Homeಕರ್ನಾಟಕದೇವರ ಕುರಿತ 'ಅನಿಕೇತನ' ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

- Advertisement -
- Advertisement -

ನಮ್ಮ ನಾನುಗೌರಿ.ಕಾಂನ ಬರಹಗಾರಾದ ಪಿ.ಕೆ ಮಲ್ಲನಗೌಡರ್ ರವರು ದೇವರ ಕುರಿತು ತಮ್ಮ ಮಗ ‘ಅನಿಕೇತನ’ನ ಕಲ್ಪನೆಗಳನ್ನು ಬರೆದಿದ್ದಾರೆ. ಮಕ್ಕಳನ್ನು ಆರೋಗ್ಯಕರವಾಗಿ ಬೆಳೆಸುವುದರ ಕುರಿತು ನಾವೆಲ್ಲರೂ ಯೋಚಿಸಬೇಕಿದೆ.

ಗಣೇಶ ವಿಸರ್ಜನೆ ವೇಳೆ ರಸ್ತೆಯಲ್ಲಿ ಕುಣಿದ ಮಗ ಅಲೈ ದೇವರ ಮೆರವಣಿಗೆಯಲ್ಲೂ ಕುಣಿದು ಬಂದಿದ್ದಾನೆ. ದೇವರ ಕುರಿತಾಗಿ ಮಕ್ಕಳ ಕಲ್ಪನೆಗಳೇ ಸುಂದರ ಮತ್ತು ವಿಚಿತ್ರ.

ಕಳೆದ ವಾರ ಎಲ್ಲಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ 9ನೇ ದಿನದ ಗಣಪತಿಯ ವಿಸರ್ಜನೆ ಜೋರಾಗಿ ನಡೆದಿದೆ. ಜತೆಯಲ್ಲೇ ಅಲೈ (ಮೊಹರಂ) ದೇವರುಗಳ ಮೆರವಣಿಗೆ ಕೂಡ. ಇನ್ನೊಂದು ಕಡೆ ಕೋಲಾರದಲ್ಲಿ ಗಣೇಶ ವಿಸರ್ಜನೆಗೆ ಹೋದ ಆರು ಮಕ್ಕಳು ಜೀವ ತೆತ್ತಿವೆ…
ದೇವರ ಕುರಿತಾಗಿ ಮಕ್ಕಳಲ್ಲಿ ಸುಂದರ ಮತ್ತು ವಿಚಿತ್ರ ಕಲ್ಪನೆ ಮತ್ತು ಭಾವಗಳಿರುತ್ತವೆ. ಆದರೆ ಬರುಬರುತ್ತ ಉತ್ತರ ಕರ್ನಾಟಕದಲ್ಲಿ ಮತೀಯವಾದಿ ಸಂಘಟನೆಗಳ ಜಾಲ ಹೆಚ್ಚಿದಂತೆ ಗಣೇಶ ಉತ್ಸವ ಮತ್ತು ಮೊಹರಂ ಒಂದಕ್ಕೊಂದು ಸ್ಪರ್ಧಿ ಎನ್ನುವಂತೆ ಬಿಂಬಿಸಲಾಗಿದೆ. ಆದರೆ ಸಮಾಧಾನದ ಅಂಶವೆಂದರೆ ಜನ ಈ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಗಣೇಶನೂ ಬೇಕು ಮತ್ತು ಅಲೈ ದೇವರುಗಳೂ ಬೇಕು. ವಕ್ರತುಂಡ ಹಾಡುವ ಮಕ್ಕಳೇ ಅಲೈ ದೇವರನ್ನು ಇಟ್ಟಿರುವ ಮಸೀದಿ ಮುಂದೆ ತೋಡಿದ ಕುಣಿಯ ಸುತ್ತ ‘ಅಲೈ..ಅಲೈ’ ಎಂದು ಕುಣಿದು ಸಂಭ್ರಮಿಸುತ್ತವೆ.

ಮಕ್ಕಳು ದೇವರ ಬಗ್ಗೆ ಸೃಷ್ಟಿಸಿಕೊಳ್ಳುವ ಕಲ್ಪನೆಗಳು ಹೇಗಿರಬೇಕು? ಅದರಲ್ಲಿ ತಂದೆ ತಾಯಿ ಪಾತ್ರವೇನು? ತಜ್ಞರು ಈ ಬಗ್ಗೆ ಹೇಳಬೇಕು. ಆದರೆ, ದೇವರ ಕುರಿತೂ ಪ್ರಶ್ನಿಸುವ ಗುಣ ಅವರಲ್ಲಿ ಬಂದಾಗಲಷ್ಟೇ ಅವರ ಕಲ್ಪನಾ ಶಕ್ತಿ ಇನ್ನಷ್ಟು ಹರಿತವಾಗಬಹುದು.

ಮನುಷ್ಯನ ಮುಖ ಆನೆಗೆ: ಮಗನ ಬೊಂಬಾಟ್ ಕಲ್ಪನೆ
ಮಗ ಅನಿಕೇತನ ಆಗ ಒಂದೂವರೆ ವರ್ಷದವನೂ ಆಗಿರಲಿಲ್ಲ. ನನ್ನ ಹೆಂಡತಿ ನಾಕೈದು ಬಾರಿ ‘ಗಣೇಶನಿಗೆ ಆನೆ ಮುಖ ಹೇಗೆ ಬಂತು?’ ಎಂದು ಹೇಳುವ ಕತೆಯನ್ನು ಅವನಿಗೆ ಹೇಳುತ್ತ ಬಂದಿದ್ದಳು. ಆಗ ನಾವು ಬಾಡಿಗೆಗಿದ್ದ ಮನೆಯ ಓನರು ಪ್ರೊ. ಬಡಿಗೇರ್ ರಾಜ್ಯ ವಿಜ್ಞಾನ ಪರಿಷತ್‍ನ ಸದಸ್ಯರಾಗಿದ್ದವರು ಮತ್ತು ವೈಜ್ಞಾನಿಕ ಮನೋಭಾವದವರು. ನಾನು ಮತ್ತು ಅವರು ಹೇಳುತ್ತಿದ್ದ ಹೊಸ ಬಗೆಯ ಕತೆಗಳೇ ಅನಿಕೇತನನ ಮೇಲೆ ಪ್ರಭಾವ ಬೀರಿದ್ದವೋ ಏನೋ ಗೊತ್ತಿಲ್ಲ.

ಒಮ್ಮೆ ನಾವೆಲ್ಲರೂ ಕುಳಿತಾಗ ಪ್ರೊಫೆಸರ್ ಮಗ ಅಜಿತ್ (ಸಾಫ್ಟ್ ವೇರ್ ಇಂಜಿನಿಯರ್ ಮತ್ತು ವನ್ಯಜೀವಿ ಪ್ರಿಯ) ಅನಿಕೇತನನಿಗೆ ಕತೆಯೊಂದನ್ನು ಹೇಳಲು ಕೇಳಿದಾಗ ಗಣೇಶನ ಗಜಮುಖದ ಕತೆ ಹೇಳಿದ ಅನಿಕೇತನ ಜೋರಾಗಿ ನಗುತ್ತ, “ಅಜಿತ್ ಮಾಮಾ, ಅಲ್ಲಿ ಶಿವ ಗಣೇಶನ ರುಂಡ ಕಟ್ ಮಾಡ್ಯಾನಲ್ಲ, ಅದನ್ನ ತಗಂಡ್ ಹೋಗಿ ಆ ಆನಿಗೆ ಹಚ್ಚಿಬಿಡೋಣ ಬಾ.. ಪಾಪ ಆ ಆನಿ” ಎಂದುಬಿಟ್ಟ…
ಎಲ್ಲರಿಗೂ ಖುಷಿ ಮತ್ತರು ಆಶ್ಚರ್ಯ. ವನ್ಯಜೀವಿ ಪ್ರಿಯ ಅಜಿತ್ ಅಂತೂ ಅಂದಿನಿಂದ ಅನಿಕೇತನನ ಫ್ಯಾನೇ ಆಗಿಬಿಟ್ಟ.

ಹನುಮಂತನ ಗಲ್ಲಗಳೇಕೆ ಉಬ್ಬಿವೆ ಗೊತ್ತಾ?
ಒಂದಿನ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದೇವು. ಒಂದೂವರೆ ವರ್ಷದ ಅನಿಕೇತನ ಅವರ ಮನೆಯ ಹಾಲ್‍ನಲ್ಲಿ ಹಾಕಿದ್ದ ಹನುಮಂತನ ದೊಡ್ಡ ಫೋಟೊ ನೋಡುತ್ತಲೇ ಇದ್ದ. ಅಲ್ಲಿವರೆಗೂ ಅವನು ಆ ಗಾತ್ರದ ಹನುಮಂತನ ಫೋಟೊ ನೋಡಿರಲಿಲ್ಲ. ನಂತರ ಬಾಯಲ್ಲಿ ನೀರು ತುಂಬಿಕೊಳ್ಳುವುದು, ಎರಡು ಕ್ಷಣ ಹನುಮಂತನ ಫೋಟೊ ನೊಡುವುದು, ಹೊರಗೆ ಹೋಗಿ ನೀರನ್ನು ಉಗುಳಿ ಬಂದು ಜೋರಾಗಿ ನಗುವುದು… ಎರಡು ಮೂರು ಸಲ ಹೀಗೆ ಮಾಡಿದ ಅವನನ್ನು ಅವರ ಅವ್ವ’ಏನಾಗಿದೆ ನಿನಗೆ?’ ಎಂದು ಜಬರಿಸಿದಳು.

‘ಅವ್ವಾ, ಹನುಮಂತ ಬಾಯಿ ಮುಕ್ಕಳಿಸಾಕ ನೀರು ಹಾಕ್ಕೊಂಡಾನ. ಆದ್ರ ಹೊಳ್ಳಿ ಅದನ್ನ ಹೊರಗ ಉಗಳಾಕ ಬರವಲ್ದು ಅಂವಂಗ… ಹ ಹ ಹಾ… ಅದಕ್ಕ ಅವ್ನ ಗಲ್ಲುಮ್ ಅಂತಾ ಉಬ್ಬ್ಯಾವ ನೋಡ್ಬೇ’ ಎಂದು ಅನಿಕೇತನ ತನ್ನ ‘ಸಂಶೋಧನೆ’ಯನ್ನು ಮಂಡಿಸಿದ.!!

ಪ್ರಶ್ನೆ ಕೇಳುವ, ಕೆಲವು ಪ್ರಶ್ನೆಗಳಿಗೆ ತಮ್ಮದೇ ಕಲ್ಪನೆಯ ಉತ್ತರ ಸೃಷ್ಟಿಸುವ ಮಕ್ಕಳು ಸಾಕಷ್ಟಿವೆ. ಆದರೆ, ದೇವರ ಬಗ್ಗೆ ಹೀಗೆಲ್ಲ ಪ್ರಶ್ನೆ ಕೇಳುವ, ವಿಡಂಬನೆ ಮಾಡುವ ಮಕ್ಕಳನ್ನೇ ಕೆಲವು ಪೋಷಕರು ಬೈದು ಗದರಿಸುತ್ತಾರೆ. ಅಂತಹ ಒಂದು ಮನಸ್ಥಿತಿಯನ್ನು ಮತೀಯವಾದಿ ಸಂಘಟನೆಗಳು ಬಿತ್ತಿವೆ.

ಆದರೆ, ಸಾವಿರಾರು ಅನಿಕೇತನರು ನಿನ್ನೆ ಗಣೇಶನ ಮುಂದೆಯೂ, ಅಲೈ ದೇವರ ಮುಂದೆಯೂ ಕುಣಿದಿ ಬಂದಿದ್ದಾರೆ. ನಮಗಂತೂ ಆಶಾವಾದ ಇದ್ದೇ ಇದೆ. ದೇವರು ಮತ್ತು ಮತದ ಹೆಸರಲ್ಲಿ ಈ ಸಮಾಜವನ್ನು ಅಷ್ಟು ಸುಲಭವಾಗಿ ಒಡೆಯಲಾಗುವುದಿಲ್ಲ ಎಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...