Homeಕರ್ನಾಟಕ10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

10,000 ರೂ. ಗೌರವಧನಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರಿಂದ ಆ.12ರಿಂದ ಅಹೋರಾತ್ರಿ ಸತ್ಯಾಗ್ರಹ

- Advertisement -
- Advertisement -

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯದ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಮಾತನಾಡಿ, “ಕಳೆದ ಹಲವು ವರ್ಷಗಳಿಂದ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ಈ ಹಿಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹10,000 ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಏಳು ತಿಂಗಳು ಕಳೆದರೂ ಆ ಭರವಸೆ ಈಡೇರಿಲ್ಲ” ಎಂದು ತಿಳಿಸಿದರು.

ಅಲ್ಲದೆ, “ಕಳೆದ ಬಜೆಟ್‌ನಲ್ಲಿ ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತೆಯರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ₹42,000 ಆಶಾ ಕಾರ್ಯಕರ್ತೆಯರಿಗೆ ₹1,000 ಗೌರವಧನ ಹೆಚ್ಚಿಸುವುದಾಗಿ ಸರ್ಕಾರ ಹೇಳಿದ್ದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ” ಎಂದು ನಾಗಲಕ್ಷ್ಮಿ ಅವರು ಬೇಸರ ವ್ಯಕ್ತಪಡಿಸಿದರು.

ಪ್ರಮುಖ ಬೇಡಿಕೆಗಳು

  • ಮುಖ್ಯಮಂತ್ರಿಗಳು ಘೋಷಿಸಿದಂತೆ, ಮಾಸಿಕ ₹10,000 ಗೌರವಧನವನ್ನು ಏಪ್ರಿಲ್ ತಿಂಗಳಿನಿಂದ ಜಾರಿಗೆ ತರಬೇಕು.
  • 60 ವರ್ಷ ಪೂರೈಸಿದ ಆಶಾ ಕಾರ್ಯಕರ್ತೆಯರನ್ನು ಯಾವುದೇ ಪೂರ್ವ ಸೂಚನೆ ಅಥವಾ ಪರಿಹಾರ ನೀಡದೆ ಸೇವೆಯಿಂದ ತೆಗೆದುಹಾಕುವುದನ್ನು ನಿಲ್ಲಿಸಬೇಕು. ನಿವೃತ್ತರಾದ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು (ಒಟ್ಟು ಮೊತ್ತದ ಪರಿಹಾರ) ನೀಡಬೇಕು.
  • ನಗರ ಪ್ರದೇಶಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ₹2,000 ಗೌರವಧನ ನೀಡಬೇಕು.
  • ಕೇಂದ್ರ ಸರ್ಕಾರ ಜೂನ್-ಜುಲೈನಲ್ಲಿ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲೂ ಜಾರಿಗೆ ತರಬೇಕು.
  • ಜನಸಂಖ್ಯೆ ಮಿತಿಯ ಹೆಸರಿನಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
  • ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು.

ಈ ಸತ್ಯಾಗ್ರಹದಲ್ಲಿ ಸಂಘದ ಉಪಾಧ್ಯಕ್ಷೆ ಟಿ.ಸಿ. ರಮಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪಾಧ್ಯಕ್ಷೆ ನಾಗರತ್ನ, ಮತ್ತು ಇತರ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವ ನಿರ್ಧಾರಕ್ಕೆ ಬಂದಿರುವುದಾಗಿ ಸಂಘದ ಮುಖಂಡರು ತಿಳಿಸಿದ್ದಾರೆ.

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...