Homeಮುಖಪುಟರಿಲಯನ್ಸ್ ಪವರ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ: ಕಾರಣ?

ರಿಲಯನ್ಸ್ ಪವರ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜೀನಾಮೆ: ಕಾರಣ?

- Advertisement -
- Advertisement -

ನವ ದೆಹಲಿ: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಯವರು ಶುಕ್ರವಾರ ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್‌ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾರುಕಟ್ಟೆ ನಿಯಂತ್ರಣ ಸಂಸ್ಥೆಯಾದ ಸೆಬಿ (ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ) ಆದೇಶ ನೀಡಿದೆ. ಯಾವುದೇ ಸಾರ್ವಜನಿಕ ಶೇರುಗಳ ಕಂಪನಿಯೊಂದಿಗೆ ಸಹಭಾಗಿತ್ವವನ್ನು ಅನಿಲ್‌ ಅಂಬಾನಿಗೆ ಸೆಬಿ ನಿರ್ಬಂಧಿಸಿದೆ.

“ಸೆಬಿ ಮಧ್ಯಂತರ ಆದೇಶದ ಪ್ರಕಾರ ನಾನ್-ಎಕ್ಸಿಕ್ಯೂಟಿವ್ ಡೈರೆಕ್ಟರ್ ಅನಿಲ್ ಡಿ ಅಂಬಾನಿಯವರು ರಿಲಯನ್ಸ್ ಪವರ್ ಮಂಡಳಿಯಿಂದ ಕೆಳಗಿಳಿಯಲಿದ್ದಾರೆ” ಎಂದು ರಿಲಯನ್ಸ್ ಪವರ್ ತಿಳಿಸಿದೆ.

ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್, ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಮತ್ತು ಇತರ ಮೂವರನ್ನು ಸೆಬಿಯು ಕಂಪನಿಯಿಂದ ಹಣವನ್ನು ಕಸಿದುಕೊಂಡ ಆರೋಪದ ಮೇಲೆ ಕಳೆದ ಫೆಬ್ರವರಿಯಲ್ಲಿ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ನಿರ್ಬಂಧಿಸಿತು.

ಸೆಬಿಯಲ್ಲಿ ನೋಂದಾಯಿತ ಯಾವುದೇ ಮಧ್ಯವರ್ತಿ ಕಂಪನಿ, ಅಥವಾ ಲಿಸ್ಟಿಂಗ್‌ನಲ್ಲಿರುವ ಸಾರ್ವಜನಿಕ ಕಂಪನಿಯಲ್ಲಿ ಹಾಲಿ ನಿರ್ದೇಶಕರು/ಪ್ರವರ್ತಕರಾಗಿ ಮುಂದಿನ ಆದೇಶದವರೆಗೆ ಮುಂದುವರಿಯಬಾರದು ಎಂದು ಅಂಬಾನಿ ಮತ್ತು ಇತರ ಮೂವರಿಗೆ ಸೆಬಿ ತಿಳಿಸಿತ್ತು.

ಸೆಬಿ ಆದೇಶ ಹೊರಬಿದ್ದ ಬಳಿಕ, “ಆರ್‌ಪವರ್ ಮತ್ತು ಆರ್‌ಇನ್‌ಫ್ರಾ ಮಂಡಳಿಗಳಲ್ಲಿ ಐದು ವರ್ಷಗಳ ಅವಧಿಗೆ ಸ್ವತಂತ್ರ ನಿರ್ದೇಶಕರ ಹುದ್ದೆಯಲ್ಲಿ ರಾಹುಲ್ ಸರಿನ್ ಅವರನ್ನು ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಲಾಗಿದೆ” ಎಂದು ಎರಡು ರಿಲಯನ್ಸ್ ಗ್ರೂಪ್ ಕಂಪನಿಗಳು ತಿಳಿಸಿವೆ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಅನುಮೋದನೆ ಮೇರೆಗೆ ನೇಮಕ ಮಾಡಲಾಗಿದೆ ಕಂಪನಿಗಳು ತಿಳಿಸಿವೆ.

ಈ ವಿಷಯವನ್ನು ಶೀಘ್ರವಾಗಿ ಪರಿಹರಿಸಲು ಮಂಡಳಿಗಳು ಎದುರು ನೋಡುತ್ತಿವೆ. ಎಲ್ಲಾ ಪಾಲುದಾರರ ಹಿತಾಸಕ್ತಿಯಿಂದ ಅಂಬಾನಿಯವರ ದೂರದೃಷ್ಟಿ ಮತ್ತು ನಾಯಕತ್ವವನ್ನು ಒದಗಿಸಲು ಮಂಡಳಿಗಳು ಅಂಬಾನಿ ಅವರನ್ನು ಮತ್ತೆ ಆಹ್ವಾನಿಸುತ್ತವೆ ಎಂದು ಕಂಪನಿಗಳು ಹೇಳಿವೆ.


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...