Homeಕರ್ನಾಟಕಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ 'ಜಾತಿ ನಿಂದನೆ': ಆರೋಪ

ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ

- Advertisement -
- Advertisement -

ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲು ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿರುವ ಆರೋಪ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಕೇಳಿ ಬಂದಿದೆ.

ಅಂಗನವಾಡಿ ಸಹಾಯಕಿ ತೇಜ ಅವರು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಎಂಬವರು ಮತ್ತು ಆಕೆಯ ಪತ್ನಿ ಶೃತಿ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜ ಅವರು ಮನೆ ಮನೆಗೆ ತೆರಳಿ ಡೆಂಘೀ ಕುರಿತು ಅರಿವು ಮೂಡಿಸುತ್ತಿದ್ದರು. ಈ ವೇಳೆ ಗ್ರಾಮದ ಕುಮಾರಸ್ವಾಮಿ ಎಂಬವರ ಮನೆಯ ಒಳಗೆ ಹೋಗಿದ್ದರು. ತೇಜ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ಗೊತ್ತಾದ ಬಳಿಕ ಕುಮಾರಸ್ವಾಮಿ ಹಾಗೂ ಅವರ ಮನೆಯವರು ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೇಜ ಅವರು ಎರಡು ವರ್ಷಗಳಿಂದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಆದಿಕರ್ನಾಟಕ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ, ಸವರ್ಣೀಯರ ಮನೆಯೊಳಗೆ ಹೋದ ಕಾರಣ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

“ಜುಲೈ 4ರಂದು ಗುರುವಾರ ಸಂಜೆ 3:30ರ ಸುಮಾರಿಗೆ ನಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ತಿಳಿಸಲು ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಸಹಾಯಕಿಯಾದ ನಾನೂ ಕೂಡ ಹೋಗಿದ್ದೆ. ಕುಮಾರಸ್ವಾಮಿ ಎಂಬವರ ಮನೆಗೆ ಭೇಟಿ ನೀಡಿದ್ದ ವೇಳೆ, ನನ್ನನ್ನು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಮನೆಯ ಒಳಗೆ ಕರೆದು ಕಾಫಿ, ಟೀ ಕೊಟ್ಟು ಕಳಿಸಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

“ಜುಲೈ 9ರಂದು ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆ ಡೆಂಘೀ ಜ್ವರದ ಮಾಹಿತಿ ನೀಡಲು ಅವರ ಮನೆಗೆ ಹೋದಾಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಮ್ಮ ಅವರ ಹತ್ತಿರ ‘ನಿನ್ನ ಅಂಗನವಾಡಿ ಸಹಾಯಕಿ ಕೀಳು ಜಾತಿಯೆಂದು ತಿಳಿದಿದ್ದರೂ ನಮ್ಮ ಮನೆಯೊಳಗೆ ಹೇಗೆ ಕರೆದುಕೊಂಡು ಬಂದೆ. ನೀನು, ಅವಳು ಮಾಡಿದ ಅಡುಗೆಯನ್ನು ತಿಂದು ಹೇಗೆ ಒಗ್ಗಿಸಿಕೊಳ್ಳುತ್ತೀಯ, ಹೇಗೆ ಜೀರ್ಣಿಸಿಕೊಳ್ಳುತ್ತೀಯ?’ ಎಂದು ಕಾರ್ಯಕರ್ತೆಯನ್ನೂ ನಿಂದಿಸಿದ್ದಾರೆ. ನೀನು ಹೋಗಿ ಅಂಗನವಾಡಿ ಸಹಾಯಕಿಗೆ ಹೇಳಬೇಕೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರವನ್ನು ಕಾರ್ಯಕರ್ತೆ ನನ್ನ ಗಮನಕ್ಕೆ ತಂದ ಬಳಿಕ, ಜುಲೈ 10ರಂದು ಬೆಳಿಗ್ಗೆ 9ರ ಸುಮಾರಿಗೆ ಹೋಗಿ ‘ಟೀಚರ್ ಹತ್ರ ಹೇಳಿ ಕಳುಹಿಸಿದ್ದೀರಲ್ಲಾ ಏನೆಂದು ಕೇಳಿದೆ. ಆಗ, ಹೌದು ನಾವು ಹೇಳಿದ್ದು ನಿಜ. ನೀನು ಹೊರಗಡೆಯೇ ನಿಲ್ಲಬೇಕು. ಹೊಲೆಯ ಜಾತಿಗೆ ಸೇರಿದ ಶೂದ್ರ ಮುಂಡೇವು. ನಿನ್ನ ಸ್ಥಾನ ಆಚೆಯೇ ಇರಬೇಕು. ನೀನು ನಮ್ಮನೆಯ ಒಳಗೆ ಏಕೆ ಬಂದೆ? ಎಂದು ಕುಮಾರಸ್ವಾಮಿ, ಶೃತಿ ಹಾಗೂ ಭಾನುಮತಿ ಎಂಬುವವರು ನನ್ನನ್ನು ಥಳಿಸಲು ಮುಂದಾದರು” ಎಂದು ಅವಲತ್ತುಕೊಂಡಿದ್ದಾರೆ.

“ನಮ್ಮನ್ನು ಕುಮಾರಸ್ವಾಮಿಯವರು ಒಳಗೆ ಬನ್ನಿ ಎಂದು ಕರೆದ ಮೇಲೆಯೇ ನಾನು ಒಳಗೆ ಬಂದೆ. ನಾನಾಗಿ ಅಥವಾ ನನ್ನ ವೈಯಕ್ತಿಕ ವಿಚಾರಕ್ಕೆ ನಿಮ್ಮ ಮನೆಗೆ ಬಂದಿಲ್ಲ. ನಾನು ಕೆಲಸದ ವಿಚಾರವಾಗಿ ಬಂದು ನನ್ನ ಕರ್ತವ್ಯ ನಿಭಾಯಿಸಿದ್ದೇನೆಂದು ಹೇಳಿದರೂ ಕೂಡಾ, ‘ಮನೆಯಿಂದ ಹೊರಗೆಯೇ ನಿಂತು ಹೇಳಬೇಕಾಗಿತ್ತು. ನಿಮ್ಮ ಜಾತಿಯವರು ನಮ್ಮ ಮನೆಗೆ ಬರಬಾರದು, ನೀನು ಬಂದಿದ್ದು ತಪ್ಪು’ ಎಂದು ನನ್ನನ್ನೇ ದಬಾಯಿಸಿದ್ದಾರೆ” ಎಂದು ತೇಜ ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...