Homeಕರ್ನಾಟಕದೇವರ ಕುರಿತ 'ಅನಿಕೇತನ' ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

- Advertisement -
- Advertisement -

ನಮ್ಮ ನಾನುಗೌರಿ.ಕಾಂನ ಬರಹಗಾರಾದ ಪಿ.ಕೆ ಮಲ್ಲನಗೌಡರ್ ರವರು ದೇವರ ಕುರಿತು ತಮ್ಮ ಮಗ ‘ಅನಿಕೇತನ’ನ ಕಲ್ಪನೆಗಳನ್ನು ಬರೆದಿದ್ದಾರೆ. ಮಕ್ಕಳನ್ನು ಆರೋಗ್ಯಕರವಾಗಿ ಬೆಳೆಸುವುದರ ಕುರಿತು ನಾವೆಲ್ಲರೂ ಯೋಚಿಸಬೇಕಿದೆ.

ಗಣೇಶ ವಿಸರ್ಜನೆ ವೇಳೆ ರಸ್ತೆಯಲ್ಲಿ ಕುಣಿದ ಮಗ ಅಲೈ ದೇವರ ಮೆರವಣಿಗೆಯಲ್ಲೂ ಕುಣಿದು ಬಂದಿದ್ದಾನೆ. ದೇವರ ಕುರಿತಾಗಿ ಮಕ್ಕಳ ಕಲ್ಪನೆಗಳೇ ಸುಂದರ ಮತ್ತು ವಿಚಿತ್ರ.

ಕಳೆದ ವಾರ ಎಲ್ಲಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ 9ನೇ ದಿನದ ಗಣಪತಿಯ ವಿಸರ್ಜನೆ ಜೋರಾಗಿ ನಡೆದಿದೆ. ಜತೆಯಲ್ಲೇ ಅಲೈ (ಮೊಹರಂ) ದೇವರುಗಳ ಮೆರವಣಿಗೆ ಕೂಡ. ಇನ್ನೊಂದು ಕಡೆ ಕೋಲಾರದಲ್ಲಿ ಗಣೇಶ ವಿಸರ್ಜನೆಗೆ ಹೋದ ಆರು ಮಕ್ಕಳು ಜೀವ ತೆತ್ತಿವೆ…
ದೇವರ ಕುರಿತಾಗಿ ಮಕ್ಕಳಲ್ಲಿ ಸುಂದರ ಮತ್ತು ವಿಚಿತ್ರ ಕಲ್ಪನೆ ಮತ್ತು ಭಾವಗಳಿರುತ್ತವೆ. ಆದರೆ ಬರುಬರುತ್ತ ಉತ್ತರ ಕರ್ನಾಟಕದಲ್ಲಿ ಮತೀಯವಾದಿ ಸಂಘಟನೆಗಳ ಜಾಲ ಹೆಚ್ಚಿದಂತೆ ಗಣೇಶ ಉತ್ಸವ ಮತ್ತು ಮೊಹರಂ ಒಂದಕ್ಕೊಂದು ಸ್ಪರ್ಧಿ ಎನ್ನುವಂತೆ ಬಿಂಬಿಸಲಾಗಿದೆ. ಆದರೆ ಸಮಾಧಾನದ ಅಂಶವೆಂದರೆ ಜನ ಈ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಗಣೇಶನೂ ಬೇಕು ಮತ್ತು ಅಲೈ ದೇವರುಗಳೂ ಬೇಕು. ವಕ್ರತುಂಡ ಹಾಡುವ ಮಕ್ಕಳೇ ಅಲೈ ದೇವರನ್ನು ಇಟ್ಟಿರುವ ಮಸೀದಿ ಮುಂದೆ ತೋಡಿದ ಕುಣಿಯ ಸುತ್ತ ‘ಅಲೈ..ಅಲೈ’ ಎಂದು ಕುಣಿದು ಸಂಭ್ರಮಿಸುತ್ತವೆ.

ಮಕ್ಕಳು ದೇವರ ಬಗ್ಗೆ ಸೃಷ್ಟಿಸಿಕೊಳ್ಳುವ ಕಲ್ಪನೆಗಳು ಹೇಗಿರಬೇಕು? ಅದರಲ್ಲಿ ತಂದೆ ತಾಯಿ ಪಾತ್ರವೇನು? ತಜ್ಞರು ಈ ಬಗ್ಗೆ ಹೇಳಬೇಕು. ಆದರೆ, ದೇವರ ಕುರಿತೂ ಪ್ರಶ್ನಿಸುವ ಗುಣ ಅವರಲ್ಲಿ ಬಂದಾಗಲಷ್ಟೇ ಅವರ ಕಲ್ಪನಾ ಶಕ್ತಿ ಇನ್ನಷ್ಟು ಹರಿತವಾಗಬಹುದು.

ಮನುಷ್ಯನ ಮುಖ ಆನೆಗೆ: ಮಗನ ಬೊಂಬಾಟ್ ಕಲ್ಪನೆ
ಮಗ ಅನಿಕೇತನ ಆಗ ಒಂದೂವರೆ ವರ್ಷದವನೂ ಆಗಿರಲಿಲ್ಲ. ನನ್ನ ಹೆಂಡತಿ ನಾಕೈದು ಬಾರಿ ‘ಗಣೇಶನಿಗೆ ಆನೆ ಮುಖ ಹೇಗೆ ಬಂತು?’ ಎಂದು ಹೇಳುವ ಕತೆಯನ್ನು ಅವನಿಗೆ ಹೇಳುತ್ತ ಬಂದಿದ್ದಳು. ಆಗ ನಾವು ಬಾಡಿಗೆಗಿದ್ದ ಮನೆಯ ಓನರು ಪ್ರೊ. ಬಡಿಗೇರ್ ರಾಜ್ಯ ವಿಜ್ಞಾನ ಪರಿಷತ್‍ನ ಸದಸ್ಯರಾಗಿದ್ದವರು ಮತ್ತು ವೈಜ್ಞಾನಿಕ ಮನೋಭಾವದವರು. ನಾನು ಮತ್ತು ಅವರು ಹೇಳುತ್ತಿದ್ದ ಹೊಸ ಬಗೆಯ ಕತೆಗಳೇ ಅನಿಕೇತನನ ಮೇಲೆ ಪ್ರಭಾವ ಬೀರಿದ್ದವೋ ಏನೋ ಗೊತ್ತಿಲ್ಲ.

ಒಮ್ಮೆ ನಾವೆಲ್ಲರೂ ಕುಳಿತಾಗ ಪ್ರೊಫೆಸರ್ ಮಗ ಅಜಿತ್ (ಸಾಫ್ಟ್ ವೇರ್ ಇಂಜಿನಿಯರ್ ಮತ್ತು ವನ್ಯಜೀವಿ ಪ್ರಿಯ) ಅನಿಕೇತನನಿಗೆ ಕತೆಯೊಂದನ್ನು ಹೇಳಲು ಕೇಳಿದಾಗ ಗಣೇಶನ ಗಜಮುಖದ ಕತೆ ಹೇಳಿದ ಅನಿಕೇತನ ಜೋರಾಗಿ ನಗುತ್ತ, “ಅಜಿತ್ ಮಾಮಾ, ಅಲ್ಲಿ ಶಿವ ಗಣೇಶನ ರುಂಡ ಕಟ್ ಮಾಡ್ಯಾನಲ್ಲ, ಅದನ್ನ ತಗಂಡ್ ಹೋಗಿ ಆ ಆನಿಗೆ ಹಚ್ಚಿಬಿಡೋಣ ಬಾ.. ಪಾಪ ಆ ಆನಿ” ಎಂದುಬಿಟ್ಟ…
ಎಲ್ಲರಿಗೂ ಖುಷಿ ಮತ್ತರು ಆಶ್ಚರ್ಯ. ವನ್ಯಜೀವಿ ಪ್ರಿಯ ಅಜಿತ್ ಅಂತೂ ಅಂದಿನಿಂದ ಅನಿಕೇತನನ ಫ್ಯಾನೇ ಆಗಿಬಿಟ್ಟ.

ಹನುಮಂತನ ಗಲ್ಲಗಳೇಕೆ ಉಬ್ಬಿವೆ ಗೊತ್ತಾ?
ಒಂದಿನ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದೇವು. ಒಂದೂವರೆ ವರ್ಷದ ಅನಿಕೇತನ ಅವರ ಮನೆಯ ಹಾಲ್‍ನಲ್ಲಿ ಹಾಕಿದ್ದ ಹನುಮಂತನ ದೊಡ್ಡ ಫೋಟೊ ನೋಡುತ್ತಲೇ ಇದ್ದ. ಅಲ್ಲಿವರೆಗೂ ಅವನು ಆ ಗಾತ್ರದ ಹನುಮಂತನ ಫೋಟೊ ನೋಡಿರಲಿಲ್ಲ. ನಂತರ ಬಾಯಲ್ಲಿ ನೀರು ತುಂಬಿಕೊಳ್ಳುವುದು, ಎರಡು ಕ್ಷಣ ಹನುಮಂತನ ಫೋಟೊ ನೊಡುವುದು, ಹೊರಗೆ ಹೋಗಿ ನೀರನ್ನು ಉಗುಳಿ ಬಂದು ಜೋರಾಗಿ ನಗುವುದು… ಎರಡು ಮೂರು ಸಲ ಹೀಗೆ ಮಾಡಿದ ಅವನನ್ನು ಅವರ ಅವ್ವ’ಏನಾಗಿದೆ ನಿನಗೆ?’ ಎಂದು ಜಬರಿಸಿದಳು.

‘ಅವ್ವಾ, ಹನುಮಂತ ಬಾಯಿ ಮುಕ್ಕಳಿಸಾಕ ನೀರು ಹಾಕ್ಕೊಂಡಾನ. ಆದ್ರ ಹೊಳ್ಳಿ ಅದನ್ನ ಹೊರಗ ಉಗಳಾಕ ಬರವಲ್ದು ಅಂವಂಗ… ಹ ಹ ಹಾ… ಅದಕ್ಕ ಅವ್ನ ಗಲ್ಲುಮ್ ಅಂತಾ ಉಬ್ಬ್ಯಾವ ನೋಡ್ಬೇ’ ಎಂದು ಅನಿಕೇತನ ತನ್ನ ‘ಸಂಶೋಧನೆ’ಯನ್ನು ಮಂಡಿಸಿದ.!!

ಪ್ರಶ್ನೆ ಕೇಳುವ, ಕೆಲವು ಪ್ರಶ್ನೆಗಳಿಗೆ ತಮ್ಮದೇ ಕಲ್ಪನೆಯ ಉತ್ತರ ಸೃಷ್ಟಿಸುವ ಮಕ್ಕಳು ಸಾಕಷ್ಟಿವೆ. ಆದರೆ, ದೇವರ ಬಗ್ಗೆ ಹೀಗೆಲ್ಲ ಪ್ರಶ್ನೆ ಕೇಳುವ, ವಿಡಂಬನೆ ಮಾಡುವ ಮಕ್ಕಳನ್ನೇ ಕೆಲವು ಪೋಷಕರು ಬೈದು ಗದರಿಸುತ್ತಾರೆ. ಅಂತಹ ಒಂದು ಮನಸ್ಥಿತಿಯನ್ನು ಮತೀಯವಾದಿ ಸಂಘಟನೆಗಳು ಬಿತ್ತಿವೆ.

ಆದರೆ, ಸಾವಿರಾರು ಅನಿಕೇತನರು ನಿನ್ನೆ ಗಣೇಶನ ಮುಂದೆಯೂ, ಅಲೈ ದೇವರ ಮುಂದೆಯೂ ಕುಣಿದಿ ಬಂದಿದ್ದಾರೆ. ನಮಗಂತೂ ಆಶಾವಾದ ಇದ್ದೇ ಇದೆ. ದೇವರು ಮತ್ತು ಮತದ ಹೆಸರಲ್ಲಿ ಈ ಸಮಾಜವನ್ನು ಅಷ್ಟು ಸುಲಭವಾಗಿ ಒಡೆಯಲಾಗುವುದಿಲ್ಲ ಎಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...