HomeUncategorizedದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್...

ದಾವುದ್ ಇಬ್ರಾಹಿಂ ಜೊತೆ ಲಿಂಕ್ ಎಂದ ಎಎನ್‌ಐ | ಸುಳ್ಳು ಸುದ್ದಿಗೆ ಕ್ಷಮೆಯಾಚಿಸಲು ಸಲ್ಮಾನ್ ಖಾನ್ ಒತ್ತಾಯ

- Advertisement -
- Advertisement -

ಭೂಗತ ಪಾತಕಿ ದಾವುದ್ ಇಬ್ರಾಹಿಂ ಗುಂಪಿನ ಡಿ-ಕಂಪನಿಯೊಂದಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸಂಪರ್ಕ ಇದೆ ಎಂದು ಸುದ್ದಿ ಮಾಡಿದ್ದ ಸುದ್ದಿ ಸಂಸ್ಥೆ ಎಎನ್‌ಐ ಮತ್ತು ಈ ಬಗ್ಗೆ ಆರೋಪ ಮಾಡಿದ್ದ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ವಕೀಲರಿಂದ ಕ್ಷಮೆಯಾಚನೆಗೆ ನಟ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಟ ಸಲ್ಮಾನ್ ಖಾನ್ ಅವರು ಭಯೋತ್ಪಾದನೆ ಮತ್ತು ಪಾತಕಿಗಳ ಗುಂಪಾದ ಡಿ-ಕಂಪೆನಿಯೊಂದಿಗೆ ”ಸಂಬಂಧ” ಹೊಂದಿದ್ದಾರೆ ಎಂದು ಪ್ರಧಾನಿ ಮೋದಿ ಅವರ ಸರ್ಕಾರದ ಪರವಾಗಿ ಪ್ರೊಪಗಾಂಡ ಸುದ್ದಿ ಮಾಡುವ ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂಓದಿ: ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ : ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

ಸೆಪ್ಟೆಂಬರ್ 4 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಮತ್ತು ಇತರ ಸುದ್ದಿ ಪೋರ್ಟಲ್‌ಗಳು ಮತ್ತು ಚಾನೆಲ್‌ಗಳೊಂದಿಗೆ ಹಂಚಿಕೊಂಡ ವರದಿಯ ವಿರುದ್ಧ ಸಲ್ಮಾನ್ ಖಾನ್ ಅವರು ANI ಸಂಸ್ಥೆಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಸಲ್ಮಾನ್ ಖಾನ್ ಅವರ ಮುಂಬೈನ ಅಪಾರ್ಟ್‌ಮೆಂಟ್ ಹೊರಗೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರ ವಕೀಲ ಅಮಿತ್ ಮಿಶ್ರಾ ಅವರೊಂದಿಗೆ ಎಎನ್‌ಐ ಕಿರು ಸಂದರ್ಶನ ನಡೆಸಿತ್ತು. ಈ ಸಂದರ್ಶನದಲ್ಲಿ ಅವರು ಅಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ಬಗ್ಗೆ ನಟ ಆಕ್ಷೇಪ ಎತ್ತಿದ್ದು ಕಾನೂನು ನೋಟಿಸ್ ನೀಡಿದ್ದಾರೆ.

ಆರೋಪಿಗಳಾದ ಗುಪ್ತಾ ಮತ್ತು ಪಾಲ್ ಅವರಿಗೆ ದಾವುದ್ ಇಬ್ರಾಹಿಂ ಗುಂಪಾದ ಡಿ-ಕಂಪೆನಿ ಸದಸ್ಯರು ಬೆದರಿಕೆ ಹಾಕಿದ್ದು, ಅದಕ್ಕಾಗಿ ಅವರು ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಗುಂಡಿನ ದಾಳಿ ನಡೆಸಿದ್ದರು. ಯಾಕೆಂದರೆ ಸಲ್ಮಾನ್ ಖಾನ್ ಡಿ ಕಂಪೆನಿಯೊಂದಿಗೆ ಸಂಬಂಧ ಹೊಂದಿದ್ದು, ಅವರು ತನ್ನ ಕಕ್ಷಿದಾರರನ್ನು ಕೊಲ್ಲಲು ಬಯಸಿದ್ದರು ಎಂದು ವಕೀಲ ಹೇಳಿದ್ದರು.

ಇದನ್ನೂಓದಿ: ಸುಪ್ರಿಂಕೋರ್ಟ್ ತರಾಟೆ ನಂತರ ಕೇಂದ್ರದಿಂದ 8 ಹೊಸ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ

ANI ಮತ್ತು ವಕೀಲ ಮಿಶ್ರಾ ಮುಂದಿನ 48 ಗಂಟೆಗಳ ಒಳಗೆ ಪ್ರಮುಖ ಪತ್ರಿಕೆಗಳಲ್ಲಿ “ಬೇಷರತ್ ಕ್ಷಮೆಯಾಚನೆ”ಯನ್ನು ಪ್ರಕಟಿಸಬೇಕೆಂದು ಸಲ್ಮಾನ್ ಖಾನ್ ಒತ್ತಾಯಿಸಿದ್ದು, ಸುದ್ದಿ ಸಂಸ್ಥೆ ತನ್ನ ವರದಿಯನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇಬ್ಬರಿಗೆ ಕಳುಹಿಸಿದ ಲೀಗಲ್ ನೋಟಿಸ್‌ನಲ್ಲಿ ಸಲ್ಮಾನ್ ಖಾನ್ ಅವರು ವಕೀಲ ಮಿಶ್ರಾ ಮಾಡಿದ ಆರೋಪಗಳನ್ನು ನಿರಾಕರಿಸಿದ್ದಾರೆ. ಅವರ ಹೇಳಿಕೆಗಳನ್ನು ಸಲ್ಮಾನ್ ಖಾನ್ ಅವರು “ಸುಳ್ಳು, ಆಧಾರರಹಿತ, ದುರುದ್ದೇಶಪೂರಿತ, ತೀವ್ರವಾಗಿ ಮಾನಹಾನಿಕರ, ತಪ್ಪುದಾರಿಗೆಳೆಯುವ” ಎಂದು ಕರೆದಿದ್ದಾರೆ.

“ನನ್ನ ಇಮೇಜ್ ಮತ್ತು ಸದ್ಭಾವನೆಯನ್ನು ಕೆಡಿಸುವ ಉದ್ದೇಶದಿಂದ ಈ ಆರೋಪ ಮಾಡಲಾಗಿದೆ. ಮಿಶ್ರಾ ಮತ್ತು ಎಎನ್‌ಐ ಇಬ್ಬರೂ ನನ್ನ ಪ್ರತಿಷ್ಠೆಗೆ ಕುಂದುಂಟುಮಾಡುವ ಮೂಲಕ ವಿವಾದವನ್ನು ಹುಟ್ಟುಹಾಕಲು ಮತ್ತು ಸಾರ್ವಜನಿಕ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಈ ಅಪರಾಧವು ಮಾನಹಾನಿಯಾಗುತ್ತದೆ” ನಟ ಸಲ್ಮಾನ್ ಖಾನ್ ನೀಡಿರುವ ನೋಟಿಸ್ ಹೇಳಿದೆ.

ವಿಡಿಯೊ ನೋಡಿ: ಸುರತ್ಕಲ್‌ ಅಕ್ರಮ ಟೋಲ್‌ ಹಾಡು ವೈರಲ್‌ | ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...