Homeಕರ್ನಾಟಕ10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮಾತನಾಡಿ, “ಕಳೆದ ಹಲವು ವರ್ಷಗಳಿಂದ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈ ಹಿಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹10,000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಏಳು ತಿಂಗಳು ಕಳೆದರೂ ಆ ಭರವಸೆ ಈಡೇರಿಲ್ಲ” ಎಂದು ತಿಳಿಸಿದರು.

ಅಲ್ಲದೆ, “ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ₹42,000 ಆಶಾ ಕಾರ್ಯಕರ್ತೆಯರಿಗೆ ₹1,000 ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಹೇಳಿದ್ದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ” ಎಂದು ನಾಗಲಕ್ಷ್ಮಿ ಅವರು ಬೇಸರ ವ್ಯಕ್ತಪಡಿಸಿದರು.

ಪ್ರಮುಖ ಬೇಡಿಕೆಗಳು

  • ಮುಖ್ಯಮಂತ್ರಿಗಳು ಘೋಷಿಸಿದಂತೆ, ಮಾಸಿಕ ₹10,000 ಗೌರವಧನವನ್ನು ಏಪ್ರಿಲ್ ತಿಂಗಳಿನಿಂದ ಜಾರಿಗೆ ತರಬೇಕು.
  • 60 ವರ್ಷ ಪೂರೈಸಿದ ಆಶಾ ಕಾರ್ಯಕರ್ತೆಯರನ್ನು ಯಾವುದೇ ಪೂರ್ವ ಸೂಚನೆ ಅಥವಾ ಪರಿಹಾರ ನೀಡದೆ ಸೇವೆಯಿಂದ ತೆಗೆದುಹಾಕುವುದನ್ನು ನಿಲ್ಲಿಸಬೇಕು. ನಿವೃತ್ತರಾದ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು (ಒಟ್ಟು ಮೊತ್ತದ ಪರಿಹಾರ) ನೀಡಬೇಕು.
  • ನಗರ ಪ್ರದೇಶಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ₹2,000 ಗೌರವಧನ ನೀಡಬೇಕು.
  • ಕೇಂದ್ರ ಸರ್ಕಾರ ಜೂನ್-ಜುಲೈನಲ್ಲಿ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು.
  • ಜನಸಂಖ್ಯೆ ಮಿತಿಯ ಹೆಸರಿನಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
  • ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.

ಈ ಸತ್ಯಾಗ್ರಹದಲ್ಲಿ ಸಂಘದ ಉಪಾಧ್ಯಕ್ಷೆ ಟಿ.ಸಿ. ರಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪಾಧ್ಯಕ್ಷೆ ನಾಗರತ್ನ, ಮತ್ತು ಇತರ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವ ನಿರ್ಧಾರಕ್ಕೆ ಬಂದಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದಾರೆ.

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...