Homeಕರ್ನಾಟಕಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ 'ಜಾತಿ ನಿಂದನೆ': ಆರೋಪ

ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ

- Advertisement -
- Advertisement -

ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲು ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿರುವ ಆರೋಪ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಕೇಳಿ ಬಂದಿದೆ.

ಅಂಗನವಾಡಿ ಸಹಾಯಕಿ ತೇಜ ಅವರು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಎಂಬವರು ಮತ್ತು ಆಕೆಯ ಪತ್ನಿ ಶೃತಿ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜ ಅವರು ಮನೆ ಮನೆಗೆ ತೆರಳಿ ಡೆಂಘೀ ಕುರಿತು ಅರಿವು ಮೂಡಿಸುತ್ತಿದ್ದರು. ಈ ವೇಳೆ ಗ್ರಾಮದ ಕುಮಾರಸ್ವಾಮಿ ಎಂಬವರ ಮನೆಯ ಒಳಗೆ ಹೋಗಿದ್ದರು. ತೇಜ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ಗೊತ್ತಾದ ಬಳಿಕ ಕುಮಾರಸ್ವಾಮಿ ಹಾಗೂ ಅವರ ಮನೆಯವರು ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೇಜ ಅವರು ಎರಡು ವರ್ಷಗಳಿಂದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಆದಿಕರ್ನಾಟಕ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ, ಸವರ್ಣೀಯರ ಮನೆಯೊಳಗೆ ಹೋದ ಕಾರಣ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

“ಜುಲೈ 4ರಂದು ಗುರುವಾರ ಸಂಜೆ 3:30ರ ಸುಮಾರಿಗೆ ನಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ತಿಳಿಸಲು ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಸಹಾಯಕಿಯಾದ ನಾನೂ ಕೂಡ ಹೋಗಿದ್ದೆ. ಕುಮಾರಸ್ವಾಮಿ ಎಂಬವರ ಮನೆಗೆ ಭೇಟಿ ನೀಡಿದ್ದ ವೇಳೆ, ನನ್ನನ್ನು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಮನೆಯ ಒಳಗೆ ಕರೆದು ಕಾಫಿ, ಟೀ ಕೊಟ್ಟು ಕಳಿಸಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

“ಜುಲೈ 9ರಂದು ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆ ಡೆಂಘೀ ಜ್ವರದ ಮಾಹಿತಿ ನೀಡಲು ಅವರ ಮನೆಗೆ ಹೋದಾಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಮ್ಮ ಅವರ ಹತ್ತಿರ ‘ನಿನ್ನ ಅಂಗನವಾಡಿ ಸಹಾಯಕಿ ಕೀಳು ಜಾತಿಯೆಂದು ತಿಳಿದಿದ್ದರೂ ನಮ್ಮ ಮನೆಯೊಳಗೆ ಹೇಗೆ ಕರೆದುಕೊಂಡು ಬಂದೆ. ನೀನು, ಅವಳು ಮಾಡಿದ ಅಡುಗೆಯನ್ನು ತಿಂದು ಹೇಗೆ ಒಗ್ಗಿಸಿಕೊಳ್ಳುತ್ತೀಯ, ಹೇಗೆ ಜೀರ್ಣಿಸಿಕೊಳ್ಳುತ್ತೀಯ?’ ಎಂದು ಕಾರ್ಯಕರ್ತೆಯನ್ನೂ ನಿಂದಿಸಿದ್ದಾರೆ. ನೀನು ಹೋಗಿ ಅಂಗನವಾಡಿ ಸಹಾಯಕಿಗೆ ಹೇಳಬೇಕೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರವನ್ನು ಕಾರ್ಯಕರ್ತೆ ನನ್ನ ಗಮನಕ್ಕೆ ತಂದ ಬಳಿಕ, ಜುಲೈ 10ರಂದು ಬೆಳಿಗ್ಗೆ 9ರ ಸುಮಾರಿಗೆ ಹೋಗಿ ‘ಟೀಚರ್ ಹತ್ರ ಹೇಳಿ ಕಳುಹಿಸಿದ್ದೀರಲ್ಲಾ ಏನೆಂದು ಕೇಳಿದೆ. ಆಗ, ಹೌದು ನಾವು ಹೇಳಿದ್ದು ನಿಜ. ನೀನು ಹೊರಗಡೆಯೇ ನಿಲ್ಲಬೇಕು. ಹೊಲೆಯ ಜಾತಿಗೆ ಸೇರಿದ ಶೂದ್ರ ಮುಂಡೇವು. ನಿನ್ನ ಸ್ಥಾನ ಆಚೆಯೇ ಇರಬೇಕು. ನೀನು ನಮ್ಮನೆಯ ಒಳಗೆ ಏಕೆ ಬಂದೆ? ಎಂದು ಕುಮಾರಸ್ವಾಮಿ, ಶೃತಿ ಹಾಗೂ ಭಾನುಮತಿ ಎಂಬುವವರು ನನ್ನನ್ನು ಥಳಿಸಲು ಮುಂದಾದರು” ಎಂದು ಅವಲತ್ತುಕೊಂಡಿದ್ದಾರೆ.

“ನಮ್ಮನ್ನು ಕುಮಾರಸ್ವಾಮಿಯವರು ಒಳಗೆ ಬನ್ನಿ ಎಂದು ಕರೆದ ಮೇಲೆಯೇ ನಾನು ಒಳಗೆ ಬಂದೆ. ನಾನಾಗಿ ಅಥವಾ ನನ್ನ ವೈಯಕ್ತಿಕ ವಿಚಾರಕ್ಕೆ ನಿಮ್ಮ ಮನೆಗೆ ಬಂದಿಲ್ಲ. ನಾನು ಕೆಲಸದ ವಿಚಾರವಾಗಿ ಬಂದು ನನ್ನ ಕರ್ತವ್ಯ ನಿಭಾಯಿಸಿದ್ದೇನೆಂದು ಹೇಳಿದರೂ ಕೂಡಾ, ‘ಮನೆಯಿಂದ ಹೊರಗೆಯೇ ನಿಂತು ಹೇಳಬೇಕಾಗಿತ್ತು. ನಿಮ್ಮ ಜಾತಿಯವರು ನಮ್ಮ ಮನೆಗೆ ಬರಬಾರದು, ನೀನು ಬಂದಿದ್ದು ತಪ್ಪು’ ಎಂದು ನನ್ನನ್ನೇ ದಬಾಯಿಸಿದ್ದಾರೆ” ಎಂದು ತೇಜ ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...