Homeಕರ್ನಾಟಕಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ 'ಜಾತಿ ನಿಂದನೆ': ಆರೋಪ

ಹಾಸನ | ಡೆಂಘೀ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ‘ಜಾತಿ ನಿಂದನೆ’: ಆರೋಪ

- Advertisement -
- Advertisement -

ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲು ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿರುವ ಆರೋಪ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಿಂದ ಕೇಳಿ ಬಂದಿದೆ.

ಅಂಗನವಾಡಿ ಸಹಾಯಕಿ ತೇಜ ಅವರು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಎಂಬವರು ಮತ್ತು ಆಕೆಯ ಪತ್ನಿ ಶೃತಿ ವಿರುದ್ದ ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜ ಅವರು ಮನೆ ಮನೆಗೆ ತೆರಳಿ ಡೆಂಘೀ ಕುರಿತು ಅರಿವು ಮೂಡಿಸುತ್ತಿದ್ದರು. ಈ ವೇಳೆ ಗ್ರಾಮದ ಕುಮಾರಸ್ವಾಮಿ ಎಂಬವರ ಮನೆಯ ಒಳಗೆ ಹೋಗಿದ್ದರು. ತೇಜ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎಂದು ಗೊತ್ತಾದ ಬಳಿಕ ಕುಮಾರಸ್ವಾಮಿ ಹಾಗೂ ಅವರ ಮನೆಯವರು ನಿಂದಿಸಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ತೇಜ ಅವರು ಎರಡು ವರ್ಷಗಳಿಂದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಆದಿಕರ್ನಾಟಕ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ, ಸವರ್ಣೀಯರ ಮನೆಯೊಳಗೆ ಹೋದ ಕಾರಣ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

“ಜುಲೈ 4ರಂದು ಗುರುವಾರ ಸಂಜೆ 3:30ರ ಸುಮಾರಿಗೆ ನಮ್ಮ ಗ್ರಾಮದ ಎಲ್ಲಾ ಮನೆಗಳಿಗೆ ಡೆಂಘೀ ಜ್ವರದ ಬಗ್ಗೆ ಮಾಹಿತಿ ತಿಳಿಸಲು ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಸಹಾಯಕಿಯಾದ ನಾನೂ ಕೂಡ ಹೋಗಿದ್ದೆ. ಕುಮಾರಸ್ವಾಮಿ ಎಂಬವರ ಮನೆಗೆ ಭೇಟಿ ನೀಡಿದ್ದ ವೇಳೆ, ನನ್ನನ್ನು ಹಾಗೂ ಅಂಗನವಾಡಿ ಕಾರ್ಯಕರ್ತೆಯನ್ನು ಮನೆಯ ಒಳಗೆ ಕರೆದು ಕಾಫಿ, ಟೀ ಕೊಟ್ಟು ಕಳಿಸಿದ್ದರು” ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

“ಜುಲೈ 9ರಂದು ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತೆ ಡೆಂಘೀ ಜ್ವರದ ಮಾಹಿತಿ ನೀಡಲು ಅವರ ಮನೆಗೆ ಹೋದಾಗ ಅಂಗನವಾಡಿ ಕಾರ್ಯಕರ್ತೆ ಮಂಗಳ ಗೌರಮ್ಮ ಅವರ ಹತ್ತಿರ ‘ನಿನ್ನ ಅಂಗನವಾಡಿ ಸಹಾಯಕಿ ಕೀಳು ಜಾತಿಯೆಂದು ತಿಳಿದಿದ್ದರೂ ನಮ್ಮ ಮನೆಯೊಳಗೆ ಹೇಗೆ ಕರೆದುಕೊಂಡು ಬಂದೆ. ನೀನು, ಅವಳು ಮಾಡಿದ ಅಡುಗೆಯನ್ನು ತಿಂದು ಹೇಗೆ ಒಗ್ಗಿಸಿಕೊಳ್ಳುತ್ತೀಯ, ಹೇಗೆ ಜೀರ್ಣಿಸಿಕೊಳ್ಳುತ್ತೀಯ?’ ಎಂದು ಕಾರ್ಯಕರ್ತೆಯನ್ನೂ ನಿಂದಿಸಿದ್ದಾರೆ. ನೀನು ಹೋಗಿ ಅಂಗನವಾಡಿ ಸಹಾಯಕಿಗೆ ಹೇಳಬೇಕೆಂದು ತಿಳಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ವಿಚಾರವನ್ನು ಕಾರ್ಯಕರ್ತೆ ನನ್ನ ಗಮನಕ್ಕೆ ತಂದ ಬಳಿಕ, ಜುಲೈ 10ರಂದು ಬೆಳಿಗ್ಗೆ 9ರ ಸುಮಾರಿಗೆ ಹೋಗಿ ‘ಟೀಚರ್ ಹತ್ರ ಹೇಳಿ ಕಳುಹಿಸಿದ್ದೀರಲ್ಲಾ ಏನೆಂದು ಕೇಳಿದೆ. ಆಗ, ಹೌದು ನಾವು ಹೇಳಿದ್ದು ನಿಜ. ನೀನು ಹೊರಗಡೆಯೇ ನಿಲ್ಲಬೇಕು. ಹೊಲೆಯ ಜಾತಿಗೆ ಸೇರಿದ ಶೂದ್ರ ಮುಂಡೇವು. ನಿನ್ನ ಸ್ಥಾನ ಆಚೆಯೇ ಇರಬೇಕು. ನೀನು ನಮ್ಮನೆಯ ಒಳಗೆ ಏಕೆ ಬಂದೆ? ಎಂದು ಕುಮಾರಸ್ವಾಮಿ, ಶೃತಿ ಹಾಗೂ ಭಾನುಮತಿ ಎಂಬುವವರು ನನ್ನನ್ನು ಥಳಿಸಲು ಮುಂದಾದರು” ಎಂದು ಅವಲತ್ತುಕೊಂಡಿದ್ದಾರೆ.

“ನಮ್ಮನ್ನು ಕುಮಾರಸ್ವಾಮಿಯವರು ಒಳಗೆ ಬನ್ನಿ ಎಂದು ಕರೆದ ಮೇಲೆಯೇ ನಾನು ಒಳಗೆ ಬಂದೆ. ನಾನಾಗಿ ಅಥವಾ ನನ್ನ ವೈಯಕ್ತಿಕ ವಿಚಾರಕ್ಕೆ ನಿಮ್ಮ ಮನೆಗೆ ಬಂದಿಲ್ಲ. ನಾನು ಕೆಲಸದ ವಿಚಾರವಾಗಿ ಬಂದು ನನ್ನ ಕರ್ತವ್ಯ ನಿಭಾಯಿಸಿದ್ದೇನೆಂದು ಹೇಳಿದರೂ ಕೂಡಾ, ‘ಮನೆಯಿಂದ ಹೊರಗೆಯೇ ನಿಂತು ಹೇಳಬೇಕಾಗಿತ್ತು. ನಿಮ್ಮ ಜಾತಿಯವರು ನಮ್ಮ ಮನೆಗೆ ಬರಬಾರದು, ನೀನು ಬಂದಿದ್ದು ತಪ್ಪು’ ಎಂದು ನನ್ನನ್ನೇ ದಬಾಯಿಸಿದ್ದಾರೆ” ಎಂದು ತೇಜ ಹೇಳಿದ್ದಾರೆ.

ಇದನ್ನೂ ಓದಿ : ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...