Homeಮುಖಪುಟಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

- Advertisement -
- Advertisement -

ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿರುವ ಕೋರ್ಟ್, “ವಿವಿಧ ಕಲ್ಯಾಣ ಯೋಜನೆಗಳ ಬೆನ್ನೆಲುಬಾಗಿರುವ ಮತ್ತು ಸಮಾಜಕ್ಕೆ ಪ್ರಮುಖ ಸೇವೆಗಳನ್ನು ಸಲ್ಲಿಸುತ್ತಿರುವ ಈ ವರ್ಗಕ್ಕೆ ಕಡಿಮೆ ಸಂಭಾವನೆ ಕೊಡಲಾಗುತ್ತಿದೆ” ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮನವಿಯನ್ನು ತಿರಸ್ಕರಿಸಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಗ್ರಾಚ್ಯುಟಿಗೆ ಅರ್ಹರಲ್ಲ ಎಂದು ಸರ್ಕಾರಗಳು ವಾದಿಸಿದ್ದವು. ಗುಜರಾತ್‌ನ ಐವರು ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ 16 ವರ್ಷಗಳ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ ದೊರೆತಿದೆ.

ಇದನ್ನೂ ಓದಿರಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಸರ್ವೋಚ್ಚ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ತೀರ್ಪನ್ನು ನೀಡಿದೆ. “ಧ್ವನಿಯಿಲ್ಲದವರಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಉತ್ತಮ ಸೇವಾ ಪರಿಸ್ಥಿತಿಗಳನ್ನು ಒದಗಿಸುವ ವಿಧಾನಗಳನ್ನು ಕಂಡುಕೊಳ್ಳಿರಿ” ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

2017ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ನಡೆದ ಹೋರಾಟದಲ್ಲಿ ಸೋತ ನಂತರ, ಅಂಗನವಾಡಿ ಕಾರ್ಯಕರ್ತೆಯರು ಸುಪ್ರೀಂ ಮೆಟ್ಟಿಲೇರಿದ್ದರು.

“ಅವರು ಪೂರ್ಣಾವಧಿ ನೌಕರರಲ್ಲ” ಎಂಬ ಸರ್ಕಾರಗಳ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇಬ್ಬರೂ ನ್ಯಾಯಾಧೀಶರು ಈ ವಿಷಯದ ಬಗ್ಗೆ ಒಮ್ಮತವನ್ನು ಹೊಂದಿದ್ದರು. ಆದರೆ ಪ್ರತ್ಯೇಕ ತೀರ್ಪುಗಳನ್ನು ನೀಡಿದರು. ಸಾಮಾಜಿಕ ಭದ್ರತಾ ಶಾಸನಗಳನ್ನು ಯಾವಾಗಲೂ ಉದಾರವಾಗಿ ಅರ್ಥೈಸಬೇಕು ಎಂದಿರುವ ನ್ಯಾಯಮೂರ್ತಿ ರಸ್ತೋಗಿ ಅಭಿಪ್ರಾಯಪಟ್ಟರು.

“ಎಡಬ್ಲ್ಯೂಡಬ್ಲ್ಯೂಗಳು ಮತ್ತು ಎಡಬ್ಲ್ಯೂಎಚ್‌ಗಳಿಗೆ ಎಲ್ಲಾ ವ್ಯಾಪಕ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಫಲಾನುಭವಿಗಳ ಗುರುತಿಸುವಿಕೆ, ಪೌಷ್ಠಿಕಾಂಶದ ಆಹಾರವನ್ನು ಬೇಯಿಸುವುದು, ಮಕ್ಕಳಿಗೆ ಪ್ರಿಸ್ಕೂಲ್ ನಡೆಸುವುದು, ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳ ಅನುಷ್ಠಾನವನ್ನು ಇವರಿಗೆ ವಹಿಸಲಾಗಿದೆ. ಆದ್ದರಿಂದ ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ನಿಯೋಜಿಸಲಾದ ಕೆಲಸವು ಅರೆಕಾಲಿಕ ಕೆಲಸ ಎಂಬ ವಾದವನ್ನು ಒಪ್ಪಿಕೊಳ್ಳುವುದು ಅಸಾಧ್ಯ” ಎಂದು ಜಸ್ಟೀಸ್ ಓಕಾ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

“ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ಕಾಡುತ್ತಿರುವ ಸಮಸ್ಯೆಗಳ ಕಡೆಗೆ ನಾವು ನೋಡಿದರೆ ಅವರು ಸಂಬಳದಿಂದ ವಂಚಿತರಾಗಿದ್ದಾರೆ ಮತ್ತು ರಾಜ್ಯದ ಉದ್ಯೋಗಿಗಳಿಗೆ ಇತರ ಪ್ರಯೋಜನಗಳು ಲಭ್ಯವಿವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಸ್ವರೂಪದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದು, ಗುಜರಾತ್, ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ವ್ಯತಿರಿಕ್ತ ತೀರ್ಪುಗಳನ್ನು ನೀಡಿವೆ. ಈಗ ಸುಪ್ರೀಂ ತೀರ್ಪು ನೀಡುವ ಮೂಲಕ ಕಾನೂನನ್ನು ಇತ್ಯರ್ಥಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...