Homeಕರ್ನಾಟಕಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ 'ಜಾತಿ ನಿಂದನೆ': ಆರೋಪ

ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ

- Advertisement -
- Advertisement -

ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲು ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿರುವ ಆರೋಪ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಕೇಳಿ ಬಂದಿದೆ.

ಅಂಗನವಾಡಿ ಸಹಾಯಕಿ ತೇಜ ಅವರು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಎಂಬವರು ಮತ್ತು ಆಕೆಯ ಪತ್ನಿ ಶೃತಿ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜ ಅವರು ಮನೆ ಮನೆಗೆ ತೆರಳಿ ಡೆಂಘೀ ಕುರಿತು ಅರಿವು ಮೂಡಿಸುತ್ತಿದ್ದರು. ಈ ವೇಳೆ ಗ್ರಾಮದ ಕುಮಾರಸ್ವಾಮಿ ಎಂಬವರ ಮನೆಯ ಒಳಗೆ ಹೋಗಿದ್ದರು. ತೇಜ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ಗೊತ್ತಾದ ಬಳಿಕ ಕುಮಾರಸ್ವಾಮಿ ಹಾಗೂ ಅವರ ಮನೆಯವರು ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೇಜ ಅವರು ಎರಡು ವರ್ಷಗಳಿಂದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಆದಿಕರ್ನಾಟಕ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ, ಸವರ್ಣೀಯರ ಮನೆಯೊಳಗೆ ಹೋದ ಕಾರಣ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

“ಜುಲೈ 4ರಂದು ಗುರುವಾರ ಸಂಜೆ 3:30ರ ಸುಮಾರಿಗೆ ನಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ತಿಳಿಸಲು ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಸಹಾಯಕಿಯಾದ ನಾನೂ ಕೂಡ ಹೋಗಿದ್ದೆ. ಕುಮಾರಸ್ವಾಮಿ ಎಂಬವರ ಮನೆಗೆ ಭೇಟಿ ನೀಡಿದ್ದ ವೇಳೆ, ನನ್ನನ್ನು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಮನೆಯ ಒಳಗೆ ಕರೆದು ಕಾಫಿ, ಟೀ ಕೊಟ್ಟು ಕಳಿಸಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

“ಜುಲೈ 9ರಂದು ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆ ಡೆಂಘೀ ಜ್ವರದ ಮಾಹಿತಿ ನೀಡಲು ಅವರ ಮನೆಗೆ ಹೋದಾಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಮ್ಮ ಅವರ ಹತ್ತಿರ ‘ನಿನ್ನ ಅಂಗನವಾಡಿ ಸಹಾಯಕಿ ಕೀಳು ಜಾತಿಯೆಂದು ತಿಳಿದಿದ್ದರೂ ನಮ್ಮ ಮನೆಯೊಳಗೆ ಹೇಗೆ ಕರೆದುಕೊಂಡು ಬಂದೆ. ನೀನು, ಅವಳು ಮಾಡಿದ ಅಡುಗೆಯನ್ನು ತಿಂದು ಹೇಗೆ ಒಗ್ಗಿಸಿಕೊಳ್ಳುತ್ತೀಯ, ಹೇಗೆ ಜೀರ್ಣಿಸಿಕೊಳ್ಳುತ್ತೀಯ?’ ಎಂದು ಕಾರ್ಯಕರ್ತೆಯನ್ನೂ ನಿಂದಿಸಿದ್ದಾರೆ. ನೀನು ಹೋಗಿ ಅಂಗನವಾಡಿ ಸಹಾಯಕಿಗೆ ಹೇಳಬೇಕೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರವನ್ನು ಕಾರ್ಯಕರ್ತೆ ನನ್ನ ಗಮನಕ್ಕೆ ತಂದ ಬಳಿಕ, ಜುಲೈ 10ರಂದು ಬೆಳಿಗ್ಗೆ 9ರ ಸುಮಾರಿಗೆ ಹೋಗಿ ‘ಟೀಚರ್ ಹತ್ರ ಹೇಳಿ ಕಳುಹಿಸಿದ್ದೀರಲ್ಲಾ ಏನೆಂದು ಕೇಳಿದೆ. ಆಗ, ಹೌದು ನಾವು ಹೇಳಿದ್ದು ನಿಜ. ನೀನು ಹೊರಗಡೆಯೇ ನಿಲ್ಲಬೇಕು. ಹೊಲೆಯ ಜಾತಿಗೆ ಸೇರಿದ ಶೂದ್ರ ಮುಂಡೇವು. ನಿನ್ನ ಸ್ಥಾನ ಆಚೆಯೇ ಇರಬೇಕು. ನೀನು ನಮ್ಮನೆಯ ಒಳಗೆ ಏಕೆ ಬಂದೆ? ಎಂದು ಕುಮಾರಸ್ವಾಮಿ, ಶೃತಿ ಹಾಗೂ ಭಾನುಮತಿ ಎಂಬುವವರು ನನ್ನನ್ನು ಥಳಿಸಲು ಮುಂದಾದರು” ಎಂದು ಅವಲತ್ತುಕೊಂಡಿದ್ದಾರೆ.

“ನಮ್ಮನ್ನು ಕುಮಾರಸ್ವಾಮಿಯವರು ಒಳಗೆ ಬನ್ನಿ ಎಂದು ಕರೆದ ಮೇಲೆಯೇ ನಾನು ಒಳಗೆ ಬಂದೆ. ನಾನಾಗಿ ಅಥವಾ ನನ್ನ ವೈಯಕ್ತಿಕ ವಿಚಾರಕ್ಕೆ ನಿಮ್ಮ ಮನೆಗೆ ಬಂದಿಲ್ಲ. ನಾನು ಕೆಲಸದ ವಿಚಾರವಾಗಿ ಬಂದು ನನ್ನ ಕರ್ತವ್ಯ ನಿಭಾಯಿಸಿದ್ದೇನೆಂದು ಹೇಳಿದರೂ ಕೂಡಾ, ‘ಮನೆಯಿಂದ ಹೊರಗೆಯೇ ನಿಂತು ಹೇಳಬೇಕಾಗಿತ್ತು. ನಿಮ್ಮ ಜಾತಿಯವರು ನಮ್ಮ ಮನೆಗೆ ಬರಬಾರದು, ನೀನು ಬಂದಿದ್ದು ತಪ್ಪು’ ಎಂದು ನನ್ನನ್ನೇ ದಬಾಯಿಸಿದ್ದಾರೆ” ಎಂದು ತೇಜ ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...