Homeಕರ್ನಾಟಕಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ 'ಜಾತಿ ನಿಂದನೆ': ಆರೋಪ

ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ

- Advertisement -
- Advertisement -

ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲು ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿರುವ ಆರೋಪ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಕೇಳಿ ಬಂದಿದೆ.

ಅಂಗನವಾಡಿ ಸಹಾಯಕಿ ತೇಜ ಅವರು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಎಂಬವರು ಮತ್ತು ಆಕೆಯ ಪತ್ನಿ ಶೃತಿ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜ ಅವರು ಮನೆ ಮನೆಗೆ ತೆರಳಿ ಡೆಂಘೀ ಕುರಿತು ಅರಿವು ಮೂಡಿಸುತ್ತಿದ್ದರು. ಈ ವೇಳೆ ಗ್ರಾಮದ ಕುಮಾರಸ್ವಾಮಿ ಎಂಬವರ ಮನೆಯ ಒಳಗೆ ಹೋಗಿದ್ದರು. ತೇಜ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ಗೊತ್ತಾದ ಬಳಿಕ ಕುಮಾರಸ್ವಾಮಿ ಹಾಗೂ ಅವರ ಮನೆಯವರು ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೇಜ ಅವರು ಎರಡು ವರ್ಷಗಳಿಂದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಆದಿಕರ್ನಾಟಕ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ, ಸವರ್ಣೀಯರ ಮನೆಯೊಳಗೆ ಹೋದ ಕಾರಣ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

“ಜುಲೈ 4ರಂದು ಗುರುವಾರ ಸಂಜೆ 3:30ರ ಸುಮಾರಿಗೆ ನಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ತಿಳಿಸಲು ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಸಹಾಯಕಿಯಾದ ನಾನೂ ಕೂಡ ಹೋಗಿದ್ದೆ. ಕುಮಾರಸ್ವಾಮಿ ಎಂಬವರ ಮನೆಗೆ ಭೇಟಿ ನೀಡಿದ್ದ ವೇಳೆ, ನನ್ನನ್ನು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಮನೆಯ ಒಳಗೆ ಕರೆದು ಕಾಫಿ, ಟೀ ಕೊಟ್ಟು ಕಳಿಸಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

“ಜುಲೈ 9ರಂದು ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆ ಡೆಂಘೀ ಜ್ವರದ ಮಾಹಿತಿ ನೀಡಲು ಅವರ ಮನೆಗೆ ಹೋದಾಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಮ್ಮ ಅವರ ಹತ್ತಿರ ‘ನಿನ್ನ ಅಂಗನವಾಡಿ ಸಹಾಯಕಿ ಕೀಳು ಜಾತಿಯೆಂದು ತಿಳಿದಿದ್ದರೂ ನಮ್ಮ ಮನೆಯೊಳಗೆ ಹೇಗೆ ಕರೆದುಕೊಂಡು ಬಂದೆ. ನೀನು, ಅವಳು ಮಾಡಿದ ಅಡುಗೆಯನ್ನು ತಿಂದು ಹೇಗೆ ಒಗ್ಗಿಸಿಕೊಳ್ಳುತ್ತೀಯ, ಹೇಗೆ ಜೀರ್ಣಿಸಿಕೊಳ್ಳುತ್ತೀಯ?’ ಎಂದು ಕಾರ್ಯಕರ್ತೆಯನ್ನೂ ನಿಂದಿಸಿದ್ದಾರೆ. ನೀನು ಹೋಗಿ ಅಂಗನವಾಡಿ ಸಹಾಯಕಿಗೆ ಹೇಳಬೇಕೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರವನ್ನು ಕಾರ್ಯಕರ್ತೆ ನನ್ನ ಗಮನಕ್ಕೆ ತಂದ ಬಳಿಕ, ಜುಲೈ 10ರಂದು ಬೆಳಿಗ್ಗೆ 9ರ ಸುಮಾರಿಗೆ ಹೋಗಿ ‘ಟೀಚರ್ ಹತ್ರ ಹೇಳಿ ಕಳುಹಿಸಿದ್ದೀರಲ್ಲಾ ಏನೆಂದು ಕೇಳಿದೆ. ಆಗ, ಹೌದು ನಾವು ಹೇಳಿದ್ದು ನಿಜ. ನೀನು ಹೊರಗಡೆಯೇ ನಿಲ್ಲಬೇಕು. ಹೊಲೆಯ ಜಾತಿಗೆ ಸೇರಿದ ಶೂದ್ರ ಮುಂಡೇವು. ನಿನ್ನ ಸ್ಥಾನ ಆಚೆಯೇ ಇರಬೇಕು. ನೀನು ನಮ್ಮನೆಯ ಒಳಗೆ ಏಕೆ ಬಂದೆ? ಎಂದು ಕುಮಾರಸ್ವಾಮಿ, ಶೃತಿ ಹಾಗೂ ಭಾನುಮತಿ ಎಂಬುವವರು ನನ್ನನ್ನು ಥಳಿಸಲು ಮುಂದಾದರು” ಎಂದು ಅವಲತ್ತುಕೊಂಡಿದ್ದಾರೆ.

“ನಮ್ಮನ್ನು ಕುಮಾರಸ್ವಾಮಿಯವರು ಒಳಗೆ ಬನ್ನಿ ಎಂದು ಕರೆದ ಮೇಲೆಯೇ ನಾನು ಒಳಗೆ ಬಂದೆ. ನಾನಾಗಿ ಅಥವಾ ನನ್ನ ವೈಯಕ್ತಿಕ ವಿಚಾರಕ್ಕೆ ನಿಮ್ಮ ಮನೆಗೆ ಬಂದಿಲ್ಲ. ನಾನು ಕೆಲಸದ ವಿಚಾರವಾಗಿ ಬಂದು ನನ್ನ ಕರ್ತವ್ಯ ನಿಭಾಯಿಸಿದ್ದೇನೆಂದು ಹೇಳಿದರೂ ಕೂಡಾ, ‘ಮನೆಯಿಂದ ಹೊರಗೆಯೇ ನಿಂತು ಹೇಳಬೇಕಾಗಿತ್ತು. ನಿಮ್ಮ ಜಾತಿಯವರು ನಮ್ಮ ಮನೆಗೆ ಬರಬಾರದು, ನೀನು ಬಂದಿದ್ದು ತಪ್ಪು’ ಎಂದು ನನ್ನನ್ನೇ ದಬಾಯಿಸಿದ್ದಾರೆ” ಎಂದು ತೇಜ ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...