Homeಮುಖಪುಟಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

- Advertisement -
- Advertisement -

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ ಸಮಿತಿಗೆ ಬಿಜೆಡಿ ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷರಿಗೆ ಮಾರ್ಚ್ 28ರಂದು ಬರೆದ ಪತ್ರದಲ್ಲಿ ಪಾತ್ರಾ ಅವರು, “ಸಾರ್ವಜನಿಕ ಹೇಳಿಕೆಯೊಂದರಲ್ಲಿ ದಿವಂಗತ ಬಿಜು ಪಟ್ನಾಯಕ್ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ವ್ಯಕ್ತಿಯ ಅಡಿಯಲ್ಲಿ ಕೆಲಸ ಮಾಡಲು ನನ್ನ ಮನಸ್ಸಾಕ್ಷಿ ಒಪ್ಪುತ್ತಿಲ್ಲ” ಎಂದು ಹೇಳಿದ್ದಾರೆ.

ಮಾರ್ಚ್ 27ರಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ದುಬೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಅಮೆರಿಕದ ಹಣ ಹಾಗೂ ಸಿಐಎ ಏಜೆಂಟ್‌ಗಳ ಸಹಯೋಗದೊಂದಿಗೆ ಚೀನಾದ ವಿರುದ್ಧ 1962ರ ಯುದ್ಧವನ್ನು ಮಾಡಿದ್ದರು ಎಂದು ಆರೋಪಿಸಿದ್ದರು. ಬಿಜು ಪಟ್ನಾಯಕ್ ಅವರನ್ನು ಅಮೆರಿಕ ಸರ್ಕಾರ, ಸಿಐಎ ಮತ್ತು ನೆಹರೂ ನಡುವಿನ ‘ಸಂಪರ್ಕ ಕೊಂಡಿ’ ಎಂದು ಹೇಳಿದ್ದರು.

ಬಿಜು ಪಟ್ನಾಯಕ್ ಅವರು ಒಡಿಶಾದ ಚಾರ್ಬಾಟಿಯಾ ವಾಯುನೆಲೆಯಲ್ಲಿ ಅಮೆರಿಕದ ಬೇಹುಗಾರಿಕಾ U2 ವಿಮಾನಗಳ ಕಾರ್ಯಾಚರಣೆಗೆ ಸಿಐಎಗೆ ಸಹಾಯ ಮಾಡಿದ್ದರು ಎಂದು ದುಬೆ ಆರೋಪಿಸಿದ್ದರು. ಅಷ್ಟೇ ಅಲ್ಲದೆ, 1963ರಿಂದ 1979 ರವರೆಗೆ ಈ ವಾಯುನೆಲೆಯು ಭಾರತದಲ್ಲಿದ್ದ ಅಮೆರಿಕದ ಮಿಲಿಟರಿ ಪಡೆಗೆ ಆಶ್ರಯ ತಾಣವಾಗಿತ್ತು ಎಂದೂ ಹೇಳಿದ್ದರು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಪಾತ್ರಾ ಅವರು, ಬಿಜು ಪಟ್ನಾಯಕ್ ಅವರ ವಿರುದ್ಧ ದುಬೆ ಮಾಡಿರುವ ಆರೋಪಗಳು, “ಅತಿರೇಕ, ಸುಳ್ಳು ಮತ್ತು ಬೇಜವಾಬ್ದಾರಿತನದಿಂದ ಕೂಡಿತ್ತು” ಎಂದು ಹೇಳಿದ್ದಾರೆ.

“ಬಿಜು ಪಟ್ನಾಯಕ್ ಅವರು ಒಬ್ಬ ಮಹೋನ್ನತ ಸ್ವಾತಂತ್ರ್ಯ ಹೋರಾಟಗಾರ, ದೂರದೃಷ್ಟಿಯ ನಾಯಕ ಮತ್ತು ಈ ಮಣ್ಣಿನ ಮಗ. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆ ಪ್ರಶ್ನಾತೀತವಾಗಿದೆ. ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನು ತಿರುಚುವ ಮತ್ತು ಪೂಜನೀಯ ನಾಯಕನ ಹೆಸರಿಗೆ ಮಸಿ ಬಳಿಯುವ ಇಂತಹ ಪ್ರಯತ್ನಗಳು ಸ್ವೀಕಾರಾರ್ಹವಲ್ಲ ಮತ್ತು ಖಂಡನೀಯ” ಎಂದು ಬಿಜಿಡಿ ರಾಜ್ಯಸಭಾ ನಾಯಕ ಪಾತ್ರಾ ಹೇಳಿದ್ದಾರೆ.

ದುಬೆ ಹೇಳಿಕೆಯು ಒಡಿಶಾದ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಬಿಜು ಜನತಾ ದಳ (ಬಿಜೆಡಿ) ಮತ್ತು ಪಟ್ನಾಯಕ್ ಕುಟುಂಬದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜು ಪಟ್ನಾಯಕ್ ಅವರ ಮಗ ಹಾಗೂ ಒಡಿಶಾದ ಮಾಜಿ ಮುಖ್ಯಮಂತ್ರಿ  ನವೀನ್ ಪಟ್ನಾಯಕ್ ಅವರು ದುಬೆ ಹೇಳಿಕೆಯನ್ನು ‘ಅತಿರೇಕದ ವರ್ತನೆ’ ಎಂದು ಕರೆದಿದ್ದಾರೆ. ಚೀನಾ ಯುದ್ಧದ ಸಮಯದಲ್ಲಿ ಬಿಜು ಪಟ್ನಾಯಕ್ ಅವರ ಕಾರ್ಯತಂತ್ರ ಮತ್ತು ದೇಶಭಕ್ತಿಯನ್ನು ನೆನಪಿಸಿದ ಅವರು, ದುಬೆ ಅವರಿಗೆ ‘ಮಾನಸಿಕ ವೈದ್ಯರ ಅಗತ್ಯವಿದೆ’ ಎಂದು ಕಿಡಿಕಾರಿದ್ದಾರೆ.

ಈ ವಿಚಾರವಾಗಿ ಸೋಮವಾರ (ಮಾ.30) ಬಿಜೆಡಿ ಸಂಸದರು ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿ, ಸದನದಿಂದ ಹೊರನಡೆದಿದ್ದಾರೆ.

ದುಬೆ ಅವರ ಹೇಳಿಕೆಯು ‘ಒಡಿಶಾದ ಅಸ್ಮಿತೆಗೆ’ ಮಾಡಿದ ಅವಮಾನ ಎಂದು ಬಿಜೆಡಿ ಸಂಸದರು ಟೀಕಿಸಿದ್ದು, ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜು ಪಟ್ನಾಯಕ್ ಅವರು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟಗಾರರನ್ನು ರಕ್ಷಿಸಿದವರು ಮತ್ತು ಎರಡನೇ ಮಹಾಯುದ್ಧದಲ್ಲಿ ರಷ್ಯಾಕ್ಕೆ ಸಹಾಯ ಮಾಡಿದ ಧೀಮಂತ ನಾಯಕ. ಅಂತಹ ನಾಯಕನನ್ನು ‘ಸಿಐಎ ಏಜೆಂಟ್’ ಎಂದು ಕರೆಯುವುದು ಇತಿಹಾಸವನ್ನು ತಿರುಚುವ ನೀಚ ಪ್ರಯತ್ನ ಎಂದು ಬಿಜೆಡಿ ಕಿಡಿಕಾರಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...