Homeಕರ್ನಾಟಕದೇವರ ಕುರಿತ 'ಅನಿಕೇತನ' ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

- Advertisement -
- Advertisement -

ನಮ್ಮ ನಾನುಗೌರಿ.ಕಾಂನ ಬರಹಗಾರಾದ ಪಿ.ಕೆ ಮಲ್ಲನಗೌಡರ್ ರವರು ದೇವರ ಕುರಿತು ತಮ್ಮ ಮಗ ‘ಅನಿಕೇತನ’ನ ಕಲ್ಪನೆಗಳನ್ನು ಬರೆದಿದ್ದಾರೆ. ಮಕ್ಕಳನ್ನು ಆರೋಗ್ಯಕರವಾಗಿ ಬೆಳೆಸುವುದರ ಕುರಿತು ನಾವೆಲ್ಲರೂ ಯೋಚಿಸಬೇಕಿದೆ.

ಗಣೇಶ ವಿಸರ್ಜನೆ ವೇಳೆ ರಸ್ತೆಯಲ್ಲಿ ಕುಣಿದ ಮಗ ಅಲೈ ದೇವರ ಮೆರವಣಿಗೆಯಲ್ಲೂ ಕುಣಿದು ಬಂದಿದ್ದಾನೆ. ದೇವರ ಕುರಿತಾಗಿ ಮಕ್ಕಳ ಕಲ್ಪನೆಗಳೇ ಸುಂದರ ಮತ್ತು ವಿಚಿತ್ರ.

ಕಳೆದ ವಾರ ಎಲ್ಲಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ 9ನೇ ದಿನದ ಗಣಪತಿಯ ವಿಸರ್ಜನೆ ಜೋರಾಗಿ ನಡೆದಿದೆ. ಜತೆಯಲ್ಲೇ ಅಲೈ (ಮೊಹರಂ) ದೇವರುಗಳ ಮೆರವಣಿಗೆ ಕೂಡ. ಇನ್ನೊಂದು ಕಡೆ ಕೋಲಾರದಲ್ಲಿ ಗಣೇಶ ವಿಸರ್ಜನೆಗೆ ಹೋದ ಆರು ಮಕ್ಕಳು ಜೀವ ತೆತ್ತಿವೆ…
ದೇವರ ಕುರಿತಾಗಿ ಮಕ್ಕಳಲ್ಲಿ ಸುಂದರ ಮತ್ತು ವಿಚಿತ್ರ ಕಲ್ಪನೆ ಮತ್ತು ಭಾವಗಳಿರುತ್ತವೆ. ಆದರೆ ಬರುಬರುತ್ತ ಉತ್ತರ ಕರ್ನಾಟಕದಲ್ಲಿ ಮತೀಯವಾದಿ ಸಂಘಟನೆಗಳ ಜಾಲ ಹೆಚ್ಚಿದಂತೆ ಗಣೇಶ ಉತ್ಸವ ಮತ್ತು ಮೊಹರಂ ಒಂದಕ್ಕೊಂದು ಸ್ಪರ್ಧಿ ಎನ್ನುವಂತೆ ಬಿಂಬಿಸಲಾಗಿದೆ. ಆದರೆ ಸಮಾಧಾನದ ಅಂಶವೆಂದರೆ ಜನ ಈ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಗಣೇಶನೂ ಬೇಕು ಮತ್ತು ಅಲೈ ದೇವರುಗಳೂ ಬೇಕು. ವಕ್ರತುಂಡ ಹಾಡುವ ಮಕ್ಕಳೇ ಅಲೈ ದೇವರನ್ನು ಇಟ್ಟಿರುವ ಮಸೀದಿ ಮುಂದೆ ತೋಡಿದ ಕುಣಿಯ ಸುತ್ತ ‘ಅಲೈ..ಅಲೈ’ ಎಂದು ಕುಣಿದು ಸಂಭ್ರಮಿಸುತ್ತವೆ.

ಮಕ್ಕಳು ದೇವರ ಬಗ್ಗೆ ಸೃಷ್ಟಿಸಿಕೊಳ್ಳುವ ಕಲ್ಪನೆಗಳು ಹೇಗಿರಬೇಕು? ಅದರಲ್ಲಿ ತಂದೆ ತಾಯಿ ಪಾತ್ರವೇನು? ತಜ್ಞರು ಈ ಬಗ್ಗೆ ಹೇಳಬೇಕು. ಆದರೆ, ದೇವರ ಕುರಿತೂ ಪ್ರಶ್ನಿಸುವ ಗುಣ ಅವರಲ್ಲಿ ಬಂದಾಗಲಷ್ಟೇ ಅವರ ಕಲ್ಪನಾ ಶಕ್ತಿ ಇನ್ನಷ್ಟು ಹರಿತವಾಗಬಹುದು.

ಮನುಷ್ಯನ ಮುಖ ಆನೆಗೆ: ಮಗನ ಬೊಂಬಾಟ್ ಕಲ್ಪನೆ
ಮಗ ಅನಿಕೇತನ ಆಗ ಒಂದೂವರೆ ವರ್ಷದವನೂ ಆಗಿರಲಿಲ್ಲ. ನನ್ನ ಹೆಂಡತಿ ನಾಕೈದು ಬಾರಿ ‘ಗಣೇಶನಿಗೆ ಆನೆ ಮುಖ ಹೇಗೆ ಬಂತು?’ ಎಂದು ಹೇಳುವ ಕತೆಯನ್ನು ಅವನಿಗೆ ಹೇಳುತ್ತ ಬಂದಿದ್ದಳು. ಆಗ ನಾವು ಬಾಡಿಗೆಗಿದ್ದ ಮನೆಯ ಓನರು ಪ್ರೊ. ಬಡಿಗೇರ್ ರಾಜ್ಯ ವಿಜ್ಞಾನ ಪರಿಷತ್‍ನ ಸದಸ್ಯರಾಗಿದ್ದವರು ಮತ್ತು ವೈಜ್ಞಾನಿಕ ಮನೋಭಾವದವರು. ನಾನು ಮತ್ತು ಅವರು ಹೇಳುತ್ತಿದ್ದ ಹೊಸ ಬಗೆಯ ಕತೆಗಳೇ ಅನಿಕೇತನನ ಮೇಲೆ ಪ್ರಭಾವ ಬೀರಿದ್ದವೋ ಏನೋ ಗೊತ್ತಿಲ್ಲ.

ಒಮ್ಮೆ ನಾವೆಲ್ಲರೂ ಕುಳಿತಾಗ ಪ್ರೊಫೆಸರ್ ಮಗ ಅಜಿತ್ (ಸಾಫ್ಟ್ ವೇರ್ ಇಂಜಿನಿಯರ್ ಮತ್ತು ವನ್ಯಜೀವಿ ಪ್ರಿಯ) ಅನಿಕೇತನನಿಗೆ ಕತೆಯೊಂದನ್ನು ಹೇಳಲು ಕೇಳಿದಾಗ ಗಣೇಶನ ಗಜಮುಖದ ಕತೆ ಹೇಳಿದ ಅನಿಕೇತನ ಜೋರಾಗಿ ನಗುತ್ತ, “ಅಜಿತ್ ಮಾಮಾ, ಅಲ್ಲಿ ಶಿವ ಗಣೇಶನ ರುಂಡ ಕಟ್ ಮಾಡ್ಯಾನಲ್ಲ, ಅದನ್ನ ತಗಂಡ್ ಹೋಗಿ ಆ ಆನಿಗೆ ಹಚ್ಚಿಬಿಡೋಣ ಬಾ.. ಪಾಪ ಆ ಆನಿ” ಎಂದುಬಿಟ್ಟ…
ಎಲ್ಲರಿಗೂ ಖುಷಿ ಮತ್ತರು ಆಶ್ಚರ್ಯ. ವನ್ಯಜೀವಿ ಪ್ರಿಯ ಅಜಿತ್ ಅಂತೂ ಅಂದಿನಿಂದ ಅನಿಕೇತನನ ಫ್ಯಾನೇ ಆಗಿಬಿಟ್ಟ.

ಹನುಮಂತನ ಗಲ್ಲಗಳೇಕೆ ಉಬ್ಬಿವೆ ಗೊತ್ತಾ?
ಒಂದಿನ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದೇವು. ಒಂದೂವರೆ ವರ್ಷದ ಅನಿಕೇತನ ಅವರ ಮನೆಯ ಹಾಲ್‍ನಲ್ಲಿ ಹಾಕಿದ್ದ ಹನುಮಂತನ ದೊಡ್ಡ ಫೋಟೊ ನೋಡುತ್ತಲೇ ಇದ್ದ. ಅಲ್ಲಿವರೆಗೂ ಅವನು ಆ ಗಾತ್ರದ ಹನುಮಂತನ ಫೋಟೊ ನೋಡಿರಲಿಲ್ಲ. ನಂತರ ಬಾಯಲ್ಲಿ ನೀರು ತುಂಬಿಕೊಳ್ಳುವುದು, ಎರಡು ಕ್ಷಣ ಹನುಮಂತನ ಫೋಟೊ ನೊಡುವುದು, ಹೊರಗೆ ಹೋಗಿ ನೀರನ್ನು ಉಗುಳಿ ಬಂದು ಜೋರಾಗಿ ನಗುವುದು… ಎರಡು ಮೂರು ಸಲ ಹೀಗೆ ಮಾಡಿದ ಅವನನ್ನು ಅವರ ಅವ್ವ’ಏನಾಗಿದೆ ನಿನಗೆ?’ ಎಂದು ಜಬರಿಸಿದಳು.

‘ಅವ್ವಾ, ಹನುಮಂತ ಬಾಯಿ ಮುಕ್ಕಳಿಸಾಕ ನೀರು ಹಾಕ್ಕೊಂಡಾನ. ಆದ್ರ ಹೊಳ್ಳಿ ಅದನ್ನ ಹೊರಗ ಉಗಳಾಕ ಬರವಲ್ದು ಅಂವಂಗ… ಹ ಹ ಹಾ… ಅದಕ್ಕ ಅವ್ನ ಗಲ್ಲುಮ್ ಅಂತಾ ಉಬ್ಬ್ಯಾವ ನೋಡ್ಬೇ’ ಎಂದು ಅನಿಕೇತನ ತನ್ನ ‘ಸಂಶೋಧನೆ’ಯನ್ನು ಮಂಡಿಸಿದ.!!

ಪ್ರಶ್ನೆ ಕೇಳುವ, ಕೆಲವು ಪ್ರಶ್ನೆಗಳಿಗೆ ತಮ್ಮದೇ ಕಲ್ಪನೆಯ ಉತ್ತರ ಸೃಷ್ಟಿಸುವ ಮಕ್ಕಳು ಸಾಕಷ್ಟಿವೆ. ಆದರೆ, ದೇವರ ಬಗ್ಗೆ ಹೀಗೆಲ್ಲ ಪ್ರಶ್ನೆ ಕೇಳುವ, ವಿಡಂಬನೆ ಮಾಡುವ ಮಕ್ಕಳನ್ನೇ ಕೆಲವು ಪೋಷಕರು ಬೈದು ಗದರಿಸುತ್ತಾರೆ. ಅಂತಹ ಒಂದು ಮನಸ್ಥಿತಿಯನ್ನು ಮತೀಯವಾದಿ ಸಂಘಟನೆಗಳು ಬಿತ್ತಿವೆ.

ಆದರೆ, ಸಾವಿರಾರು ಅನಿಕೇತನರು ನಿನ್ನೆ ಗಣೇಶನ ಮುಂದೆಯೂ, ಅಲೈ ದೇವರ ಮುಂದೆಯೂ ಕುಣಿದಿ ಬಂದಿದ್ದಾರೆ. ನಮಗಂತೂ ಆಶಾವಾದ ಇದ್ದೇ ಇದೆ. ದೇವರು ಮತ್ತು ಮತದ ಹೆಸರಲ್ಲಿ ಈ ಸಮಾಜವನ್ನು ಅಷ್ಟು ಸುಲಭವಾಗಿ ಒಡೆಯಲಾಗುವುದಿಲ್ಲ ಎಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...