Homeಕರ್ನಾಟಕಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ 'ಜಾತಿ ನಿಂದನೆ': ಆರೋಪ

ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ

- Advertisement -
- Advertisement -

ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲು ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿರುವ ಆರೋಪ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಕೇಳಿ ಬಂದಿದೆ.

ಅಂಗನವಾಡಿ ಸಹಾಯಕಿ ತೇಜ ಅವರು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಎಂಬವರು ಮತ್ತು ಆಕೆಯ ಪತ್ನಿ ಶೃತಿ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜ ಅವರು ಮನೆ ಮನೆಗೆ ತೆರಳಿ ಡೆಂಘೀ ಕುರಿತು ಅರಿವು ಮೂಡಿಸುತ್ತಿದ್ದರು. ಈ ವೇಳೆ ಗ್ರಾಮದ ಕುಮಾರಸ್ವಾಮಿ ಎಂಬವರ ಮನೆಯ ಒಳಗೆ ಹೋಗಿದ್ದರು. ತೇಜ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ಗೊತ್ತಾದ ಬಳಿಕ ಕುಮಾರಸ್ವಾಮಿ ಹಾಗೂ ಅವರ ಮನೆಯವರು ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೇಜ ಅವರು ಎರಡು ವರ್ಷಗಳಿಂದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಆದಿಕರ್ನಾಟಕ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ, ಸವರ್ಣೀಯರ ಮನೆಯೊಳಗೆ ಹೋದ ಕಾರಣ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

“ಜುಲೈ 4ರಂದು ಗುರುವಾರ ಸಂಜೆ 3:30ರ ಸುಮಾರಿಗೆ ನಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ತಿಳಿಸಲು ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಸಹಾಯಕಿಯಾದ ನಾನೂ ಕೂಡ ಹೋಗಿದ್ದೆ. ಕುಮಾರಸ್ವಾಮಿ ಎಂಬವರ ಮನೆಗೆ ಭೇಟಿ ನೀಡಿದ್ದ ವೇಳೆ, ನನ್ನನ್ನು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಮನೆಯ ಒಳಗೆ ಕರೆದು ಕಾಫಿ, ಟೀ ಕೊಟ್ಟು ಕಳಿಸಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

“ಜುಲೈ 9ರಂದು ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆ ಡೆಂಘೀ ಜ್ವರದ ಮಾಹಿತಿ ನೀಡಲು ಅವರ ಮನೆಗೆ ಹೋದಾಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಮ್ಮ ಅವರ ಹತ್ತಿರ ‘ನಿನ್ನ ಅಂಗನವಾಡಿ ಸಹಾಯಕಿ ಕೀಳು ಜಾತಿಯೆಂದು ತಿಳಿದಿದ್ದರೂ ನಮ್ಮ ಮನೆಯೊಳಗೆ ಹೇಗೆ ಕರೆದುಕೊಂಡು ಬಂದೆ. ನೀನು, ಅವಳು ಮಾಡಿದ ಅಡುಗೆಯನ್ನು ತಿಂದು ಹೇಗೆ ಒಗ್ಗಿಸಿಕೊಳ್ಳುತ್ತೀಯ, ಹೇಗೆ ಜೀರ್ಣಿಸಿಕೊಳ್ಳುತ್ತೀಯ?’ ಎಂದು ಕಾರ್ಯಕರ್ತೆಯನ್ನೂ ನಿಂದಿಸಿದ್ದಾರೆ. ನೀನು ಹೋಗಿ ಅಂಗನವಾಡಿ ಸಹಾಯಕಿಗೆ ಹೇಳಬೇಕೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರವನ್ನು ಕಾರ್ಯಕರ್ತೆ ನನ್ನ ಗಮನಕ್ಕೆ ತಂದ ಬಳಿಕ, ಜುಲೈ 10ರಂದು ಬೆಳಿಗ್ಗೆ 9ರ ಸುಮಾರಿಗೆ ಹೋಗಿ ‘ಟೀಚರ್ ಹತ್ರ ಹೇಳಿ ಕಳುಹಿಸಿದ್ದೀರಲ್ಲಾ ಏನೆಂದು ಕೇಳಿದೆ. ಆಗ, ಹೌದು ನಾವು ಹೇಳಿದ್ದು ನಿಜ. ನೀನು ಹೊರಗಡೆಯೇ ನಿಲ್ಲಬೇಕು. ಹೊಲೆಯ ಜಾತಿಗೆ ಸೇರಿದ ಶೂದ್ರ ಮುಂಡೇವು. ನಿನ್ನ ಸ್ಥಾನ ಆಚೆಯೇ ಇರಬೇಕು. ನೀನು ನಮ್ಮನೆಯ ಒಳಗೆ ಏಕೆ ಬಂದೆ? ಎಂದು ಕುಮಾರಸ್ವಾಮಿ, ಶೃತಿ ಹಾಗೂ ಭಾನುಮತಿ ಎಂಬುವವರು ನನ್ನನ್ನು ಥಳಿಸಲು ಮುಂದಾದರು” ಎಂದು ಅವಲತ್ತುಕೊಂಡಿದ್ದಾರೆ.

“ನಮ್ಮನ್ನು ಕುಮಾರಸ್ವಾಮಿಯವರು ಒಳಗೆ ಬನ್ನಿ ಎಂದು ಕರೆದ ಮೇಲೆಯೇ ನಾನು ಒಳಗೆ ಬಂದೆ. ನಾನಾಗಿ ಅಥವಾ ನನ್ನ ವೈಯಕ್ತಿಕ ವಿಚಾರಕ್ಕೆ ನಿಮ್ಮ ಮನೆಗೆ ಬಂದಿಲ್ಲ. ನಾನು ಕೆಲಸದ ವಿಚಾರವಾಗಿ ಬಂದು ನನ್ನ ಕರ್ತವ್ಯ ನಿಭಾಯಿಸಿದ್ದೇನೆಂದು ಹೇಳಿದರೂ ಕೂಡಾ, ‘ಮನೆಯಿಂದ ಹೊರಗೆಯೇ ನಿಂತು ಹೇಳಬೇಕಾಗಿತ್ತು. ನಿಮ್ಮ ಜಾತಿಯವರು ನಮ್ಮ ಮನೆಗೆ ಬರಬಾರದು, ನೀನು ಬಂದಿದ್ದು ತಪ್ಪು’ ಎಂದು ನನ್ನನ್ನೇ ದಬಾಯಿಸಿದ್ದಾರೆ” ಎಂದು ತೇಜ ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...