Homeಮುಖಪುಟಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

- Advertisement -
- Advertisement -

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ ಸಮಿತಿಗೆ ಬಿಜೆಡಿ ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷರಿಗೆ ಮಾರ್ಚ್ 28ರಂದು ಬರೆದ ಪತ್ರದಲ್ಲಿ ಪಾತ್ರಾ ಅವರು, “ಸಾರ್ವಜನಿಕ ಹೇಳಿಕೆಯೊಂದರಲ್ಲಿ ದಿವಂಗತ ಬಿಜು ಪಟ್ನಾಯಕ್ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ವ್ಯಕ್ತಿಯ ಅಡಿಯಲ್ಲಿ ಕೆಲಸ ಮಾಡಲು ನನ್ನ ಮನಸ್ಸಾಕ್ಷಿ ಒಪ್ಪುತ್ತಿಲ್ಲ” ಎಂದು ಹೇಳಿದ್ದಾರೆ.

ಮಾರ್ಚ್ 27ರಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ದುಬೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಮೆರಿಕದ ಹಣ ಹಾಗೂ ಸಿಐಎ ಏಜೆಂಟ್‌ಗಳ ಸಹಯೋಗದೊಂದಿಗೆ ಚೀನಾದ ವಿರುದ್ಧ 1962ರ ಯುದ್ಧವನ್ನು ಮಾಡಿದ್ದರು ಎಂದು ಆರೋಪಿಸಿದ್ದರು. ಬಿಜು ಪಟ್ನಾಯಕ್ ಅವರನ್ನು ಅಮೆರಿಕ ಸರ್ಕಾರ, ಸಿಐಎ ಮತ್ತು ನೆಹರೂ ನಡುವಿನ ‘ಸಂಪರ್ಕ ಕೊಂಡಿ’ ಎಂದು ಹೇಳಿದ್ದರು.

ಬಿಜು ಪಟ್ನಾಯಕ್ ಅವರು ಒಡಿಶಾದ ಚಾರ್ಬಾಟಿಯಾ ವಾಯುನೆಲೆಯಲ್ಲಿ ಅಮೆರಿಕದ ಬೇಹುಗಾರಿಕಾ U2 ವಿಮಾನಗಳ ಕಾರ್ಯಾಚರಣೆಗೆ ಸಿಐಎಗೆ ಸಹಾಯ ಮಾಡಿದ್ದರು ಎಂದು ದುಬೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, 1963ರಿಂದ 1979 ರವರೆಗೆ ಈ ವಾಯುನೆಲೆಯು ಭಾರತದಲ್ಲಿದ್ದ ಅಮೆರಿಕದ ಮಿಲಿಟರಿ ಪಡೆಗೆ ಆಶ್ರಯ ತಾಣವಾಗಿತ್ತು ಎಂದೂ ಹೇಳಿದ್ದರು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಪಾತ್ರಾ ಅವರು, ಬಿಜು ಪಟ್ನಾಯಕ್ ಅವರ ವಿರುದ್ಧ ದುಬೆ ಮಾಡಿರುವ ಆರೋಪಗಳು, “ಅತಿರೇಕ, ಸುಳ್ಳು ಮತ್ತು ಬೇಜವಾಬ್ದಾರಿತನದಿಂದ ಕೂಡಿತ್ತು” ಎಂದು ಹೇಳಿದ್ದಾರೆ.

“ಬಿಜು ಪಟ್ನಾಯಕ್ ಅವರು ಒಬ್ಬ ಮಹೋನ್ನತ ಸ್ವಾತಂತ್ರ್ಯ ಹೋರಾಟಗಾರ, ದೂರದೃಷ್ಟಿಯ ನಾಯಕ ಮತ್ತು ಈ ಮಣ್ಣಿನ ಮಗ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆ ಪ್ರಶ್ನಾತೀತವಾಗಿದೆ. ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ತಿರುಚುವ ಮತ್ತು ಪೂಜನೀಯ ನಾಯಕನ ಹೆಸರಿಗೆ ಮಸಿ ಬಳಿಯುವ ಇಂತಹ ಪ್ರಯತ್ನಗಳು ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ” ಎಂದು ಬಿಜಿಡಿ ರಾಜ್ಯಸಭಾ ನಾಯಕ ಪಾತ್ರಾ ಹೇಳಿದ್ದಾರೆ.

ದುಬೆ ಹೇಳಿಕೆಯು ಒಡಿಶಾದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಿಜು ಜನತಾ ದಳ (ಬಿಜೆಡಿ) ಮತ್ತು ಪಟ್ನಾಯಕ್ ಕುಟುಂಬದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜು ಪಟ್ನಾಯಕ್ ಅವರ ಮಗ ಹಾಗೂ ಒಡಿಶಾದ ಮಾಜಿ ಮುಖ್ಯಮಂತ್ರಿ  ನವೀನ್ ಪಟ್ನಾಯಕ್ ಅವರು ದುಬೆ ಹೇಳಿಕೆಯನ್ನು ‘ಅತಿರೇಕದ ವರ್ತನೆ’ ಎಂದು ಕರೆದಿದ್ದಾರೆ. ಚೀನಾ ಯುದ್ಧದ ಸಮಯದಲ್ಲಿ ಬಿಜು ಪಟ್ನಾಯಕ್ ಅವರ ಕಾರ್ಯತಂತ್ರ ಮತ್ತು ದೇಶಭಕ್ತಿಯನ್ನು ನೆನಪಿಸಿದ ಅವರು, ದುಬೆ ಅವರಿಗೆ ‘ಮಾನಸಿಕ ವೈದ್ಯರ ಅಗತ್ಯವಿದೆ’ ಎಂದು ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಸೋಮವಾರ (ಮಾ.30) ಬಿಜೆಡಿ ಸಂಸದರು ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿ, ಸದನದಿಂದ ಹೊರನಡೆದಿದ್ದಾರೆ.

ದುಬೆ ಅವರ ಹೇಳಿಕೆಯು ‘ಒಡಿಶಾದ ಅಸ್ಮಿತೆಗೆ’ ಮಾಡಿದ ಅವಮಾನ ಎಂದು ಬಿಜೆಡಿ ಸಂಸದರು ಟೀಕಿಸಿದ್ದು, ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜು ಪಟ್ನಾಯಕ್ ಅವರು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟಗಾರರನ್ನು ರಕ್ಷಿಸಿದವರು ಮತ್ತು ಎರಡನೇ ಮಹಾಯುದ್ಧದಲ್ಲಿ ರಷ್ಯಾಕ್ಕೆ ಸಹಾಯ ಮಾಡಿದ ಧೀಮಂತ ನಾಯಕ. ಅಂತಹ ನಾಯಕನನ್ನು ‘ಸಿಐಎ ಏಜೆಂಟ್’ ಎಂದು ಕರೆಯುವುದು ಇತಿಹಾಸವನ್ನು ತಿರುಚುವ ನೀಚ ಪ್ರಯತ್ನ ಎಂದು ಬಿಜೆಡಿ ಕಿಡಿಕಾರಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....