Homeಕರ್ನಾಟಕದೇವರ ಕುರಿತ 'ಅನಿಕೇತನ' ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

ದೇವರ ಕುರಿತ ‘ಅನಿಕೇತನ’ ಕಲ್ಪನೆಗಳು : ಶಿವ ತುಂಡಾಗಿಸಿದ ಗಣೇಶನ ರುಂಡವ ಆನೆಗೆ ಅಂಟಿಸಿದರೆ?

- Advertisement -
- Advertisement -

ನಮ್ಮ ನಾನುಗೌರಿ.ಕಾಂನ ಬರಹಗಾರಾದ ಪಿ.ಕೆ ಮಲ್ಲನಗೌಡರ್ ರವರು ದೇವರ ಕುರಿತು ತಮ್ಮ ಮಗ ‘ಅನಿಕೇತನ’ನ ಕಲ್ಪನೆಗಳನ್ನು ಬರೆದಿದ್ದಾರೆ. ಮಕ್ಕಳನ್ನು ಆರೋಗ್ಯಕರವಾಗಿ ಬೆಳೆಸುವುದರ ಕುರಿತು ನಾವೆಲ್ಲರೂ ಯೋಚಿಸಬೇಕಿದೆ.

ಗಣೇಶ ವಿಸರ್ಜನೆ ವೇಳೆ ರಸ್ತೆಯಲ್ಲಿ ಕುಣಿದ ಮಗ ಅಲೈ ದೇವರ ಮೆರವಣಿಗೆಯಲ್ಲೂ ಕುಣಿದು ಬಂದಿದ್ದಾನೆ. ದೇವರ ಕುರಿತಾಗಿ ಮಕ್ಕಳ ಕಲ್ಪನೆಗಳೇ ಸುಂದರ ಮತ್ತು ವಿಚಿತ್ರ.

ಕಳೆದ ವಾರ ಎಲ್ಲಡೆ ಅದರಲ್ಲೂ ಉತ್ತರ ಕರ್ನಾಟಕದಲ್ಲಿ 9ನೇ ದಿನದ ಗಣಪತಿಯ ವಿಸರ್ಜನೆ ಜೋರಾಗಿ ನಡೆದಿದೆ. ಜತೆಯಲ್ಲೇ ಅಲೈ (ಮೊಹರಂ) ದೇವರುಗಳ ಮೆರವಣಿಗೆ ಕೂಡ. ಇನ್ನೊಂದು ಕಡೆ ಕೋಲಾರದಲ್ಲಿ ಗಣೇಶ ವಿಸರ್ಜನೆಗೆ ಹೋದ ಆರು ಮಕ್ಕಳು ಜೀವ ತೆತ್ತಿವೆ…
ದೇವರ ಕುರಿತಾಗಿ ಮಕ್ಕಳಲ್ಲಿ ಸುಂದರ ಮತ್ತು ವಿಚಿತ್ರ ಕಲ್ಪನೆ ಮತ್ತು ಭಾವಗಳಿರುತ್ತವೆ. ಆದರೆ ಬರುಬರುತ್ತ ಉತ್ತರ ಕರ್ನಾಟಕದಲ್ಲಿ ಮತೀಯವಾದಿ ಸಂಘಟನೆಗಳ ಜಾಲ ಹೆಚ್ಚಿದಂತೆ ಗಣೇಶ ಉತ್ಸವ ಮತ್ತು ಮೊಹರಂ ಒಂದಕ್ಕೊಂದು ಸ್ಪರ್ಧಿ ಎನ್ನುವಂತೆ ಬಿಂಬಿಸಲಾಗಿದೆ. ಆದರೆ ಸಮಾಧಾನದ ಅಂಶವೆಂದರೆ ಜನ ಈ ಬಗ್ಗೆ ಬಹಳ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಗಣೇಶನೂ ಬೇಕು ಮತ್ತು ಅಲೈ ದೇವರುಗಳೂ ಬೇಕು. ವಕ್ರತುಂಡ ಹಾಡುವ ಮಕ್ಕಳೇ ಅಲೈ ದೇವರನ್ನು ಇಟ್ಟಿರುವ ಮಸೀದಿ ಮುಂದೆ ತೋಡಿದ ಕುಣಿಯ ಸುತ್ತ ‘ಅಲೈ..ಅಲೈ’ ಎಂದು ಕುಣಿದು ಸಂಭ್ರಮಿಸುತ್ತವೆ.

ಮಕ್ಕಳು ದೇವರ ಬಗ್ಗೆ ಸೃಷ್ಟಿಸಿಕೊಳ್ಳುವ ಕಲ್ಪನೆಗಳು ಹೇಗಿರಬೇಕು? ಅದರಲ್ಲಿ ತಂದೆ ತಾಯಿ ಪಾತ್ರವೇನು? ತಜ್ಞರು ಈ ಬಗ್ಗೆ ಹೇಳಬೇಕು. ಆದರೆ, ದೇವರ ಕುರಿತೂ ಪ್ರಶ್ನಿಸುವ ಗುಣ ಅವರಲ್ಲಿ ಬಂದಾಗಲಷ್ಟೇ ಅವರ ಕಲ್ಪನಾ ಶಕ್ತಿ ಇನ್ನಷ್ಟು ಹರಿತವಾಗಬಹುದು.

ಮನುಷ್ಯನ ಮುಖ ಆನೆಗೆ: ಮಗನ ಬೊಂಬಾಟ್ ಕಲ್ಪನೆ
ಮಗ ಅನಿಕೇತನ ಆಗ ಒಂದೂವರೆ ವರ್ಷದವನೂ ಆಗಿರಲಿಲ್ಲ. ನನ್ನ ಹೆಂಡತಿ ನಾಕೈದು ಬಾರಿ ‘ಗಣೇಶನಿಗೆ ಆನೆ ಮುಖ ಹೇಗೆ ಬಂತು?’ ಎಂದು ಹೇಳುವ ಕತೆಯನ್ನು ಅವನಿಗೆ ಹೇಳುತ್ತ ಬಂದಿದ್ದಳು. ಆಗ ನಾವು ಬಾಡಿಗೆಗಿದ್ದ ಮನೆಯ ಓನರು ಪ್ರೊ. ಬಡಿಗೇರ್ ರಾಜ್ಯ ವಿಜ್ಞಾನ ಪರಿಷತ್‍ನ ಸದಸ್ಯರಾಗಿದ್ದವರು ಮತ್ತು ವೈಜ್ಞಾನಿಕ ಮನೋಭಾವದವರು. ನಾನು ಮತ್ತು ಅವರು ಹೇಳುತ್ತಿದ್ದ ಹೊಸ ಬಗೆಯ ಕತೆಗಳೇ ಅನಿಕೇತನನ ಮೇಲೆ ಪ್ರಭಾವ ಬೀರಿದ್ದವೋ ಏನೋ ಗೊತ್ತಿಲ್ಲ.

ಒಮ್ಮೆ ನಾವೆಲ್ಲರೂ ಕುಳಿತಾಗ ಪ್ರೊಫೆಸರ್ ಮಗ ಅಜಿತ್ (ಸಾಫ್ಟ್ ವೇರ್ ಇಂಜಿನಿಯರ್ ಮತ್ತು ವನ್ಯಜೀವಿ ಪ್ರಿಯ) ಅನಿಕೇತನನಿಗೆ ಕತೆಯೊಂದನ್ನು ಹೇಳಲು ಕೇಳಿದಾಗ ಗಣೇಶನ ಗಜಮುಖದ ಕತೆ ಹೇಳಿದ ಅನಿಕೇತನ ಜೋರಾಗಿ ನಗುತ್ತ, “ಅಜಿತ್ ಮಾಮಾ, ಅಲ್ಲಿ ಶಿವ ಗಣೇಶನ ರುಂಡ ಕಟ್ ಮಾಡ್ಯಾನಲ್ಲ, ಅದನ್ನ ತಗಂಡ್ ಹೋಗಿ ಆ ಆನಿಗೆ ಹಚ್ಚಿಬಿಡೋಣ ಬಾ.. ಪಾಪ ಆ ಆನಿ” ಎಂದುಬಿಟ್ಟ…
ಎಲ್ಲರಿಗೂ ಖುಷಿ ಮತ್ತರು ಆಶ್ಚರ್ಯ. ವನ್ಯಜೀವಿ ಪ್ರಿಯ ಅಜಿತ್ ಅಂತೂ ಅಂದಿನಿಂದ ಅನಿಕೇತನನ ಫ್ಯಾನೇ ಆಗಿಬಿಟ್ಟ.

ಹನುಮಂತನ ಗಲ್ಲಗಳೇಕೆ ಉಬ್ಬಿವೆ ಗೊತ್ತಾ?
ಒಂದಿನ ನಮ್ಮ ಸಂಬಂಧಿಕರ ಮನೆಗೆ ಹೋಗಿದ್ದೇವು. ಒಂದೂವರೆ ವರ್ಷದ ಅನಿಕೇತನ ಅವರ ಮನೆಯ ಹಾಲ್‍ನಲ್ಲಿ ಹಾಕಿದ್ದ ಹನುಮಂತನ ದೊಡ್ಡ ಫೋಟೊ ನೋಡುತ್ತಲೇ ಇದ್ದ. ಅಲ್ಲಿವರೆಗೂ ಅವನು ಆ ಗಾತ್ರದ ಹನುಮಂತನ ಫೋಟೊ ನೋಡಿರಲಿಲ್ಲ. ನಂತರ ಬಾಯಲ್ಲಿ ನೀರು ತುಂಬಿಕೊಳ್ಳುವುದು, ಎರಡು ಕ್ಷಣ ಹನುಮಂತನ ಫೋಟೊ ನೊಡುವುದು, ಹೊರಗೆ ಹೋಗಿ ನೀರನ್ನು ಉಗುಳಿ ಬಂದು ಜೋರಾಗಿ ನಗುವುದು… ಎರಡು ಮೂರು ಸಲ ಹೀಗೆ ಮಾಡಿದ ಅವನನ್ನು ಅವರ ಅವ್ವ’ಏನಾಗಿದೆ ನಿನಗೆ?’ ಎಂದು ಜಬರಿಸಿದಳು.

‘ಅವ್ವಾ, ಹನುಮಂತ ಬಾಯಿ ಮುಕ್ಕಳಿಸಾಕ ನೀರು ಹಾಕ್ಕೊಂಡಾನ. ಆದ್ರ ಹೊಳ್ಳಿ ಅದನ್ನ ಹೊರಗ ಉಗಳಾಕ ಬರವಲ್ದು ಅಂವಂಗ… ಹ ಹ ಹಾ… ಅದಕ್ಕ ಅವ್ನ ಗಲ್ಲುಮ್ ಅಂತಾ ಉಬ್ಬ್ಯಾವ ನೋಡ್ಬೇ’ ಎಂದು ಅನಿಕೇತನ ತನ್ನ ‘ಸಂಶೋಧನೆ’ಯನ್ನು ಮಂಡಿಸಿದ.!!

ಪ್ರಶ್ನೆ ಕೇಳುವ, ಕೆಲವು ಪ್ರಶ್ನೆಗಳಿಗೆ ತಮ್ಮದೇ ಕಲ್ಪನೆಯ ಉತ್ತರ ಸೃಷ್ಟಿಸುವ ಮಕ್ಕಳು ಸಾಕಷ್ಟಿವೆ. ಆದರೆ, ದೇವರ ಬಗ್ಗೆ ಹೀಗೆಲ್ಲ ಪ್ರಶ್ನೆ ಕೇಳುವ, ವಿಡಂಬನೆ ಮಾಡುವ ಮಕ್ಕಳನ್ನೇ ಕೆಲವು ಪೋಷಕರು ಬೈದು ಗದರಿಸುತ್ತಾರೆ. ಅಂತಹ ಒಂದು ಮನಸ್ಥಿತಿಯನ್ನು ಮತೀಯವಾದಿ ಸಂಘಟನೆಗಳು ಬಿತ್ತಿವೆ.

ಆದರೆ, ಸಾವಿರಾರು ಅನಿಕೇತನರು ನಿನ್ನೆ ಗಣೇಶನ ಮುಂದೆಯೂ, ಅಲೈ ದೇವರ ಮುಂದೆಯೂ ಕುಣಿದಿ ಬಂದಿದ್ದಾರೆ. ನಮಗಂತೂ ಆಶಾವಾದ ಇದ್ದೇ ಇದೆ. ದೇವರು ಮತ್ತು ಮತದ ಹೆಸರಲ್ಲಿ ಈ ಸಮಾಜವನ್ನು ಅಷ್ಟು ಸುಲಭವಾಗಿ ಒಡೆಯಲಾಗುವುದಿಲ್ಲ ಎಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...