Homeಮುಖಪುಟಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

- Advertisement -
- Advertisement -

ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿರುವ ಕೋರ್ಟ್, “ವಿವಿಧ ಕಲ್ಯಾಣ ಯೋಜನೆಗಳ ಬೆನ್ನೆಲುಬಾಗಿರುವ ಮತ್ತು ಸಮಾಜಕ್ಕೆ ಪ್ರಮುಖ ಸೇವೆಗಳನ್ನು ಸಲ್ಲಿಸುತ್ತಿರುವ ಈ ವರ್ಗಕ್ಕೆ ಕಡಿಮೆ ಸಂಭಾವನೆ ಕೊಡಲಾಗುತ್ತಿದೆ” ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮನವಿಯನ್ನು ತಿರಸ್ಕರಿಸಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಗ್ರಾಚ್ಯುಟಿಗೆ ಅರ್ಹರಲ್ಲ ಎಂದು ಸರ್ಕಾರಗಳು ವಾದಿಸಿದ್ದವು. ಗುಜರಾತ್‌ನ ಐವರು ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ 16 ವರ್ಷಗಳ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ ದೊರೆತಿದೆ.

ಇದನ್ನೂ ಓದಿರಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಸರ್ವೋಚ್ಚ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ತೀರ್ಪನ್ನು ನೀಡಿದೆ. “ಧ್ವನಿಯಿಲ್ಲದವರಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಉತ್ತಮ ಸೇವಾ ಪರಿಸ್ಥಿತಿಗಳನ್ನು ಒದಗಿಸುವ ವಿಧಾನಗಳನ್ನು ಕಂಡುಕೊಳ್ಳಿರಿ” ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

2017ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ನಡೆದ ಹೋರಾಟದಲ್ಲಿ ಸೋತ ನಂತರ, ಅಂಗನವಾಡಿ ಕಾರ್ಯಕರ್ತೆಯರು ಸುಪ್ರೀಂ ಮೆಟ್ಟಿಲೇರಿದ್ದರು.

“ಅವರು ಪೂರ್ಣಾವಧಿ ನೌಕರರಲ್ಲ” ಎಂಬ ಸರ್ಕಾರಗಳ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇಬ್ಬರೂ ನ್ಯಾಯಾಧೀಶರು ಈ ವಿಷಯದ ಬಗ್ಗೆ ಒಮ್ಮತವನ್ನು ಹೊಂದಿದ್ದರು. ಆದರೆ ಪ್ರತ್ಯೇಕ ತೀರ್ಪುಗಳನ್ನು ನೀಡಿದರು. ಸಾಮಾಜಿಕ ಭದ್ರತಾ ಶಾಸನಗಳನ್ನು ಯಾವಾಗಲೂ ಉದಾರವಾಗಿ ಅರ್ಥೈಸಬೇಕು ಎಂದಿರುವ ನ್ಯಾಯಮೂರ್ತಿ ರಸ್ತೋಗಿ ಅಭಿಪ್ರಾಯಪಟ್ಟರು.

“ಎಡಬ್ಲ್ಯೂಡಬ್ಲ್ಯೂಗಳು ಮತ್ತು ಎಡಬ್ಲ್ಯೂಎಚ್‌ಗಳಿಗೆ ಎಲ್ಲಾ ವ್ಯಾಪಕ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಫಲಾನುಭವಿಗಳ ಗುರುತಿಸುವಿಕೆ, ಪೌಷ್ಠಿಕಾಂಶದ ಆಹಾರವನ್ನು ಬೇಯಿಸುವುದು, ಮಕ್ಕಳಿಗೆ ಪ್ರಿಸ್ಕೂಲ್ ನಡೆಸುವುದು, ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳ ಅನುಷ್ಠಾನವನ್ನು ಇವರಿಗೆ ವಹಿಸಲಾಗಿದೆ. ಆದ್ದರಿಂದ ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ನಿಯೋಜಿಸಲಾದ ಕೆಲಸವು ಅರೆಕಾಲಿಕ ಕೆಲಸ ಎಂಬ ವಾದವನ್ನು ಒಪ್ಪಿಕೊಳ್ಳುವುದು ಅಸಾಧ್ಯ” ಎಂದು ಜಸ್ಟೀಸ್ ಓಕಾ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

“ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ಕಾಡುತ್ತಿರುವ ಸಮಸ್ಯೆಗಳ ಕಡೆಗೆ ನಾವು ನೋಡಿದರೆ ಅವರು ಸಂಬಳದಿಂದ ವಂಚಿತರಾಗಿದ್ದಾರೆ ಮತ್ತು ರಾಜ್ಯದ ಉದ್ಯೋಗಿಗಳಿಗೆ ಇತರ ಪ್ರಯೋಜನಗಳು ಲಭ್ಯವಿವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಸ್ವರೂಪದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದು, ಗುಜರಾತ್, ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ವ್ಯತಿರಿಕ್ತ ತೀರ್ಪುಗಳನ್ನು ನೀಡಿವೆ. ಈಗ ಸುಪ್ರೀಂ ತೀರ್ಪು ನೀಡುವ ಮೂಲಕ ಕಾನೂನನ್ನು ಇತ್ಯರ್ಥಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...