Homeಕರ್ನಾಟಕ10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮಾತನಾಡಿ, “ಕಳೆದ ಹಲವು ವರ್ಷಗಳಿಂದ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈ ಹಿಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹10,000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಏಳು ತಿಂಗಳು ಕಳೆದರೂ ಆ ಭರವಸೆ ಈಡೇರಿಲ್ಲ” ಎಂದು ತಿಳಿಸಿದರು.

ಅಲ್ಲದೆ, “ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ₹42,000 ಆಶಾ ಕಾರ್ಯಕರ್ತೆಯರಿಗೆ ₹1,000 ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಹೇಳಿದ್ದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ” ಎಂದು ನಾಗಲಕ್ಷ್ಮಿ ಅವರು ಬೇಸರ ವ್ಯಕ್ತಪಡಿಸಿದರು.

ಪ್ರಮುಖ ಬೇಡಿಕೆಗಳು

  • ಮುಖ್ಯಮಂತ್ರಿಗಳು ಘೋಷಿಸಿದಂತೆ, ಮಾಸಿಕ ₹10,000 ಗೌರವಧನವನ್ನು ಏಪ್ರಿಲ್ ತಿಂಗಳಿನಿಂದ ಜಾರಿಗೆ ತರಬೇಕು.
  • 60 ವರ್ಷ ಪೂರೈಸಿದ ಆಶಾ ಕಾರ್ಯಕರ್ತೆಯರನ್ನು ಯಾವುದೇ ಪೂರ್ವ ಸೂಚನೆ ಅಥವಾ ಪರಿಹಾರ ನೀಡದೆ ಸೇವೆಯಿಂದ ತೆಗೆದುಹಾಕುವುದನ್ನು ನಿಲ್ಲಿಸಬೇಕು. ನಿವೃತ್ತರಾದ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು (ಒಟ್ಟು ಮೊತ್ತದ ಪರಿಹಾರ) ನೀಡಬೇಕು.
  • ನಗರ ಪ್ರದೇಶಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ₹2,000 ಗೌರವಧನ ನೀಡಬೇಕು.
  • ಕೇಂದ್ರ ಸರ್ಕಾರ ಜೂನ್-ಜುಲೈನಲ್ಲಿ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು.
  • ಜನಸಂಖ್ಯೆ ಮಿತಿಯ ಹೆಸರಿನಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
  • ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.

ಈ ಸತ್ಯಾಗ್ರಹದಲ್ಲಿ ಸಂಘದ ಉಪಾಧ್ಯಕ್ಷೆ ಟಿ.ಸಿ. ರಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪಾಧ್ಯಕ್ಷೆ ನಾಗರತ್ನ, ಮತ್ತು ಇತರ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವ ನಿರ್ಧಾರಕ್ಕೆ ಬಂದಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದಾರೆ.

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...