Homeಕರ್ನಾಟಕದೇವರ ಕುರಿತ 'ಅನಿಕೇತನ' ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

- Advertisement -
- Advertisement -

ನಮ್ಮ ನಾನುಗೌರಿ.ಕಾಂನ ಬರಹಗಾರಾದ ಪಿ.ಕೆ ಮಲ್ಲನಗೌಡರ್ ರವರು ದೇವರ ಕುರಿತು ತಮ್ಮ ಮಗ ‘ಅನಿಕೇತನ’ನ ಕಲ್ಪನೆಗಳನ್ನು ಬರೆದಿದ್ದಾರೆ. ಮಕ್ಕಳನ್ನು ಆರೋಗ್ಯಕರವಾಗಿ ಬೆಳೆಸುವುದರ ಕುರಿತು ನಾವೆಲ್ಲರೂ ಯೋಚಿಸಬೇಕಿದೆ.

ಗಣೇಶ ವಿಸರ್ಜನೆ ವೇಳೆ ರಸ್ತೆಯಲ್ಲಿ ಕುಣಿದ ಮಗ ಅಲೈ ದೇವರ ಮೆರವಣಿಗೆಯಲ್ಲೂ ಕುಣಿದು ಬಂದಿದ್ದಾನೆ. ದೇವರ ಕುರಿತಾಗಿ ಮಕ್ಕಳ ಕಲ್ಪನೆಗಳೇ ಸುಂದರ ಮತ್ತು ವಿಚಿತ್ರ.

ಕಳೆದ ವಾರ ಎಲ್ಲಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ 9ನೇ ದಿನದ ಗಣಪತಿಯ ವಿಸರ್ಜನೆ ಜೋರಾಗಿ ನಡೆದಿದೆ. ಜತೆಯಲ್ಲೇ ಅಲೈ (ಮೊಹರಂ) ದೇವರುಗಳ ಮೆರವಣಿಗೆ ಕೂಡ. ಇನ್ನೊಂದು ಕಡೆ ಕೋಲಾರದಲ್ಲಿ ಗಣೇಶ ವಿಸರ್ಜನೆಗೆ ಹೋದ ಆರು ಮಕ್ಕಳು ಜೀವ ತೆತ್ತಿವೆ…
ದೇವರ ಕುರಿತಾಗಿ ಮಕ್ಕಳಲ್ಲಿ ಸುಂದರ ಮತ್ತು ವಿಚಿತ್ರ ಕಲ್ಪನೆ ಮತ್ತು ಭಾವಗಳಿರುತ್ತವೆ. ಆದರೆ ಬರುಬರುತ್ತ ಉತ್ತರ ಕರ್ನಾಟಕದಲ್ಲಿ ಮತೀಯವಾದಿ ಸಂಘಟನೆಗಳ ಜಾಲ ಹೆಚ್ಚಿದಂತೆ ಗಣೇಶ ಉತ್ಸವ ಮತ್ತು ಮೊಹರಂ ಒಂದಕ್ಕೊಂದು ಸ್ಪರ್ಧಿ ಎನ್ನುವಂತೆ ಬಿಂಬಿಸಲಾಗಿದೆ. ಆದರೆ ಸಮಾಧಾನದ ಅಂಶವೆಂದರೆ ಜನ ಈ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಗಣೇಶನೂ ಬೇಕು ಮತ್ತು ಅಲೈ ದೇವರುಗಳೂ ಬೇಕು. ವಕ್ರತುಂಡ ಹಾಡುವ ಮಕ್ಕಳೇ ಅಲೈ ದೇವರನ್ನು ಇಟ್ಟಿರುವ ಮಸೀದಿ ಮುಂದೆ ತೋಡಿದ ಕುಣಿಯ ಸುತ್ತ ‘ಅಲೈ..ಅಲೈ’ ಎಂದು ಕುಣಿದು ಸಂಭ್ರಮಿಸುತ್ತವೆ.

ಮಕ್ಕಳು ದೇವರ ಬಗ್ಗೆ ಸೃಷ್ಟಿಸಿಕೊಳ್ಳುವ ಕಲ್ಪನೆಗಳು ಹೇಗಿರಬೇಕು? ಅದರಲ್ಲಿ ತಂದೆ ತಾಯಿ ಪಾತ್ರವೇನು? ತಜ್ಞರು ಈ ಬಗ್ಗೆ ಹೇಳಬೇಕು. ಆದರೆ, ದೇವರ ಕುರಿತೂ ಪ್ರಶ್ನಿಸುವ ಗುಣ ಅವರಲ್ಲಿ ಬಂದಾಗಲಷ್ಟೇ ಅವರ ಕಲ್ಪನಾ ಶಕ್ತಿ ಇನ್ನಷ್ಟು ಹರಿತವಾಗಬಹುದು.

ಮನುಷ್ಯನ ಮುಖ ಆನೆಗೆ: ಮಗನ ಬೊಂಬಾಟ್ ಕಲ್ಪನೆ
ಮಗ ಅನಿಕೇತನ ಆಗ ಒಂದೂವರೆ ವರ್ಷದವನೂ ಆಗಿರಲಿಲ್ಲ. ನನ್ನ ಹೆಂಡತಿ ನಾಕೈದು ಬಾರಿ ‘ಗಣೇಶನಿಗೆ ಆನೆ ಮುಖ ಹೇಗೆ ಬಂತು?’ ಎಂದು ಹೇಳುವ ಕತೆಯನ್ನು ಅವನಿಗೆ ಹೇಳುತ್ತ ಬಂದಿದ್ದಳು. ಆಗ ನಾವು ಬಾಡಿಗೆಗಿದ್ದ ಮನೆಯ ಓನರು ಪ್ರೊ. ಬಡಿಗೇರ್ ರಾಜ್ಯ ವಿಜ್ಞಾನ ಪರಿಷತ್‍ನ ಸದಸ್ಯರಾಗಿದ್ದವರು ಮತ್ತು ವೈಜ್ಞಾನಿಕ ಮನೋಭಾವದವರು. ನಾನು ಮತ್ತು ಅವರು ಹೇಳುತ್ತಿದ್ದ ಹೊಸ ಬಗೆಯ ಕತೆಗಳೇ ಅನಿಕೇತನನ ಮೇಲೆ ಪ್ರಭಾವ ಬೀರಿದ್ದವೋ ಏನೋ ಗೊತ್ತಿಲ್ಲ.

ಒಮ್ಮೆ ನಾವೆಲ್ಲರೂ ಕುಳಿತಾಗ ಪ್ರೊಫೆಸರ್ ಮಗ ಅಜಿತ್ (ಸಾಫ್ಟ್ ವೇರ್ ಇಂಜಿನಿಯರ್ ಮತ್ತು ವನ್ಯಜೀವಿ ಪ್ರಿಯ) ಅನಿಕೇತನನಿಗೆ ಕತೆಯೊಂದನ್ನು ಹೇಳಲು ಕೇಳಿದಾಗ ಗಣೇಶನ ಗಜಮುಖದ ಕತೆ ಹೇಳಿದ ಅನಿಕೇತನ ಜೋರಾಗಿ ನಗುತ್ತ, “ಅಜಿತ್ ಮಾಮಾ, ಅಲ್ಲಿ ಶಿವ ಗಣೇಶನ ರುಂಡ ಕಟ್ ಮಾಡ್ಯಾನಲ್ಲ, ಅದನ್ನ ತಗಂಡ್ ಹೋಗಿ ಆ ಆನಿಗೆ ಹಚ್ಚಿಬಿಡೋಣ ಬಾ.. ಪಾಪ ಆ ಆನಿ” ಎಂದುಬಿಟ್ಟ…
ಎಲ್ಲರಿಗೂ ಖುಷಿ ಮತ್ತರು ಆಶ್ಚರ್ಯ. ವನ್ಯಜೀವಿ ಪ್ರಿಯ ಅಜಿತ್ ಅಂತೂ ಅಂದಿನಿಂದ ಅನಿಕೇತನನ ಫ್ಯಾನೇ ಆಗಿಬಿಟ್ಟ.

ಹನುಮಂತನ ಗಲ್ಲಗಳೇಕೆ ಉಬ್ಬಿವೆ ಗೊತ್ತಾ?
ಒಂದಿನ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದೇವು. ಒಂದೂವರೆ ವರ್ಷದ ಅನಿಕೇತನ ಅವರ ಮನೆಯ ಹಾಲ್‍ನಲ್ಲಿ ಹಾಕಿದ್ದ ಹನುಮಂತನ ದೊಡ್ಡ ಫೋಟೊ ನೋಡುತ್ತಲೇ ಇದ್ದ. ಅಲ್ಲಿವರೆಗೂ ಅವನು ಆ ಗಾತ್ರದ ಹನುಮಂತನ ಫೋಟೊ ನೋಡಿರಲಿಲ್ಲ. ನಂತರ ಬಾಯಲ್ಲಿ ನೀರು ತುಂಬಿಕೊಳ್ಳುವುದು, ಎರಡು ಕ್ಷಣ ಹನುಮಂತನ ಫೋಟೊ ನೊಡುವುದು, ಹೊರಗೆ ಹೋಗಿ ನೀರನ್ನು ಉಗುಳಿ ಬಂದು ಜೋರಾಗಿ ನಗುವುದು… ಎರಡು ಮೂರು ಸಲ ಹೀಗೆ ಮಾಡಿದ ಅವನನ್ನು ಅವರ ಅವ್ವ’ಏನಾಗಿದೆ ನಿನಗೆ?’ ಎಂದು ಜಬರಿಸಿದಳು.

‘ಅವ್ವಾ, ಹನುಮಂತ ಬಾಯಿ ಮುಕ್ಕಳಿಸಾಕ ನೀರು ಹಾಕ್ಕೊಂಡಾನ. ಆದ್ರ ಹೊಳ್ಳಿ ಅದನ್ನ ಹೊರಗ ಉಗಳಾಕ ಬರವಲ್ದು ಅಂವಂಗ… ಹ ಹ ಹಾ… ಅದಕ್ಕ ಅವ್ನ ಗಲ್ಲುಮ್ ಅಂತಾ ಉಬ್ಬ್ಯಾವ ನೋಡ್ಬೇ’ ಎಂದು ಅನಿಕೇತನ ತನ್ನ ‘ಸಂಶೋಧನೆ’ಯನ್ನು ಮಂಡಿಸಿದ.!!

ಪ್ರಶ್ನೆ ಕೇಳುವ, ಕೆಲವು ಪ್ರಶ್ನೆಗಳಿಗೆ ತಮ್ಮದೇ ಕಲ್ಪನೆಯ ಉತ್ತರ ಸೃಷ್ಟಿಸುವ ಮಕ್ಕಳು ಸಾಕಷ್ಟಿವೆ. ಆದರೆ, ದೇವರ ಬಗ್ಗೆ ಹೀಗೆಲ್ಲ ಪ್ರಶ್ನೆ ಕೇಳುವ, ವಿಡಂಬನೆ ಮಾಡುವ ಮಕ್ಕಳನ್ನೇ ಕೆಲವು ಪೋಷಕರು ಬೈದು ಗದರಿಸುತ್ತಾರೆ. ಅಂತಹ ಒಂದು ಮನಸ್ಥಿತಿಯನ್ನು ಮತೀಯವಾದಿ ಸಂಘಟನೆಗಳು ಬಿತ್ತಿವೆ.

ಆದರೆ, ಸಾವಿರಾರು ಅನಿಕೇತನರು ನಿನ್ನೆ ಗಣೇಶನ ಮುಂದೆಯೂ, ಅಲೈ ದೇವರ ಮುಂದೆಯೂ ಕುಣಿದಿ ಬಂದಿದ್ದಾರೆ. ನಮಗಂತೂ ಆಶಾವಾದ ಇದ್ದೇ ಇದೆ. ದೇವರು ಮತ್ತು ಮತದ ಹೆಸರಲ್ಲಿ ಈ ಸಮಾಜವನ್ನು ಅಷ್ಟು ಸುಲಭವಾಗಿ ಒಡೆಯಲಾಗುವುದಿಲ್ಲ ಎಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...