇಕು.
  • ಮಾಹಿತಿ ಹಕ್ಕಿನಲ್ಲಿ ಮಾಹಿತಿಗಳನ್ನು ಇಲಾಖೆಯಿಂದಲೇ ಒದಗಿಸಬೇಕೆಂಬ ಆದೇಶ ಇದ್ದರೂ ಜಾರಿ ಮಾಡದೆ ಆರ್‌ಟಿಐ ಹೆಸರಿಂದ ಕಾರ್ಯಕರ್ತೆಯರಿಗೆ ಆಗುತ್ತಿರುವ ದಬ್ಬಾಳಿಕೆ ನಿಲ್ಲಬೇಕು. ಈಗಾಗಲೇ ನಿವೃತ್ತಿ ಸೌಲಭ್ಯದಿಂದ ವಂಚಿತರಾದ ಅಂಗನವಾಡಿ ನೌಕರರನ್ನು ಇಲಾಖೆಯ ಸಭೆಗಳಲ್ಲಿ ಚರ್ಚೆ ಆದಂತೆ ಖಾಯಂ ಪಿಂಚಣಿ ಯೋಜನೆಯಡಿ ತರಬೇಕು. 2016ರಿಂದ ನಿವೃತ್ತಿ ಆದವರಿಗೆ ಬಾಕಿ ಉಳಿದಿರುವ ನಿವೃತ್ತಿ ಹಣ ಬಿಡಗಡೆ ಮಾಡಬೇಕು.
  • 2021ರಲ್ಲಿ ನೀಡಬೇಕಿದ್ದ ಬೇಸಿಗೆ ರಜೆ ನೀಡಲ್ಲದಿರುವುದರಿಂದ 15 ದಿನಗಳ ಕಾಲ ಹೆಚ್ಚುವರಿ ವೇತನ ನೀಡಬೇಕು.

    ಇದನ್ನೂ ಓದಿರಿ: ಎಟಿ&ಎಸ್ ಕಾರ್ಮಿಕರ ಧರಣಿಗೆ 365 ದಿನಗಳು ತುಂಬಿದ ಸಂದರ್ಭದಲ್ಲಿ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...