Homeಕರ್ನಾಟಕದೇವರ ಕುರಿತ 'ಅನಿಕೇತನ' ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

- Advertisement -
- Advertisement -

ನಮ್ಮ ನಾನುಗೌರಿ.ಕಾಂನ ಬರಹಗಾರಾದ ಪಿ.ಕೆ ಮಲ್ಲನಗೌಡರ್ ರವರು ದೇವರ ಕುರಿತು ತಮ್ಮ ಮಗ ‘ಅನಿಕೇತನ’ನ ಕಲ್ಪನೆಗಳನ್ನು ಬರೆದಿದ್ದಾರೆ. ಮಕ್ಕಳನ್ನು ಆರೋಗ್ಯಕರವಾಗಿ ಬೆಳೆಸುವುದರ ಕುರಿತು ನಾವೆಲ್ಲರೂ ಯೋಚಿಸಬೇಕಿದೆ.

ಗಣೇಶ ವಿಸರ್ಜನೆ ವೇಳೆ ರಸ್ತೆಯಲ್ಲಿ ಕುಣಿದ ಮಗ ಅಲೈ ದೇವರ ಮೆರವಣಿಗೆಯಲ್ಲೂ ಕುಣಿದು ಬಂದಿದ್ದಾನೆ. ದೇವರ ಕುರಿತಾಗಿ ಮಕ್ಕಳ ಕಲ್ಪನೆಗಳೇ ಸುಂದರ ಮತ್ತು ವಿಚಿತ್ರ.

ಕಳೆದ ವಾರ ಎಲ್ಲಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ 9ನೇ ದಿನದ ಗಣಪತಿಯ ವಿಸರ್ಜನೆ ಜೋರಾಗಿ ನಡೆದಿದೆ. ಜತೆಯಲ್ಲೇ ಅಲೈ (ಮೊಹರಂ) ದೇವರುಗಳ ಮೆರವಣಿಗೆ ಕೂಡ. ಇನ್ನೊಂದು ಕಡೆ ಕೋಲಾರದಲ್ಲಿ ಗಣೇಶ ವಿಸರ್ಜನೆಗೆ ಹೋದ ಆರು ಮಕ್ಕಳು ಜೀವ ತೆತ್ತಿವೆ…
ದೇವರ ಕುರಿತಾಗಿ ಮಕ್ಕಳಲ್ಲಿ ಸುಂದರ ಮತ್ತು ವಿಚಿತ್ರ ಕಲ್ಪನೆ ಮತ್ತು ಭಾವಗಳಿರುತ್ತವೆ. ಆದರೆ ಬರುಬರುತ್ತ ಉತ್ತರ ಕರ್ನಾಟಕದಲ್ಲಿ ಮತೀಯವಾದಿ ಸಂಘಟನೆಗಳ ಜಾಲ ಹೆಚ್ಚಿದಂತೆ ಗಣೇಶ ಉತ್ಸವ ಮತ್ತು ಮೊಹರಂ ಒಂದಕ್ಕೊಂದು ಸ್ಪರ್ಧಿ ಎನ್ನುವಂತೆ ಬಿಂಬಿಸಲಾಗಿದೆ. ಆದರೆ ಸಮಾಧಾನದ ಅಂಶವೆಂದರೆ ಜನ ಈ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಗಣೇಶನೂ ಬೇಕು ಮತ್ತು ಅಲೈ ದೇವರುಗಳೂ ಬೇಕು. ವಕ್ರತುಂಡ ಹಾಡುವ ಮಕ್ಕಳೇ ಅಲೈ ದೇವರನ್ನು ಇಟ್ಟಿರುವ ಮಸೀದಿ ಮುಂದೆ ತೋಡಿದ ಕುಣಿಯ ಸುತ್ತ ‘ಅಲೈ..ಅಲೈ’ ಎಂದು ಕುಣಿದು ಸಂಭ್ರಮಿಸುತ್ತವೆ.

ಮಕ್ಕಳು ದೇವರ ಬಗ್ಗೆ ಸೃಷ್ಟಿಸಿಕೊಳ್ಳುವ ಕಲ್ಪನೆಗಳು ಹೇಗಿರಬೇಕು? ಅದರಲ್ಲಿ ತಂದೆ ತಾಯಿ ಪಾತ್ರವೇನು? ತಜ್ಞರು ಈ ಬಗ್ಗೆ ಹೇಳಬೇಕು. ಆದರೆ, ದೇವರ ಕುರಿತೂ ಪ್ರಶ್ನಿಸುವ ಗುಣ ಅವರಲ್ಲಿ ಬಂದಾಗಲಷ್ಟೇ ಅವರ ಕಲ್ಪನಾ ಶಕ್ತಿ ಇನ್ನಷ್ಟು ಹರಿತವಾಗಬಹುದು.

ಮನುಷ್ಯನ ಮುಖ ಆನೆಗೆ: ಮಗನ ಬೊಂಬಾಟ್ ಕಲ್ಪನೆ
ಮಗ ಅನಿಕೇತನ ಆಗ ಒಂದೂವರೆ ವರ್ಷದವನೂ ಆಗಿರಲಿಲ್ಲ. ನನ್ನ ಹೆಂಡತಿ ನಾಕೈದು ಬಾರಿ ‘ಗಣೇಶನಿಗೆ ಆನೆ ಮುಖ ಹೇಗೆ ಬಂತು?’ ಎಂದು ಹೇಳುವ ಕತೆಯನ್ನು ಅವನಿಗೆ ಹೇಳುತ್ತ ಬಂದಿದ್ದಳು. ಆಗ ನಾವು ಬಾಡಿಗೆಗಿದ್ದ ಮನೆಯ ಓನರು ಪ್ರೊ. ಬಡಿಗೇರ್ ರಾಜ್ಯ ವಿಜ್ಞಾನ ಪರಿಷತ್‍ನ ಸದಸ್ಯರಾಗಿದ್ದವರು ಮತ್ತು ವೈಜ್ಞಾನಿಕ ಮನೋಭಾವದವರು. ನಾನು ಮತ್ತು ಅವರು ಹೇಳುತ್ತಿದ್ದ ಹೊಸ ಬಗೆಯ ಕತೆಗಳೇ ಅನಿಕೇತನನ ಮೇಲೆ ಪ್ರಭಾವ ಬೀರಿದ್ದವೋ ಏನೋ ಗೊತ್ತಿಲ್ಲ.

ಒಮ್ಮೆ ನಾವೆಲ್ಲರೂ ಕುಳಿತಾಗ ಪ್ರೊಫೆಸರ್ ಮಗ ಅಜಿತ್ (ಸಾಫ್ಟ್ ವೇರ್ ಇಂಜಿನಿಯರ್ ಮತ್ತು ವನ್ಯಜೀವಿ ಪ್ರಿಯ) ಅನಿಕೇತನನಿಗೆ ಕತೆಯೊಂದನ್ನು ಹೇಳಲು ಕೇಳಿದಾಗ ಗಣೇಶನ ಗಜಮುಖದ ಕತೆ ಹೇಳಿದ ಅನಿಕೇತನ ಜೋರಾಗಿ ನಗುತ್ತ, “ಅಜಿತ್ ಮಾಮಾ, ಅಲ್ಲಿ ಶಿವ ಗಣೇಶನ ರುಂಡ ಕಟ್ ಮಾಡ್ಯಾನಲ್ಲ, ಅದನ್ನ ತಗಂಡ್ ಹೋಗಿ ಆ ಆನಿಗೆ ಹಚ್ಚಿಬಿಡೋಣ ಬಾ.. ಪಾಪ ಆ ಆನಿ” ಎಂದುಬಿಟ್ಟ…
ಎಲ್ಲರಿಗೂ ಖುಷಿ ಮತ್ತರು ಆಶ್ಚರ್ಯ. ವನ್ಯಜೀವಿ ಪ್ರಿಯ ಅಜಿತ್ ಅಂತೂ ಅಂದಿನಿಂದ ಅನಿಕೇತನನ ಫ್ಯಾನೇ ಆಗಿಬಿಟ್ಟ.

ಹನುಮಂತನ ಗಲ್ಲಗಳೇಕೆ ಉಬ್ಬಿವೆ ಗೊತ್ತಾ?
ಒಂದಿನ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದೇವು. ಒಂದೂವರೆ ವರ್ಷದ ಅನಿಕೇತನ ಅವರ ಮನೆಯ ಹಾಲ್‍ನಲ್ಲಿ ಹಾಕಿದ್ದ ಹನುಮಂತನ ದೊಡ್ಡ ಫೋಟೊ ನೋಡುತ್ತಲೇ ಇದ್ದ. ಅಲ್ಲಿವರೆಗೂ ಅವನು ಆ ಗಾತ್ರದ ಹನುಮಂತನ ಫೋಟೊ ನೋಡಿರಲಿಲ್ಲ. ನಂತರ ಬಾಯಲ್ಲಿ ನೀರು ತುಂಬಿಕೊಳ್ಳುವುದು, ಎರಡು ಕ್ಷಣ ಹನುಮಂತನ ಫೋಟೊ ನೊಡುವುದು, ಹೊರಗೆ ಹೋಗಿ ನೀರನ್ನು ಉಗುಳಿ ಬಂದು ಜೋರಾಗಿ ನಗುವುದು… ಎರಡು ಮೂರು ಸಲ ಹೀಗೆ ಮಾಡಿದ ಅವನನ್ನು ಅವರ ಅವ್ವ’ಏನಾಗಿದೆ ನಿನಗೆ?’ ಎಂದು ಜಬರಿಸಿದಳು.

‘ಅವ್ವಾ, ಹನುಮಂತ ಬಾಯಿ ಮುಕ್ಕಳಿಸಾಕ ನೀರು ಹಾಕ್ಕೊಂಡಾನ. ಆದ್ರ ಹೊಳ್ಳಿ ಅದನ್ನ ಹೊರಗ ಉಗಳಾಕ ಬರವಲ್ದು ಅಂವಂಗ… ಹ ಹ ಹಾ… ಅದಕ್ಕ ಅವ್ನ ಗಲ್ಲುಮ್ ಅಂತಾ ಉಬ್ಬ್ಯಾವ ನೋಡ್ಬೇ’ ಎಂದು ಅನಿಕೇತನ ತನ್ನ ‘ಸಂಶೋಧನೆ’ಯನ್ನು ಮಂಡಿಸಿದ.!!

ಪ್ರಶ್ನೆ ಕೇಳುವ, ಕೆಲವು ಪ್ರಶ್ನೆಗಳಿಗೆ ತಮ್ಮದೇ ಕಲ್ಪನೆಯ ಉತ್ತರ ಸೃಷ್ಟಿಸುವ ಮಕ್ಕಳು ಸಾಕಷ್ಟಿವೆ. ಆದರೆ, ದೇವರ ಬಗ್ಗೆ ಹೀಗೆಲ್ಲ ಪ್ರಶ್ನೆ ಕೇಳುವ, ವಿಡಂಬನೆ ಮಾಡುವ ಮಕ್ಕಳನ್ನೇ ಕೆಲವು ಪೋಷಕರು ಬೈದು ಗದರಿಸುತ್ತಾರೆ. ಅಂತಹ ಒಂದು ಮನಸ್ಥಿತಿಯನ್ನು ಮತೀಯವಾದಿ ಸಂಘಟನೆಗಳು ಬಿತ್ತಿವೆ.

ಆದರೆ, ಸಾವಿರಾರು ಅನಿಕೇತನರು ನಿನ್ನೆ ಗಣೇಶನ ಮುಂದೆಯೂ, ಅಲೈ ದೇವರ ಮುಂದೆಯೂ ಕುಣಿದಿ ಬಂದಿದ್ದಾರೆ. ನಮಗಂತೂ ಆಶಾವಾದ ಇದ್ದೇ ಇದೆ. ದೇವರು ಮತ್ತು ಮತದ ಹೆಸರಲ್ಲಿ ಈ ಸಮಾಜವನ್ನು ಅಷ್ಟು ಸುಲಭವಾಗಿ ಒಡೆಯಲಾಗುವುದಿಲ್ಲ ಎಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...